ನನಗೂ ಮ್ಯಾಗಿಗೂ ಯಾವುದೇ ಸಂಬಂಧವಿಲ್ಲ : ಬಚ್ಚನ್
ಮುಂಬೈ, ಜೂ. 03 : ಸದ್ಯಕ್ಕೆ ನನಗೂ ಮ್ಯಾಗಿ ಜಾಹೀರಾತಿಗೂ ಯಾವುದೇ ಸಂಬಂಧವಿಲ್ಲ. ಎರಡು ವರ್ಷಗಳ ಹಿಂದೆಯೇ ಮ್ಯಾಗಿ ಉತ್ಪನ್ನವನ್ನು ಬೆಂಬಲಿಸುವುದನ್ನು ಬಿಟ್ಟಿದ್ದೇನೆ ಎಂದು ವಿವಾದದ ಕೇಂದ್ರಬಿಂದುವಾಗಿರುವ ಹಿಂದಿ ಚಿತ್ರನಟ ಅಮಿತಾಭ್ ಬಚ್ಚನ್ ಮೊದಲ ಬಾರಿಗೆ ಸ್ಪಷ್ಟನೆ ನೀಡಿದ್ದಾರೆ.
ಎರಡು ವರ್ಷಗಳ ಹಿಂದೆ ಮ್ಯಾಗಿ ಜಾಹೀರಾತನ್ನು ಎಂಡಾರ್ಸ್ ಮಾಡುವುದನ್ನು ಬಿಟ್ಟಿದ್ದು ಮಾತ್ರವಲ್ಲ, ಇನ್ನೆಂದೂ ಅದರ ಪ್ರಚಾರದಲ್ಲಿ ಕಾಣಿಸಿಕೊಳ್ಳಬಾರದೆಂದು ನಿರ್ಧರಿಸಿದ್ದೆ ಎಂದು ಬುಧವಾರ ಸ್ಪಷ್ಟೀಕರಣ ನೀಡಿದ್ದಾರೆ.
ಮ್ಯಾಗಿಯಲ್ಲಿ ಅತ್ಯಧಿಕ ಪ್ರಮಾಣದ ಮೊನೊಸೋಡಿಯಂ ಗ್ಲುಟಮೇಟ್ ಮತ್ತು ಸೀಸ ಇರುವುದು ಪತ್ತೆಯಾಗಿರುವುದು ಹಲವಾರು ಪರೀಕ್ಷೆಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮ್ಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಪ್ರೀತಿ ಜಿಂಟಾ ವಿರುದ್ಧ ಹರ್ಯಾಣ ಕೋರ್ಟ್ ನೋಟೀಸ್ ಜಾರಿಗೊಳಿಸಿದೆ. [ಮ್ಯಾಗಿ ಕೆಟ್ಟದ್ದು ಎಂಬ ವಿವಾದದ ಬಗ್ಗೆ ಟ್ವಿಟ್ಟಿಗರು ಏನನ್ನುತ್ತಾರೆ?]

ಕಂಪನಿಯೊಂದಿಗೆ ಮಾಡಿಕೊಳ್ಳುವ ಒಪ್ಪಂದದಲ್ಲಿ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ನಟರನ್ನು ರಕ್ಷಿಸುವ ನಿಯಮವಿದ್ದರೂ, ಇನ್ನು ಮುಂದೆ ಯಾವುದೇ ಉತ್ಪನ್ನವನ್ನು ಬೆಂಬಲಿಸಿ ಅದರ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವಾಗ ಎಚ್ಚರದಿಂದಿರುತ್ತೇನೆ ಎಂದು ಅಮಿತಾಭ್ ಪ್ರತಿಕ್ರಿಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮ್ಯಾಗಿ ನಿರಾಳ : ಉತ್ತರಪ್ರದೇಶದಲ್ಲಿ ಮ್ಯಾಗಿ ಆಹಾರ ಸುರಕ್ಷತಾ ಸ್ಟಾಂಡರ್ಡನ್ನು ಉಲ್ಲಂಘಿಸಿದೆ ಎಂಬ ವರದಿ ಬಂದಿದ್ದರೂ ಮಹಾರಾಷ್ಟ್ರದಲ್ಲಿ ಮ್ಯಾಗಿ ಸುರಕ್ಷಿತವಾಗಿದೆ. ಅಲ್ಲಿ ನಡೆಸಿರುವ ಪರೀಕ್ಷೆಯಲ್ಲಿ ಆರೋಗ್ಯ ಕೆಡಿಸುವ ಅಂಶಗಳು ಮ್ಯಾಗಿಯಲ್ಲಿ ಪತ್ತೆಯಾಗಿಲ್ಲ ಎಂದು ಕಂಡುಬಂದಿರುವುದು ನೆಸ್ಲೆ ಕಂಪನಿಗೆ ನಿರಾಳತೆ ತಂದಿದೆ.
ಈ ನಡುವೆ ಗೋವಾದಲ್ಲಿಯೂ ಮ್ಯಾಗಿ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮ್ಯಾಗಿಯಲ್ಲಿ ಸೀಸವಾಗಲಿ, ಮೊನೊಸೋಡಿಯಂ ಗ್ಲುಟಮೇಟ್ ಅತ್ಯಧಿಕ ಪ್ರಮಾಣದಲ್ಲಿಲ್ಲ ಎಂದು ಆಹಾರ ಮತ್ತು ಔಷಧಿ ಆಡಳಿತಾಧಿಕಾರಿ ಪ್ರಮಾಣಪತ್ರ ನೀಡಿದ್ದಾರೆ. ಕೇರಳದಲ್ಲಿಯೂ ಮ್ಯಾಗಿ ಪರೀಕ್ಷೆ ಪಾಸ್ ಮಾಡಿದೆ.
ಕರ್ನಾಟಕದಲ್ಲಿ ಫಲಿತಾಂಶಕ್ಕೆ ಕಾದಿರುವ ಮ್ಯಾಗಿ : ಕರ್ನಾಟಕದಲ್ಲಿ ಕೂಡ ಆರೋಗ್ಯ ಸಚಿವ ಡಾ. ಯುಟಿ ಖಾದರ್ ಅವರು ಮ್ಯಾಗಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ನುಡಿದಿದ್ದಾರೆ. ಅಂಕ ಏರುಪೇರಿನಿಂದ ಕಂಗಾಲಾಗಿರುವ ಪಿಯುಸಿ ವಿದ್ಯಾರ್ಥಿಗಳಂತೆ ಮ್ಯಾಗಿ ಕೂಡ ಇನ್ನೆರಡು ದಿನ ಫಲಿತಾಂಶಕ್ಕಾಗಿ ಕಾಯಬೇಕಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications