ನನ್ನನ್ನು ಕ್ಷಮಿಸಿ: ತಾಯಿಯ ಮರಣದ ನಂತರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡದಿರುವುದಕ್ಕಾಗಿ ಮೋದಿ ಕ್ಷಮೆಯಾಚನೆ
ಗಾಂಧಿನಗರ, ಡಿಸೆಂಬರ್ 30: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಶ್ಚಿಮ ಬಂಗಾಳದ ಅಭಿವೃದ್ಧಿ ಯೋಜನೆ ಉದ್ಘಾಟನೆಯಲ್ಲಿ ವರ್ಚುವಲ್ ಆಗಿ ಪಾಲ್ಗೊಂಡರು.
ಈ ಕಾರ್ಯಕ್ರಮಗಳಲ್ಲಿ ಭೌತಿಕವಾಗಿ ಹಾಜರಾಗದಿದ್ದಕ್ಕಾಗಿ ಕ್ಷಮೆಯಾಚಿಸಿದರು.
'ಇಂದು ನಾನು ನಿಮ್ಮ ನಡುವೆ ಇರಬೇಕಿತ್ತು. ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ನಾನು ಬರಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ನಾನು ನಿಮ್ಮ ಮತ್ತು ಪಶ್ಚಿಮ ಬಂಗಾಳಕ್ಕೆ ಕ್ಷಮೆಯಾಚಿಸುತ್ತೇನೆ' ಎಂದು ಪ್ರಧಾನಿ ಮೋದಿ ತಿಳಿಸಿದರು.
ತಮ್ಮ ತಾಯಿ ಹೀರಾಬೆನ್ ಅವರ ಅಂತಿಮ ವಿಧಿಗಳನ್ನು ನೆರವೇರಿಸಿದ ನಂತರ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಶುಕ್ರವಾರ ಬೆಳಗ್ಗೆ ಅವರ ತಾಯಿ ಹೀರಾಬೆನ್ ಸಾವನ್ನಪ್ಪಿದರು.

ಶುಕ್ರವಾರ ಬೆಳಗ್ಗೆ ಅಹಮದಾಬಾದ್ಗೆ ಪ್ರಧಾನಿ ಮೋದಿ ತೆರಳಿದರು.
ಯಾವುದೇ ಕಾರ್ಯಕ್ರಮಗಳನ್ನು ರದ್ದುಗೊಳಿಸುವುದಿಲ್ಲ ಎಂದು ಅವರ ಕಚೇರಿ ಘೋಷಿಸಿತು. ಎಲ್ಲಾ ನಿಗದಿತ ಕೆಲಸಗಳನ್ನು ಮುಂದುವರಿಸುವಂತೆ ಜನರನ್ನು ಮೋದಿ ಒತ್ತಾಯಿಸಿದರು. ಇದು ಹೀರಾಬೆನ್ಗೆ ಸಂದ ಗೌರವವಾಗಿದೆ ಎಂಬುದಾಗಿ ಅವರು ಹೇಳಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಭಾಷಣದಲ್ಲಿ ಹೀರಾಬೆನ್ ಅವರ ಸಾವಿನ ಬಗ್ಗೆ ಪ್ರಸ್ತಾಪಿಸಿದರು. ಪ್ರಧಾನಿ ಮೋದಿ ಅವರು ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರಿಂದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುವಂತೆ ವಿನಂತಿಸಿದರು.
'ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ಇಂದು ದುಃಖದ ದಿನ... ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇವರು ನಿಮಗೆ ಶಕ್ತಿಯನ್ನು ನೀಡಲಿ ಮತ್ತು ಆಶೀರ್ವದಿಸಲಿ. ಇದರಿಂದ ನಿಮ್ಮ ಕ್ರಿಯೆ ಮತ್ತು ನಿಮ್ಮ ಚಟುವಟಿಕೆಗಳಿಂದ ನಿಮ್ಮ ತಾಯಿಯ ಪ್ರೀತಿಯನ್ನು ಮುಂದುವರಿಸಬಹುದು' ಎಂದು ಮಮತಾ ಹೇಳಿದರು.

'ನೀವು ಉತ್ಸಾಹದಿಂದ ಇಲ್ಲಿಗೆ ತಲುಪಿದ್ದಕ್ಕಾಗಿ ನಾನು ನಿಮಗೆ ನನ್ನ ಕೃತಜ್ಞತೆಯನ್ನು ತಿಳಿಸುತ್ತೇನೆ' ಎಂದು ಮಮತಾ ತಿಳಿಸಿದರು.
'ನೀವು ವಿಶ್ರಾಂತಿಯನ್ನು ತೆಗೆದುಕೊಳ್ಳಿ. ನಿಮ್ಮ ತಾಯಿ, ನಮ್ಮ ತಾಯಿ ಇದ್ದ ಹಾಗೆ. ನಾನು ನನ್ನ ತಾಯಿಯನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ' ಎಂದು ಮಮತಾ ಹೇಳಿದರು.
ಹೌರಾ-ನ್ಯೂ ಜಲ್ಪೈಗುರಿ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಕೋಲ್ಕತ್ತಾ ಮೆಟ್ರೋದ ನೇರಳೆ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಸ್ವಾತಂತ್ರ್ಯ ಚಳವಳಿಗೆ ಬಂಗಾಳದ ಕೊಡುಗೆಯನ್ನು ನೆನಪಿಸಿಕೊಂಡರು. ಡಿಸೆಂಬರ್ 30 ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹೇಳಿದರು.
'ವಂದೇ ಮಾತರಂ ಕರೆ ನೀಡಿದ ಭೂಮಿ ಈಗ ವಂದೇ ಭಾರತ್ ಧ್ವಜವನ್ನು ನೋಡುತ್ತಿದೆ' ಎಂದು ಪ್ರಧಾನಿ ಮೋದಿ ತಿಳಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications