ನಾನು ಬಿಜೆಪಿ ಸೇರುವುದಿಲ್ಲ ಎಂದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ
ನವದೆಹಲಿ, ಮೇ 31: ರಾಜ್ಯಸಭಾ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಬಿಜೆಪಿ ಸೇರುತ್ತಾರೆ ಎಂಬ ವರದಿಗಳು ಬಂದಿದ್ದವು. ಈ ಸುದ್ದಿಗಳನ್ನು ಸ್ವತಃ ಅವರೇ ತಳ್ಳಿಹಾಕಿದ್ದು, ಇಂತಹ ವರದಿ ರಾಜಕೀಯ ಕಿಡಿಗೇಡಿತನ ಎಂದು ದೂಷಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಪಟ್ಟಿಯಲ್ಲಿ ಗಲಾಂನಬಿ ಅಜಾದ್ ಮತ್ತು ಆನಂದ್ ಶರ್ಮಾ ಹೆಸರು ಇರಲಿಲ್ಲ. ಇದರಿಂದಾಗಿ ಇಬ್ಬರು ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆನಂದ್ ಶರ್ಮಾ, "ನಾನು ಬಿಜೆಪಿ ಸೇರುವ ಸುದ್ದಿ ರಾಜಕೀಯ ಕಿಡಿಗೇಡಿತನವಾಗಿದೆ" ಎಂದರು.

ಇಬ್ಬರೂ ಕೇಂದ್ರ ಸಚಿವರಾಗಿದ್ದರು ಮತ್ತು ಈ ಇಬ್ಬರೂ ಕಾಂಗ್ರೆಸ್ನೊಳಗಿನ ಜಿ-23 ಅಥವಾ ಬಂಡಾಯ ಗುಂಪಿನ ಸದಸ್ಯರು. ಇಬ್ಬರು ನಾಯಕರು ಎರಡು ವರ್ಷಗಳ ಹಿಂದೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷದಲ್ಲಿ ಪ್ರಮುಖ ಸುಧಾರಣೆಗಳು ಮತ್ತು ನಾಯಕತ್ವದ ಕೂಲಂಕುಷ ಪರೀಕ್ಷೆಗೆ ಕರೆ ನೀಡಿದ್ದರು.
ಕಪಿಲ್ ಸಿಬಲ್ ಕಳೆದ ವಾರ ಕಾಂಗ್ರೆಸ್ ತೊರೆದು ಅಖಿಲೇಶ್ ಯಾದವ್ರ ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನಿರೀಕ್ಷಿತ ಘೋಷಣೆ ಮಾಡುವವರೆಗೂ 23 ಭಿನ್ನಮತೀಯರ ಪಟ್ಟಿಯಲ್ಲಿದ್ದರು.
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 10 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಸಂಜೆ ಬಿಡುಗಡೆ ಮಾಡಿತ್ತು. ಪಕ್ಷದ ಆಳ್ವಿಕೆಯ ರಾಜ್ಯಗಳಾದ ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಎಲ್ಲಾ ನಾಮನಿರ್ದೇಶಿತರು ಹೊರಗಿನವರು. ಈ ಚುನಾವಣೆಗೆ ಒಳಪಡುವ ರಾಜ್ಯಗಳಿಂದ ಸ್ಥಾನಗಳನ್ನು ಸ್ಥಳೀಯ ನಾಯಕರಿಗೆ ನೀಡಬೇಕು ಎಂಬ ಬೇಡಿಕೆ ನಿರಾಕರಿಸಲಾಗಿತ್ತು. ರಾಜಸ್ಥಾನದಿಂದ ಮುಕುಲ್ ವಾಸ್ನಿಕ್ ಮತ್ತು ಮಧ್ಯಪ್ರದೇಶದಿಂದ ವಿವೇಕ್ ತಂಖಾ ಕಣಕ್ಕಿಳಿಯಲಿರುವುದರಿಂದ ಜಿ-23 ನಾಯಕರಿಬ್ಬರನ್ನು ಸೇರಿಸಿಕೊಳ್ಳಲಾಗಿತ್ತು.

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ತಮಿಳುನಾಡಿನಿಂದ ಪಕ್ಷದ ರಾಜ್ಯಸಭಾ ಅಭ್ಯರ್ಥಿಯಾಗಲಿದ್ದಾರೆ ಮತ್ತು ಜೈರಾಮ್ ರಮೇಶ್ ಕರ್ನಾಟಕದಿಂದ ಕಣಕ್ಕಿಳಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರವನ್ನು ಪ್ರತಿನಿಧಿಸಿದ್ದ ಚಿದಂಬರಂ ಈಗ ತಮ್ಮ ತವರು ರಾಜ್ಯಕ್ಕೆ ತೆರಳಿದ್ದು, ಅಲ್ಲಿಂದ ಅವರ ಪುತ್ರ ಕಾರ್ತಿ ಲೋಕಸಭಾ ಸದಸ್ಯರಾಗಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications