IAF: ಭಾರತೀಯ ವಾಯುಸೇನೆ ವಾಹನ ಮೇಲೆ ಉಗ್ರರ ಗುಂಡಿನ ದಾಳಿ: ಗಾಯಗೊಂಡ ಯೋಧರು
ನವದೆಹಲಿ, ಮೇ 04: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಶನಿವಾರ ವಾಯು ಸೇನಾ ವಾಹನಗಳ ಮೇಲೆ ಭಯೋತ್ಪಾಕರಿಂದ ಗುಂಡಿನ ದಾಳಿ ನಡೆದಿದೆ. ಈ ವೇಳೆ ಐವರು ಸೇನಾ ಯೋಧರ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್ಕೋಟೆ ಪ್ರದೇಶದಲ್ಲಿ ಇಂಡಿಯನ್ ಏರ್ ಪೋರ್ಸ್ ಯೋಧರು ಒಟ್ಟು ಎರಡು ವಾಹನಗಳು ಬರುತ್ತಿದ್ದವು. ಈ ವೇಳೆ ಒಂದು ವಾಹನದ ಮೇಲೆ ಏಕಾಎಕಿ ಗುಂಡಿ ಮಳೆಗರೆದ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದಾರೆ.

ದಾಳಿಗೆ ಸಿಲುಕಿದ ಐವರನ್ನು ಸ್ಥಳೀಯ ಉಧಮ್ಪುರದ ಕಮಾಂಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ
ಸದ್ಯ ಪ್ರದೇಶದಲ್ಲಿ ಭಾರತೀಯ ಸೇನೆ ಬೀಡು ಬಿಟ್ಟಿದ್ದು, ಸುರನ್ಕೋಟೆ ಪ್ರದೇಶದಲ್ಲಿ ಇನ್ನಿತರ ಯೋಧರಿಂದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಭದ್ರತಾ ಪಡೆಗಳ ಮೂಲಗಳು ಮಾಹಿತಿ ನೀಡಿದೆ.

ಇನ್ನೂ ಈ ಕುರಿತು ಇಂಡಿಯ್ನ ಏರ್ಫೋರ್ಸ್ (IAF) ದಾಳಿಗೆ ಒಳಗಾದ ಬೆಂಗಾವಲು ಪಡೆಗೆ ಭದ್ರತೆ ನೀಡಲಾಗಿದೆ. ವಾಯು ಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರಗಾಮಿಗಳು ಪೂಂಚ್ ಜಿಲ್ಲೆಯ ಶಾಸಿತಾರ್ ಬಳಿ ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳೀಯ ಸೇನಾ ಘಟಕಗಳಿಂದ ಪ್ರಸ್ತುತ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ಬೆಂಗಾವಲು ಪಡೆಗೆ ಭದ್ರತೆ ನಿಯೋಜಿಸಲಾಗಿದೆ, ತನಿಖೆ ಕೈಗೊಳ್ಳಲಾಗಿದೆ ಎಂದು ಐಎಎಫ್ ಅಧಿಕಾರಿಗಳು ಮಾಹಿತಿ ನೀಡಿದರು.
ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಹಿಂದಿನ ಭಾರತೀಯ ಸೇನೆಯ ಮೇಲೆ ಇದೇ ಸ್ಥಳದಲ್ಲಿ ಸರಣಿ ಭಯೋತ್ಪಾದಕ ದಾಳಿ ಆಗಿತ್ತು. ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ದಾಳಿ ನಂತರ ಬೆಂಗಾವಲಿನ ವಾಹನದ ಮೇಲೆ ಒಂದು ಡಜನ್ಗೂ ಹೆಚ್ಚು ಗುಂಡಿನ ದಾಳಿಯ ರಂಧ್ರಗಳು (ಫೈರಿಂಗ್ ಮಾರ್ಕ್)ಕಂಡು ಬಂದಿವೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications