ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ ಪೂರ್ವ ಲಡಾಖ್ನಲ್ಲಿ ಅಹಿತಕರ ಪರಿಸ್ಥಿತಿ:ಬದೌರಿಯಾ
ನವದೆಹಲಿ,ಸೆಪ್ಟೆಂಬರ್ 29: ಪೂರ್ವ ಲಡಾಖ್ನಲ್ಲಿ ಯುದ್ಧವೂ ಇಲ್ಲ, ಇತ್ತ ಶಾಂತಿಯೂ ಇಲ್ಲ ಅಹಿತಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ ಹೇಳಿದ್ದಾರೆ.
ಮುಂದೆ ಯಾವುದೇ ರೀತಿಯ ಸಂಘರ್ಷ ಎದುರಾದರೂ ಅವುಗಳನ್ನು ಎದುರಿಸಲು, ಗೆಲುವು ಕಾಣುವಲ್ಲಿ ಭಾರತೀಯ ವಾಯುಪಡೆಯ ಪಾತ್ರ ವಿಶೇಷ ಮಹತ್ವದ್ದಾಗಿದೆ.
ವಾಯುಪಡೆಗೆ ಚಿನೂಕ್ ಮತ್ತು ಅಪಚೆ ಯುದ್ಧ ವಿಮಾನಗಳ ಜೊತೆಗೆ ರಫೇಲ್ ಯುದ್ಧ ವಿಮಾನ ಸೇರ್ಪಡೆ ಹಲವು ಯುದ್ಧ ತಂತ್ರ ಸಾಮರ್ಥ್ಯಗಳ ಹೆಚ್ಚಿಸುವಿಕೆಗೆ ಪ್ರಮುಖ ಕಾರಣವಾಗಲಿದೆ ಮತ್ತು ಧನಾತ್ಮಕ ಅಂಶವಾಗಿರುತ್ತದೆ ಎಂದಿದ್ದಾರೆ.
ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾಣೆ ಅವರು ವೈಯಕ್ತಿಕವಾಗಿ ನೋಡಿಕೊಳ್ಳುತ್ತಿದ್ದಾರೆ.ಸಮುದ್ರ ಮಟ್ಟದಿಂದ 16 ಸಾವಿರ ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ಫಾರ್ವರ್ಡ್ ಪೋಸ್ಟ್ಗಳು ಮತ್ತು ಪರ್ವತ ಪ್ರದೇಶಗಳಿಗೆ ಸೇನೆಯು ದೊಡ್ಡ ಪ್ರಮಾಣದಲ್ಲಿ ಬಟ್ಟೆ, ಡೇರೆಗಳು, ಆಹಾರ ವಸ್ತುಗಳು, ಸಂವಹನ ಉಪಕರಣಗಳು, ಇಂಧನ, ಶಾಖೋತ್ಪಾದಕಗಳು ಮತ್ತು ಇತರ ಸಾಮಗ್ರಿಗಳನ್ನು ಕಳುಹಿಸಿದೆ.
ಪೂರ್ವ ಲಡಾಕ್ ನ ಹಲವು ಘರ್ಷಣೆ ಕೇಂದ್ರಗಳಲ್ಲಿ ಯಥಾಸ್ಥಿತಿ ಮುಂದುವರಿದಿದ್ದು ಭಾರತೀಯ ಸೇನಾಪಡೆ ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ ಎಂದಿದ್ದಾರೆ.

ಶಸ್ತ್ರಾಸ್ತ್ರಗಳ ನಿಯೋಜನೆ
ಭಾರತೀಯ ಸೇನೆಯು ಪೂರ್ವ ಲಡಾಖ್ನ ಎತ್ತರದ ಪ್ರದೇಶಗಳಿಗೆ ಮತ್ತು ಅಲ್ಲಿರುವ ಸೈನಿಕರಿಗೆ ಟ್ಯಾಂಕ್ಗಳು, ಭಾರೀ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಇಂಧನ, ಆಹಾರ ಮತ್ತು ಅಗತ್ಯ ಚಳಿಗಾಲದ ಸರಬರಾಜುಗಳನ್ನು ಪೂರೈಸಿದೆ.ಪೂರ್ವ ಲಡಾಕ್ ನಲ್ಲಿ ಟ್ಯಾಂಕ್, ಭಾರೀ ಶಸ್ತ್ರಾಸ್ತ್ರಗಳ ನಿಯೋಜನೆ: ಮುಂಬರುವ ಚಳಿಗಾಲಕ್ಕೆ ಪೂರ್ವ ಲಡಾಕ್ ನಲ್ಲಿ ಸೇನೆ ನಿಯೋಜನೆ ಬಗ್ಗೆ ಭಾರತೀಯ ಸೇನೆ ಭಾರೀ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಗಡಿ ಭಾಗದಲ್ಲಿ ಕ್ಲಿಷ್ಟಕರ ಪರಿಸ್ಥಿತಿ
ರಫೇಲ್ ಮತ್ತು ಇತರ ವಿಮಾನಗಳ ಇತ್ತೀಚಿನ ಸೇರ್ಪಡೆಯು ಐಎಎಫ್ಗೆ ಸಾಕಷ್ಟು ಪ್ರಾಯೋಗಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯ ವರ್ಧನೆಯನ್ನು ಒದಗಿಸಿದೆ ಎಂದು ಏರ್ ಚೀಫ್ ಮಾರ್ಷಲ್ ಭದೌರಿಯಾ ಹೇಳಿದ್ದಾರೆ.ಉತ್ತರದ ಗಡಿಭಾಗದಲ್ಲಿ ಸದ್ಯದ ಪರಿಸ್ಥಿತಿ ಅತ್ಯಂಕ ಕ್ಲಿಷ್ಟಕರವಾಗಿದೆ. ಅಲ್ಲಿ ಸದ್ಯ ಯಾವುದೇ ಯುದ್ಧ ನಡೆಯುತ್ತಿಲ್ಲ, ಜೊತೆಗೆ ಶಾಂತಿಯ ಪರಿಸ್ಥಿತಿ ಕೂಡ ಇಲ್ಲ.

ಯಾವುದೇ ಸನ್ನಿವೇಶವನ್ನು ಎದುರಿಸಲು ಸಿದ್ಧರಿರಬೇಕು
ಮಿಲಿಟರಿ ಕಾರ್ಯತಂತ್ರಕ್ಕೆ ಸಂಬಂಧಿಸಿದಂತೆ ಈ ಕಾರ್ಯಾಚರಣೆ ದಶಕಗಳಲ್ಲಿ ಅತಿದೊಡ್ಡದಾಗಿದೆ ಎಂದು ಹೇಳಲಾಗುತ್ತಿದೆ.
ಲಡಾಖ್ನಲ್ಲಿ ಕೆಲವು ತಿಂಗಳುಗಳವರೆಗೆ ಚಳಿಗಾಲಕ್ಕೆ ಸೇನೆಯನ್ನು ಸಿದ್ಧಪಡಿಸುವುದು ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಸೇನೆಯಿಂದ ಯಾವುದೇ ಪರಿಸ್ಥಿತಿಯಲ್ಲಿಯೂ ಯುದ್ಧದ ಸನ್ನಿವೇಶಗಳು ಎದುರಾದರೆ ಅದನ್ನು ಎದುರಿಸುವುದು ಮುಖ್ಯವಾಗಿದೆ.

ಸೇನೆಯ ಬಳಿ ಏನೇನಿವೆ?
ಸೈನ್ಯವು ಟಿ -90 ಮತ್ತು ಟಿ -72 ಟ್ಯಾಂಕ್ಗಳು, ಫಿರಂಗಿ ಬಂದೂಕುಗಳು ಮತ್ತು ಕಾಲಾಳುಪಡೆ ಯುದ್ಧ ವಾಹನಗಳಲ್ಲಿ ಪೂರ್ವ ಲಡಾಖ್ನ ಚುಶುಲ್ ಮತ್ತು ಡೆಮ್ಚಾಕ್ ವಲಯಗಳು ಸೇರಿದಂತೆ ಹಲವಾರು ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜನೆಯಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications