ನಿಮಗೆ ಬೇಕಾದ್ದು ಬರೆದುಕೊಳ್ಳಿ : ಸಿಬಿಐ ನಿರ್ದೇಶಕ ಸಿನ್ಹಾ
ನವದೆಹಲಿ, ಡಿ.2: "ನಾನೇನು ಒಳ್ಳೆ ಕೆಲಸ ಮಾಡಿಲ್ಲ, ನಿವೃತ್ತಿ ಬಗ್ಗೆ ನಾನೇನು ಹೇಳಲಾರೆ, ನಿಮಗೆ ಬೇಕಾದ್ದು ಬರೆದುಕೊಳ್ಳಿ" ಎಂದು ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ. ಸಿನ್ಹಾ ಅವರ ನಿರ್ದೇಶಕ ಸ್ಥಾನದ ಅವಧಿ ಮಂಗಳವಾರಕ್ಕೆ ಅಂತ್ಯಗೊಳ್ಳಲಿದೆ.
ತಮ್ಮ ಅಧಿಕಾರ ಅವಧಿಯಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಈಡಾಗಿ ಮುಜುಗರಕ್ಕೆ ಒಳಗಾಗಿದ್ದ ಸಿಬಿಐ ನಿರ್ದೇಶಕ ರಂಜಿತ್ಸಿನ್ಹಾ ಅವರ ಸ್ಥಾನಕ್ಕೆ ಹೊಸ ನಿರ್ದೇಶಕರ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ.
ದೇಶದ ಅತ್ಯಂತ ಬಲಿಷ್ಠ ಹಾಗೂ ದಕ್ಷ ಸಂಸ್ಥೆಯೆಂದೇ ಗುರುತಿಸಿಕೊಂಡಿರುವ ಸಿಬಿಐ ನಿರ್ದೇಶಕರಾದ ಮೇಲೂ ವಿವಾದದಿಂದ ದೂರ ಉಳಿದಿರಲಿಲ್ಲ. 2ಜಿ ಸ್ಪೆಕ್ಟ್ರಮ್ ಹಂಚಿಕೆ ಹಗರಣದಲ್ಲಿ ಭಾಗಿಯಾದ ಕೆಲವು ಆರೋಪಿಗಳು ಅವರ ಮನೆಗೆ ಭೇಟಿ ನೀಡಿರುವುದು ಸಂದರ್ಶನದ ಪುಸ್ತಕದಲ್ಲಿ ದಾಖಲಾಗಿತ್ತು. [ಗಾಲಿ ರೆಡ್ಡಿ ಆಪ್ತ, ಸಿಬಿಐ ನಿರ್ದೇಶಕರ ಭೇಟಿ ಏಕೆ?]
2ಜಿ ತನಿಖೆಯಿಂದ ನೀವು ದೂರ ಉಳಿಯಬೇಕೆಂದು ಸಿನ್ಹಾಗೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದರಿಂದ ಸಿನ್ಹಾ ಅವರು ತೀವ್ರ ಮುಜುಗರಕ್ಕೀಡಾಗಿದ್ದರು.

ಸಿಎಜಿ ವಿನೋದ್ ರೈ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿಸಿ ಪಾರಖ್ ಅವರಂತೆ ನೀವು ಕೂಡಾ ನಿವೃತ್ತಿ ನಂತರ ಪುಸ್ತಕ ಬರೆಯುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿನ್ಹಾ, 'ನಾನು ಏನು ಮಾಡಬೇಕು ಅದನ್ನು ಮಾಡುತ್ತೇನೆ, ಅವರನ್ನು ಹಿಂಬಾಲಿಸುವ ಅಗತ್ಯವಿಲ್ಲ' ಎಂದಿದ್ದಾರೆ.
1974ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿ ಸೇರ್ಪಡೆಗೊಂಡ ರಂಜಿತ್ಸಿನ್ಹಾ ಐಟಿಬಿಪಿ, ರೈಲ್ವೆ ಬೋರ್ಡ್ ಸೇರಿದಂತೆ ದೇಶದ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು. ಸಾರ್ವಜನಿಕ ವಲಯದ ಬ್ಯಾಂಕಿನ ಚೇರ್ಮನ್, ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಸೆನ್ಸಾರ್ ಬೋರ್ಡ್ ನ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು. [ಕರ್ನಾಟಕ ಕೇಡರ್ ಅಧಿಕಾರಿ ಕೈಗೆ 2ಜಿ ಹಗರಣ]
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆರೋಪಿಯಾಗಿದ್ದ ಮೇವು ಹಗರಣದ ತನಿಖೆ ನಡೆಸಿದ್ದ ಸಿನ್ಹಾ ಅವರು ಕೊನೆಗೆ ಲಾಲೂ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ತನಿಖೆಯನ್ನು ದಿಕ್ಕು ತಪ್ಪಿಸಿದರೆಂಬ ಆರೋಪವನ್ನು ಹೊರಬೇಕಾಯಿತು. ಸುಮಾರು 38 ವರ್ಷಗಳ ಕರ್ತವ್ಯ ಪಾಲನೆ ನಂತರ ಸಿನ್ಹಾ ಅವರು ನಿವೃತ್ತಿಯಾಗುತ್ತಿದ್ದಾರೆ. (ಪಿಟಿಐ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications