ಕರ್ನಾಟಕ ವಿಧಾನಸಭಾ ಚುನಾವಣೆಯಿಂದ ಬಿಜೆಪಿ ಪತನ ಆರಂಭವಾದರೆ ಸಂತೋಷ: ಮಮತಾ ಬ್ಯಾನರ್ಜಿ
ಕೊಲ್ಕತ್ತಾ, ಮೇ. 04: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ದೇಶಾದ್ಯಂತ ಗಮನ ಸೆಳೆದಿದೆ. ಚುನಾವಣ ಫಲಿತಾಂಶ ರಾಷ್ಟ್ರ ರಾಜಕೀಯದಲ್ಲೂ ಪ್ರಭಾವ ಬೀರಲಿದೆ. ಹೀಗಾಗಿ ಹಲವು ನಾಯಕರು ಫಲಿತಾಂಶದ ಮೇಲೆ ಕಣ್ಣಿಟ್ಟಿದ್ದಾರೆ. ಅದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಒಬ್ಬರು.
ಗುರುವಾರ ಕರ್ನಟಕ ವಿಧಾನಸಭಾ ಚುನಾವಣೆ ಬಗ್ಗೆ ಮಾತನಾಡಿರುವ ಅವರು, ಕರ್ನಾಟಕದಿಂದ ಬಿಜೆಪಿಯ "ಅಧಃಪತನ" ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ. ಟಿಎಂಸಿಯ ಸಾಮೂಹಿಕ ಪ್ರಚಾರ ಅಭಿಯಾನದಲ್ಲಿ ಭಾಷಣ ಮಾಡುವಾಗ, ಕೇಸರಿ ಪಕ್ಷವು ತನ್ನ ಸ್ವಂತ ಹಿತಾಸಕ್ತಿಗಳಿಗಾಗಿ ಹಿಂದೂ ಧರ್ಮವನ್ನು ಹಾಳು ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

"ಮೊದಲು ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ ಅದು ದೇಶಕ್ಕೆ ಒಳ್ಳೆಯದು... ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ. ನೀವು ಇಷ್ಟಪಡುವ ಯಾವುದೇ ಪಕ್ಷಕ್ಕೆ ಮತ ನೀಡಿ. ಬಿಜೆಪಿಯ ಅವನತಿ ಕರ್ನಾಟಕದಿಂದ ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ. ಬಿಜೆಪಿ ಹಿಂದೂ ಧರ್ಮದಲ್ಲಿನ ಆಧ್ಯಾತ್ಮಿಕತೆಯನ್ನು ನಾಶಪಡಿಸಿದೆ" ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಹಿಂದೆ ಜಾತ್ಯಾತೀತ ಜನರಾದಳದ ನಾಯಕ ಎಚ್.ಡಿ ಕುಮಾರಸ್ವಾಮಿ ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು. ಮಮತಾ ಬ್ಯಾನರ್ಜಿ ಅವರ ಜತೆ ರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದ್ದರು. ಜೊತೆಗೆ ಅವರು ಜೆಡಿಎಸ್ ಪರ ಪ್ರಚಾರ ಮಾಡಲಿದ್ದಾರೆ ಎಂಬ ಮಾಹಿತಿ ನೀಡಿದ್ದರು.

"ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ, ಕಳೆದ ಬಾರಿ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದಾಗಲೂ ಕೇಂದ್ರ ಸರಕಾರ ತುಂಬಾ ಕಿರುಕುಳ ನೀಡಿತ್ತು. ಆದರೆ ಜನತೆಯ ಆಶೀರ್ವಾದದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂತು. ಅದೇ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಅಧಿಕಾರಕ್ಕೆ ಬರಲಿದೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾಗಿ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದರು.
ಮುಂದುವರಿದು, "ನೀವು ಯಾವಾಗ ಹೇಳಿದರೂ ನಾನು ಕರ್ನಾಟಕಕ್ಕೆ ಬಂದು ಜೆಡಿಎಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ನೀವು ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರು ನನ್ನನ್ನು ಅತ್ಯಂತ ಅದರಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು" ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಈವರೆಗೆ ಅವರು ಜೆಡಿಎಸ್ ಪರ ಪ್ರಚಾರ ನಡೆಸಿಲ್ಲ. ಯಾವಾಗ ಪ್ರಚಾರಕ್ಕೆ ಬರುತ್ತಾರೆ ಎಂಬ ಬಗ್ಗೆ ಪಕ್ಷವು ಮಾಹಿತಿ ನೀಡಿಲ್ಲ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications