ಪ್ರಿಯಾಂಕ ಗಾಂಧಿ ಪತಿ ರಾಬರ್ಟ್ ವಾದ್ರಾ ಮಾಡಿದ 'ಶಪಥ'
ನವದೆಹಲಿ, ಮಾರ್ಚ್ 6: ನನ್ನ ಪತ್ನಿಯನ್ನು ಸುರಕ್ಷಿತವಾಗಿಡಿ ಎಂದು ಇತ್ತೀಚೆಗಷ್ಟೇ ಭಾವನಾತ್ಮಕ ಪತ್ರ ಬರೆದಿದ್ದ ಪ್ರಿಯಾಂಕ ಗಾಂಧಿ ಪತಿ, ರಾಬರ್ಟ್ ವಾದ್ರಾ, ಈಗ ದೇಶದ ಜನತೆಗೆ ವಚನವೊಂದನ್ನು ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆ ಎದುರಿಸುತ್ತಿರುವ ವಾದ್ರಾ, ಈ ದೇಶದಲ್ಲಿ ಅದೆಷ್ಟೋ ವಾಣಿಜ್ಯೋದ್ಯಮಿಗಳು ಲೂಟಿ ಮಾಡಿ ಪಲಾಯನಗೈದಿದ್ದಾರೆಂದು ಪರೋಕ್ಷವಾಗಿ ನೀರವ್ ಮೋದಿ, ಮಲ್ಯ ಅವರ ಹೆಸರನ್ನು ಎಳೆದು ತಂದಿದ್ದಾರೆ.
ಅವರನ್ನು ದೇಶಕ್ಕೆ ವಾಪಸ್ ಕರೆತರುವ ಕೆಲಸ ಎಲ್ಲಿಯ ತನಕ ಬಂತು ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿರುವ ವಾದ್ರಾ, ನಾನೆಂದೂ ಈ ದೇಶವನ್ನು ಬಿಟ್ಟು ಹೋಗುವುದಿಲ್ಲ. ಜೊತೆಗೆ, ನನ್ನ ಹೆಸರು ಎಲ್ಲಾ ವಿಚಾರಣೆಯಿಂದ ಮುಕ್ತವಾದ ನಂತರವಷ್ಟೇ ರಾಜಕೀಯಕ್ಕೆ ಬರುತ್ತೇನೆ. ಇದು ಈ ದೇಶಕ್ಕೆ ನಾನು ನೀಡುತ್ತಿರುವ ವಚನ ಎಂದು ವಾದ್ರಾ ಹೇಳಿದ್ದಾರೆ.

ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ವಾದ್ರಾ, ರಾಜಕೀಯ ಪ್ರವೇಶಕ್ಕೆ ಸಮಯ ಇನ್ನು ಕೂಡಿ ಬಂದಿಲ್ಲ. ನನಗೆ ಯಾವುದೇ ಆತುರವಿಲ್ಲ, ನಾನು ಮೊದಲು ಅರ್ಹತೆ ಪಡೆದುಕೊಳ್ಳಬೇಕಿದೆ ಎಂದು ಹೇಳಿದ್ದರು.
ಬೇನಾಮಿ ವ್ಯವಹಾರ ಮೂಲಕ ರಾಬರ್ಟ್ ವಾದ್ರಾ ವಿದೇಶಗಳಲ್ಲಿ ಖರೀದಿಸಿದ ಆಸ್ತಿಗಳ ಆರೋಪಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಗಮನವನ್ನು ಕೇಂದ್ರೀಕರಿಸಿದೆ. ಲಂಡನ್ ನಲ್ಲಿನ ಆಸ್ತಿಯ ಹೊರತಾಗಿ ದುಬೈನಲ್ಲಿನ ವಿಲ್ಲಾ ಬಗ್ಗೆ ಕೂಡ ತನಿಖೆ ಆರಂಭಿಸಿತ್ತು.
Robert Vadra: I'm in this country, there are people who have looted the country and run away, what about them? I'm always going to be in this country, I will not leave or be in active politics till I clear my name, that is my promise. pic.twitter.com/ZD54E5DOFa
— ANI (@ANI) March 6, 2019
ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಅಂದರೆ 2014ರಲ್ಲಿ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ಏಕಾಏಕಿ ತಮ್ಮ ಒಡೆತನದಲ್ಲಿದ್ದ 6 ಕಂಪನಿಗಳ ಬಾಗಿಲು ಮುಚ್ಚಿದ್ದರು.ಲೈಫ್ ಲೈನ್ ಅಗ್ರೊಟೆಕ್, ಬೆಸ್ಟ್ ಸೀಜನ್ ಅಗ್ರೊ, ಗ್ರೀನ್ ವೇವ್ ಅಗ್ರೊ, ರೈಟ್ ಲೈನ್ ಅಗ್ರೊ, ಫ್ಯೂಚರ್ ಇನ್ಪ್ರಾ ಅಗ್ರೊ ಹಾಗೂ ಪ್ರೈಮ್ ಟೈಮ್ ಅಗ್ರೊ ಎನ್ನುವ ಆರು ಕಂಪನಿಗಳಿಗೆ ಬೀಗ ಹಾಕಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications