ಧರ್ಮದ ಬಗ್ಗೆ ಕೇಳಿದ್ದಕ್ಕೆ ಕೋರ್ಟ್ ನಲ್ಲಿ 'ನಾನು ಭಾರತೀಯ' ಎಂದ ಸಲ್ಲು
1998ರಲ್ಲಿ 'ಹಮ್ ಸಾಥ್ ಸಾಥ್ ಹೈ' ಎಂಬ ಬಾಲಿವುಡ್ ಚಿತ್ರದ ಶೂಟಿಂಗ್ ಗಾಗಿ ಜೋಧ್ ಪುರಕ್ಕೆ ಬಂದಿದ್ದ ಸಲ್ಮಾನ್ ಖಾನ್, ಅಲ್ಲಿ ಕೃಷ್ಣ ಮೃಗಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ. ಜೋಧ್ ಪುರ ನ್ಯಾಯಾಲಯದಲ್ಲಿ ಅವರ ವಿರುದ್ಧ ವಿಚಾರಣೆ ನಡೆಯ
ಜೋಧ್ ಪುರ, ಜನವರಿ 27: 'ನಾನು ಭಾರತೀಯ' - ಇದು ಬಾಲಿವುಡ್ ನಟ ಸಲ್ಮಾನ್ ಖಾನ್, ಶುಕ್ರವಾರ ಜೋಧ್ ಪುರ ಕೋರ್ಟ್ ನಲ್ಲಿ 'ನಿಮ್ಮ ಧರ್ಮ ಯಾವುದು' ಅಂತ ವಕೀಲರು ಕೇಳಿದ್ದ ಪ್ರಶ್ನೆಗೆ ನೀಡಿದ ಸಿನ್ಮೀ ಸ್ಟೈಲ್ ಉತ್ತರ.
1998ರಲ್ಲಿ ಹಮ್ ಸಾಥ್ ಸಾಥ್ ಹೈ ಎಂಬ ಬಾಲಿವುಡ್ ಚಿತ್ರದ ಶೂಟಿಂಗ್ ಗಾಗಿ ಜೋಧ್ ಪುರಕ್ಕೆ ಬಂದಿದ್ದ ಸಲ್ಮಾನ್ ಖಾನ್, ಅಲ್ಲಿ ಕೃಷ್ಣ ಮೃಗಗಳನ್ನು ಬೇಟಿಯಾಡಿದ ಆರೋಪ ಎದುರಿಸುತ್ತಿದ್ದಾರೆ. ಜೋಧ್ ಪುರ ನ್ಯಾಯಾಲಯದಲ್ಲಿ ಅವರ ವಿರುದ್ಧ ವಿಚಾರಣೆ ನಡೆಯುತ್ತಿದ್ದು ಶುಕ್ರವಾರ ಅವರು ವಿಚಾರಣೆಗೆ ಹಾಜರಾಗಿದ್ದರು.

ಅದು ನ್ಯಾಯಾಲಯ. ನಿಯಮಗಳಂತೆ, ವಿಚಾರಣೆಗಾಗಿ ಕಟಕಟೆಗೆ ಆಗಮಿಸುವವರ ಪರಿಚಯ ಮಾಡಿಕೊಳ್ಳಬೇಕಾತ್ತದೆ. ಆ ನಿಟ್ಟಿನಲ್ಲಿ ತಮ್ಮನ್ನು ವಿಚಾರಣೆಗೊಳಪಡಿಸುವ ವಕೀಲರು, ನಿಮ್ಮ ಹೆಸರೇನು, ಯಾವ ಊರು, ಏನು ಮಾಡುತ್ತಿದ್ದೀರಿ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳುತ್ತಾರೆ. ಹಾಗೆಯೇ, ನಿಮ್ಮ ಧರ್ಮ ಯಾವುದು ಎಂಬ ಪ್ರಶ್ನೆಯೂ ಬರುತ್ತದೆ. ಅದು ತಪ್ಪಲ್ಲ.
ಆದರೆ, ನಟ ಸಲ್ಮಾನ್ ಖಾನ್ ಮಾತ್ರ ಪಕ್ಕಾ ಸಿನಿಮಾ ಶೈಲಿಯಲ್ಲಿ ಧರ್ಮ ಯಾವುದು ಅನ್ನೋ ಪ್ರಶ್ನೆಗೆ ನಾನು ಭಾರತೀಯ ಎಂದಿದ್ದಾರೆ. ಇದಕ್ಕೆ ನ್ಯಾಯಾಲಯದಲ್ಲಿ ಅಪಾರ ಸಿಳ್ಳೆ, ಚಪ್ಪಾಳೆ ಬರುತ್ತವೆ ಎಂದು ತಿಳಿದಿದ್ದರೋ ಏನೋ, ಅದು ಅವರಿಗೇ ಗೊತ್ತು. ಆದರೆ, ಅವರ ಉತ್ತರ ಆ ಕೋರ್ಟ್ ಕೊಠಡಿಯಲ್ಲಿ ಪ್ರತಿಧ್ವನಿಸಿದೆಯಷ್ಟೇ. ಹೆಚ್ಚೇನೂ ಪರಿಣಾಮ ಬೀರಲಿಲ್ಲ. ಆನಂತರ ಮುಂದುವರಿದ ವಿಚಾರಣೆಯಲ್ಲಿ ಸಲ್ಮಾನ್ ಅವರಿಗೆ ಬರೋಬ್ಬರಿ 65 ಪ್ರಶ್ನೆಗಳನ್ನು ಪ್ರಾಸಿಕ್ಯೂಷನ್ ವಕೀಲರು ಕೇಳಿದ್ದಾರೆ.
ಅಂದಹಾಗೆ, ಸಲ್ಲು ಭಾಯ್ ಧರ್ಮದ ವಿಚಾರ ಬಂದಾಗ ನಾನು ಭಾರತೀಯ ಅಂತ ಹೇಳೋದು ಇದೇ ಮೊದಲೇನಲ್ಲ. ಕಳೆದ ವರ್ಷವೂ ಈ ಪ್ರಕರಣ ರಾಜಸ್ಥಾನ ಹೈಕೋರ್ಟ್ ನಲ್ಲಿದ್ದಾಗಲೂ ವಿಚಾರಣೆ ಎದುರಿಸಲು ಬಂದಿದ್ದ ಸಲ್ಮು ಮಿಯಾ, ಹೀಗೇ ಉತ್ತರಿಸಿದ್ದರು.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications