ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ ಪೂರ್ವ ಲಡಾಖ್ನಲ್ಲಿ ಅಹಿತಕರ ಪರಿಸ್ಥಿತಿ:ಬದೌರಿಯಾ
ನವದೆಹಲಿ,ಸೆಪ್ಟೆಂಬರ್ 29: ಪೂರ್ವ ಲಡಾಖ್ನಲ್ಲಿ ಯುದ್ಧವೂ ಇಲ್ಲ, ಇತ್ತ ಶಾಂತಿಯೂ ಇಲ್ಲ ಅಹಿತಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ ಹೇಳಿದ್ದಾರೆ.
ಮುಂದೆ ಯಾವುದೇ ರೀತಿಯ ಸಂಘರ್ಷ ಎದುರಾದರೂ ಅವುಗಳನ್ನು ಎದುರಿಸಲು, ಗೆಲುವು ಕಾಣುವಲ್ಲಿ ಭಾರತೀಯ ವಾಯುಪಡೆಯ ಪಾತ್ರ ವಿಶೇಷ ಮಹತ್ವದ್ದಾಗಿದೆ.
ವಾಯುಪಡೆಗೆ ಚಿನೂಕ್ ಮತ್ತು ಅಪಚೆ ಯುದ್ಧ ವಿಮಾನಗಳ ಜೊತೆಗೆ ರಫೇಲ್ ಯುದ್ಧ ವಿಮಾನ ಸೇರ್ಪಡೆ ಹಲವು ಯುದ್ಧ ತಂತ್ರ ಸಾಮರ್ಥ್ಯಗಳ ಹೆಚ್ಚಿಸುವಿಕೆಗೆ ಪ್ರಮುಖ ಕಾರಣವಾಗಲಿದೆ ಮತ್ತು ಧನಾತ್ಮಕ ಅಂಶವಾಗಿರುತ್ತದೆ ಎಂದಿದ್ದಾರೆ.
ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾಣೆ ಅವರು ವೈಯಕ್ತಿಕವಾಗಿ ನೋಡಿಕೊಳ್ಳುತ್ತಿದ್ದಾರೆ.ಸಮುದ್ರ ಮಟ್ಟದಿಂದ 16 ಸಾವಿರ ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ಫಾರ್ವರ್ಡ್ ಪೋಸ್ಟ್ಗಳು ಮತ್ತು ಪರ್ವತ ಪ್ರದೇಶಗಳಿಗೆ ಸೇನೆಯು ದೊಡ್ಡ ಪ್ರಮಾಣದಲ್ಲಿ ಬಟ್ಟೆ, ಡೇರೆಗಳು, ಆಹಾರ ವಸ್ತುಗಳು, ಸಂವಹನ ಉಪಕರಣಗಳು, ಇಂಧನ, ಶಾಖೋತ್ಪಾದಕಗಳು ಮತ್ತು ಇತರ ಸಾಮಗ್ರಿಗಳನ್ನು ಕಳುಹಿಸಿದೆ.
ಪೂರ್ವ ಲಡಾಕ್ ನ ಹಲವು ಘರ್ಷಣೆ ಕೇಂದ್ರಗಳಲ್ಲಿ ಯಥಾಸ್ಥಿತಿ ಮುಂದುವರಿದಿದ್ದು ಭಾರತೀಯ ಸೇನಾಪಡೆ ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ ಎಂದಿದ್ದಾರೆ.

ಶಸ್ತ್ರಾಸ್ತ್ರಗಳ ನಿಯೋಜನೆ
ಭಾರತೀಯ ಸೇನೆಯು ಪೂರ್ವ ಲಡಾಖ್ನ ಎತ್ತರದ ಪ್ರದೇಶಗಳಿಗೆ ಮತ್ತು ಅಲ್ಲಿರುವ ಸೈನಿಕರಿಗೆ ಟ್ಯಾಂಕ್ಗಳು, ಭಾರೀ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಇಂಧನ, ಆಹಾರ ಮತ್ತು ಅಗತ್ಯ ಚಳಿಗಾಲದ ಸರಬರಾಜುಗಳನ್ನು ಪೂರೈಸಿದೆ.ಪೂರ್ವ ಲಡಾಕ್ ನಲ್ಲಿ ಟ್ಯಾಂಕ್, ಭಾರೀ ಶಸ್ತ್ರಾಸ್ತ್ರಗಳ ನಿಯೋಜನೆ: ಮುಂಬರುವ ಚಳಿಗಾಲಕ್ಕೆ ಪೂರ್ವ ಲಡಾಕ್ ನಲ್ಲಿ ಸೇನೆ ನಿಯೋಜನೆ ಬಗ್ಗೆ ಭಾರತೀಯ ಸೇನೆ ಭಾರೀ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಗಡಿ ಭಾಗದಲ್ಲಿ ಕ್ಲಿಷ್ಟಕರ ಪರಿಸ್ಥಿತಿ
ರಫೇಲ್ ಮತ್ತು ಇತರ ವಿಮಾನಗಳ ಇತ್ತೀಚಿನ ಸೇರ್ಪಡೆಯು ಐಎಎಫ್ಗೆ ಸಾಕಷ್ಟು ಪ್ರಾಯೋಗಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯ ವರ್ಧನೆಯನ್ನು ಒದಗಿಸಿದೆ ಎಂದು ಏರ್ ಚೀಫ್ ಮಾರ್ಷಲ್ ಭದೌರಿಯಾ ಹೇಳಿದ್ದಾರೆ.ಉತ್ತರದ ಗಡಿಭಾಗದಲ್ಲಿ ಸದ್ಯದ ಪರಿಸ್ಥಿತಿ ಅತ್ಯಂಕ ಕ್ಲಿಷ್ಟಕರವಾಗಿದೆ. ಅಲ್ಲಿ ಸದ್ಯ ಯಾವುದೇ ಯುದ್ಧ ನಡೆಯುತ್ತಿಲ್ಲ, ಜೊತೆಗೆ ಶಾಂತಿಯ ಪರಿಸ್ಥಿತಿ ಕೂಡ ಇಲ್ಲ.

ಯಾವುದೇ ಸನ್ನಿವೇಶವನ್ನು ಎದುರಿಸಲು ಸಿದ್ಧರಿರಬೇಕು
ಮಿಲಿಟರಿ ಕಾರ್ಯತಂತ್ರಕ್ಕೆ ಸಂಬಂಧಿಸಿದಂತೆ ಈ ಕಾರ್ಯಾಚರಣೆ ದಶಕಗಳಲ್ಲಿ ಅತಿದೊಡ್ಡದಾಗಿದೆ ಎಂದು ಹೇಳಲಾಗುತ್ತಿದೆ.
ಲಡಾಖ್ನಲ್ಲಿ ಕೆಲವು ತಿಂಗಳುಗಳವರೆಗೆ ಚಳಿಗಾಲಕ್ಕೆ ಸೇನೆಯನ್ನು ಸಿದ್ಧಪಡಿಸುವುದು ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಸೇನೆಯಿಂದ ಯಾವುದೇ ಪರಿಸ್ಥಿತಿಯಲ್ಲಿಯೂ ಯುದ್ಧದ ಸನ್ನಿವೇಶಗಳು ಎದುರಾದರೆ ಅದನ್ನು ಎದುರಿಸುವುದು ಮುಖ್ಯವಾಗಿದೆ.

ಸೇನೆಯ ಬಳಿ ಏನೇನಿವೆ?
ಸೈನ್ಯವು ಟಿ -90 ಮತ್ತು ಟಿ -72 ಟ್ಯಾಂಕ್ಗಳು, ಫಿರಂಗಿ ಬಂದೂಕುಗಳು ಮತ್ತು ಕಾಲಾಳುಪಡೆ ಯುದ್ಧ ವಾಹನಗಳಲ್ಲಿ ಪೂರ್ವ ಲಡಾಖ್ನ ಚುಶುಲ್ ಮತ್ತು ಡೆಮ್ಚಾಕ್ ವಲಯಗಳು ಸೇರಿದಂತೆ ಹಲವಾರು ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜನೆಯಾಗಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications