ನನ್ನನ್ನು ತುಳಿಯಲು ಬಿಜೆಪಿಯಿಂದ ಸಿಬಿಐ ದುರ್ಬಳಕೆ - ಲಾಲು
ಪಾಟ್ನಾ, ಜುಲೈ 7: ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮ್ಮ ಮುಂದೆ ಶರಣಾಗಬೇಕು ಎಂಬ ಕಾರಣಕ್ಕೆ ಕೇಸರಿ ಪಾಳಯ ಮತ್ತು ಅದರ ಮಾತೃ ಸಂಸ್ಥೆ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಹರಿಹಾಯ್ದಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು ನರೇಂದ್ರ ಮೋದಿ ಸರಕಾರದ ವಿರುದ್ಧ ನಾನು ವಿಪಕ್ಷಗಳನ್ನು ಒಗ್ಗೂಡಿಸುತ್ತಿದ್ದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

"ಇದೆಲ್ಲಾ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ. ನಮ್ಮನ್ನು ತುಳಿದು ನಾವು ಬಿಜೆಪಿ ಮುಂದೆ ಮಂಡಿಯೂರಬೇಕು ಎಂಬುದು ಅವರ ಉದ್ದೇಶವಾಗಿದೆ," ಎಂದು ಲಾಲೂ ಹೇಳಿದ್ದಾರೆ.
ಇನ್ನು ಇಂದು ಮುಂಜಾನೆ ಲಾಲೂ ಪ್ರಸಾದ್ ಯಾದವ್ ಹಾಗೂ ಮತ್ತಿತರರರ ಮೇಲೆ ಸಿಬಿಐ ಕೇಸನ್ನು ದಾಖಲಿಸಿತ್ತು. 2006ರಲ್ಲಿ ರೈಲು ಮಂತ್ರಿಯಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಹೋಟೆಲ್ ಟೆಂಡರ್ ವಿಷಯದಲ್ಲಿ ನಡೆಸಲಾಗಿದ್ದ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲೂ ಪ್ರಸಾದ್ ಯಾದವ್, ಅವರ ಪತ್ನಿ ರಾಬ್ಡಿ ದೇವಿ, ಅವರಿಬ್ಬರ ಮಗ ತೇಜಸ್ವಿ, ಭಾರತೀಯ ರೈಲ್ವೆಯ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನ ಮಾಜಿ ನಿರ್ದೇಶಕ ಪಿಕೆ ಗೋಯೆಲ್, ಲಾಲೂ ಅವರ ಅತ್ಯಾಪ್ತ ಪ್ರೇಮ್ ಚಂದ್ ಗುಪ್ತಾ ಅವರ ಪತ್ನಿ ಸರಳಾ ಗುಪ್ತಾ ಅವರ ಮೇಲೆ ಕೇಸನ್ನು ಹಾಕಲಾಗಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications