ನಾನು ರಾಜಕೀಯ ಬಿಟ್ಟಿಲ್ಲ, ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಬಿಜೆಪಿ ವಿರುದ್ಧ ಉಮಾ ಭಾರತಿ ಸಮರ?
ಭೋಪಾಲ್, ಸೆಪ್ಟೆಂಬರ್ 13: ಬಿಜೆಪಿ ನಾಯಕತ್ವದ ಜೊತೆ ಮುನಿಸಿಕೊಂಡಿರುವ ಹಿರಿಯ ನಾಯಕಿ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. 'ನಾನು ರಾಜಕೀಯವನ್ನು ತೊರೆದಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ' ಎಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ.
ಮಧ್ಯಪ್ರದೇಶದ ಬುಂದೇಲ್ಖಂಡ್ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 'ನಾನು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದೆ. ಆ ಹಿನ್ನೆಲೆಯಲ್ಲಿ ಐದು ವರ್ಷಗಳ ವಿರಾಮವನ್ನು ತೆಗೆದುಕೊಂಡಿದ್ದೇನೆ. ಈಗ ಮತ್ತೆ ಚುನಾವಣಾ ರಾಜಕಾರಣಕ್ಕೆ ಬರುತ್ತೇನೆ' ಎಂದು ಹೇಳಿದ್ದಾರೆ.

'ದೀರ್ಘ ಕಾಲದಿಂದ ಕೆಲಸ ಮಾಡುತ್ತಿದ್ದ ಕಾರಣ (ಕಳೆದ ಬಾರಿ) ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದೆ. ಐದು ವರ್ಷಗಳ ಕಾಲ ವಿರಾಮ ತೆಗೆದುಕೊಳ್ಳಲು ಯೋಚಿಸಿದೆ. ನಾನು ರಾಜಕೀಯ ಬಿಟ್ಟಿದ್ದೇನೆ ಎಂಬುದಾಗಿ ಜನ ಭಾವಿಸಿದ್ದಾರೆ. ಆದರೆ ನಾನು ರಾಜಕೀಯ ಬಿಟ್ಟಿಲ್ಲ' ಎಂದು ತಿಳಿಸಿದ್ದಾರೆ.
ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ ಮತ್ತು ಲಲಿತ್ಪುರ-ಸಿಂಗ್ರೌಲಿ ರೈಲು ಮಾರ್ಗ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದ ಉಮಾಭಾರತಿ, ತಾನು ರಾಜಕೀಯದಲ್ಲಿರುವುದರಿಂದ ಈ ಯೋಜನೆಗಳು ಸಾಕಾರಗೊಂಡವು ಎಂದು ಹೇಳಿದ್ದಾರೆ.
'ನನಗೆ 75 ವರ್ಷವಾಗಲಿ ಅಥವಾ 85 ವರ್ಷವಾಗಲಿ ನಾನು ಸಕ್ರಿಯ ರಾಜಕಾರಣದಲ್ಲಿಯೇ ಉಳಿದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನಗೆ ರಾಜಕೀಯ ಎಂದರೆ ತುಂಬಾ ಇಷ್ಟವಾಗುತ್ತದೆ' ಎಂದು ತಿಳಿಸಿದ್ದಾರೆ.
ಈ ವರ್ಷ ನವೆಂಬರ್ನಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಿಗದಿಯಾಗಿದೆ. ಈಗ ಉಮಾಭಾರತಿ ನೀಡಿರುವ ಹೇಳಿಕೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಉಮಾಭಾರತಿ ಅವರು ಕೊನೆಯ ಬಾರಿಗೆ 2014 ರಲ್ಲಿ ಝಾನ್ಸಿ (ಉತ್ತರ ಪ್ರದೇಶ) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಗೆದ್ದ ನಂತರ ಕೇಂದ್ರದಲ್ಲಿ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.
ಈ ತಿಂಗಳ ಆರಂಭದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆರಂಭಿಸಿರುವ 'ಜನ ಆಶೀರ್ವಾದ್ ಯಾತ್ರೆ'ಗೆ ಉಮಾ ಭಾರತಿಯನ್ನು ಆಹ್ವಾನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕತ್ವದೊಂದಿಗೆ ಉಮಾಭಾರತಿ ಮುನಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಒಂದು ವೇಳೆ, ಉಮಾಭಾರತಿ ಅವರು ಸಕ್ರಿಯ ರಾಜಕಾರಣಕ್ಕೆ ಮರಳಿದರೆ, ಬಿಜೆಪಿ ವಿರುದ್ಧ ಸಮರ ಸಾರುವರೇ ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ.
ಮಧ್ಯಪ್ರದೇಶದ ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಬಿಜೆಪಿ ವಿರೋಧ ಅಲೆ ಇದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರುವುದಾಗಿ ಸಮೀಕ್ಷೆಗಳು ತಿಳಿಸಿವೆ. ಒಂದು ವೇಳೆ, ಉಮಾಭಾರತಿ ಅವರು ಬಿಜೆಪಿ ವಿರುದ್ಧ ಬಂಡಾಯವೆದ್ದರೆ, ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವುದು ನಿಶ್ಚಿತವಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications