ತೆರಿಗೆ ವಂಚಕರ ಪ್ಯಾನ್, ಎಲ್ ಪಿಜಿ ಸಬ್ಸಿಡಿ ಕಡಿತ
ನವದೆಹಲಿ, ಜೂನ್ 21: ಆದಾಯ ತೆರಿಗೆ ಇಲಾಖೆಯಿಂದ ತೆರಿಗೆ ವಂಚಕರು ಎಂದು ಗುರುತಿಸಲ್ಪಟ್ಟ ವ್ಯಕ್ತಿಗಳ ಪ್ಯಾನ್, ಎಲ್ ಪಿಜಿ ಸಬ್ಸಿಡಿಗಳನ್ನು ರದ್ದುಗೊಳಿಸಲು ಕೇಂದ್ರ ತೆರಿಗೆ ಇಲಾಖೆ ಮುಂದಾಗಿದೆ.
ವಾರ್ಷಿಕ ಆದಾಯ ತೆರಿಗೆ ಸರಿಯಾಗಿ ಪಾವತಿಸದಿದ್ದಲ್ಲಿ ಪಾನ್ ಕಾರ್ಡ್ ಹಾಗೂ ಅಡುಗೆ ಅನಿಲ ಸಿಲಿಂಡರ್ ಮೇಲೆ ಸಿಗುವ ಸಬ್ಸಿಡಿ ಕಳೆದುಕೊಳ್ಳಬೇಕಾಗುತ್ತದೆ. ಈ ಮೂಲಕ ತೆರಿಗೆ ವಂಚಿಸುವವರ ವಿರುದ್ಧ ಕಠಿಣ ಕ್ರಮಕ್ಕೆಇಲಾಖೆ ಮುಂದಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದಲೇ ಈ ನೀತಿ ಜಾರಿಗೆ ಬರುವ ಸಾಧ್ಯತೆಯಿದೆ.[ಪಿಎಫ್ ವಿಥ್ ಡ್ರಾ ಮಾಡಿದರೆ ಟಿಡಿಎಸ್ ಕಟ್ಟಬೇಕಾಗಿಲ್ಲ!]
ಆದಾಯ ತೆರಿಗೆ ವಿಭಾಗದ ಸಿದ್ಧಪಡಿಸಿರುವ ಕಾಗದಪತ್ರಗಳ ಅನ್ವಯ ತೆರಿಗೆ ಕಟ್ಟದೆ ವಂಚಿಸುವವರಿಗೆ ಸಾರ್ವಜನಿಕ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಸಾಲ ಸೌಲಭ್ಯ ಕೂಡ ದೊರೆಯುವುದಿಲ್ಲ ಎಂದಿದೆ.

ತೆರಿಗೆ ವಂಚಿಸುವವರ ಎಲ್ಪಿಜಿ ಸಬ್ಸಿಡಿ ಹಣ ನೇರವಾಗಿ ಖಾತೆಗೆ ಜಮಾ ಆಗದಂತೆ ತಡೆಗಟ್ಟಲು ಸೂಚಿಸಲಾಗಿದೆ. ಚರಾಸ್ತಿ, ಸ್ಥಿರಾಸ್ತಿ ಖರೀದಿ ಅಥವಾ ವ್ಯವಹಾರದಲ್ಲಿ ಪಾನ್ ಕಾರ್ಡ್ ಸಂಖ್ಯೆ ನಮೂದಿಸುವುದು ಕಡ್ಡಾಯ, ತೆರಿಗೆ ಕಟ್ಟದಿದ್ದರೆ ಪಾನ್ ಕಾರ್ಡ್ ಕೂಡ ರದ್ದುಗೊಳಿಸುವ ನಿರ್ಧಾರಕ್ಕೆ ತೆರಿಗೆ ಇಲಾಖೆ ಮುಂದಾಗಿದೆ.[ಆದಾಯ ತೆರಿಗೆದಾರರ ಗಮನಕ್ಕೆ ಈ 2 ಸುದ್ದಿಗಳು]
ಕ್ರೆಡಿಟ್ ಕಾರ್ಡ್ ಹಾಗೂ ಸಾಲ ಪಡೆಯಲು ಸಿಬಿಲ್ Credit Information Bureau Limited ರೇಟಿಂಗ್ ಅತ್ಯವಶ್ಯ. ಒಂದು ವೇಳೆ ಸಾಲ ಪಡೆದು, ತೆರಿಗೆ ವಂಚಿಸಲು ಯತ್ನಿಸಿದರೆ ಸಿಬಿಲ್ ನಿಂದ ಮಾಹಿತಿ ಪಡೆದು ಐಟಿ ಇಲಾಖೆ ನಿಮ್ಮ ಸಂಪೂರ್ಣ ಆರ್ಥಿಕ ವ್ಯವಹಾರ, ಎಷ್ಟು ತೆರಿಗೆ ಕಟ್ಟಬೇಕು ಎಂಬ ವಿವರವನ್ನು ಪ್ರಕಟಿಸಬಹುದು.[ಬಜೆಟ್ 2016: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕವೇನು?]
20ಕೋಟಿ ರು ಗೂ ಅಧಿಕ ಮೊತ್ತದ ಸಾಲ ಬಾಕಿ ಇರಿಸಿಕೊಂಡವರ ಹೆಸರು ಹಾಗೂ ವಿವರಗಳನ್ನು ದೇಶದ ಪ್ರಮುಖ ದಿನಪತ್ರಿಕೆ ಹಾಗೂ ವೆಬ್ ಸೈಟ್ ಗಳನ್ನು ಪ್ರಕಟಿಸಿ ಛೀಮಾರಿ ಹಾಕುವ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಸದ್ಯಕ್ಕೆ 67ಕ್ಕೂ ಅಧಿಕ ಮಂದಿಯ ಹೆಸರು ಪ್ರಕಟಿಸಲಾಗಿದೆ (ಪಿಟಿಐ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications