ನೇಪಾಳದಲ್ಲಿ ಆಪರೇಶನ್ ಮೈತ್ರಿ ಹೇಗೆ ಸಾಗಿದೆ?
ನವದೆಹಲಿ, ಏ. 27: ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಭಾರತದ ವಾಯುಸೇನೆ ರಕ್ಷಣಾ ಕಾರ್ಯ ಮುಂದುವರಿಸಿದೆ. ಸೈನಿಕರು ಮತ್ತು ಪೈಲಟ್ ಗಳು ತಮ್ಮ ಧೈರ್ಯ ಮತ್ತು ಕೆಚ್ಚೆದೆಯ ಸಾಹಸದಿಂದ ಅಪಾಯದಲ್ಲಿದ್ದವರನ್ನು ರಕ್ಷಣೆ ಮಾಡುತ್ತಿದ್ದಾರೆ.[ಸಹಾಯವಾಣಿ ಇಲ್ಲಿದೆ]
ನಮ್ಮ ಮೊದಲ ಆದ್ಯತೆ ನೊಂದವರಿಗೆ ಆಹಾರ ನೀಡಿ ಅವರನ್ನು ರಕ್ಷಣೆ ಮಾಡುವುದು. ಇಲ್ಲಿ ದೇಶ, ಭಾಷೆಗಳ ತಾರತಮ್ಯವಿಲ್ಲ ಎಂದು ಸೈನ್ಯದ ಹಿರಿಯ ಅಧಿಕಾರಿಯೊಬ್ಬರು ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ. ಹಾಗಾದರೆ ನೇಪಾಳದಲ್ಲಿ ಆಪರೇಶನ್ ಮೈತ್ರಿ ಹೇಗಿದೆ? ಇದುವರೆಗೆ ಎಷ್ಟು ಜನರ ರಕ್ಷಣೆ ಮಾಡಲಾಗಿದೆ? ಎಂಬುದರ ಮೇಲೆ ಒಂದು ನೋಟ ಇಲ್ಲಿದೆ.[ಭೂಕಂಪದ ಬಗ್ಗೆ ಇನ್ನಷ್ಟು, ಅದರ ಆಳ ಮತ್ತು ಅಗಲ]

ನಾವೀಗ ಹಿಡಿತ ಸಾಧಿಸಿದ್ದೇವೆ
ಮೊದಲ ದಿನಕ್ಕಿಂತ ಈಗ ಪರವಾಗಿಲ್ಲ. ನಾವು ನೇಪಾಳದ ಭೂ ಭಾಗದ ಮೇಲೆ ಹಿಡಿತ ಸಾಧಿಸಿದ್ದು ಎಲ್ಲಿ ನಿರಾಶ್ರಿತರು ಹೆಚ್ಚಾಗಿದ್ದಾರೋ ಮೊದಲು ಅವರಿಗೆ ಆಹಾರ ಒದಗಿಸುತ್ತಿದ್ದೇವೆ ಎಂದು ಸೈನ್ಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

10 ಕ್ಕೂ ಅಧಿಕ ಹೆಲಿಕ್ಯಾಪ್ಟರ್ ಗಳು
ಸೈನ್ಯದ ಜತೆ 10ಕ್ಕೂ ಅಧಿಕ ಹೆಲಿಕ್ಯಾಪ್ಟರ್ ಗಳು ಸೇನಾ ಕಾರ್ಯದಲ್ಲಿ ನೆರವು ನೀಡುತ್ತಿವೆ. ಈ ಮೊದಲು ಆರು ಹೆಲಿಕ್ಯಾಪ್ಟರ್ ಗಳ ಮೂಲಕ ರಕ್ಷಣೆ ಕಾರ್ಯ ಮಾಡಲಾಗುತ್ತಿತ್ತು.

ಎನ್ ಡಿಆರ್ ಎಫ್ ಕಾರ್ಯಾಚರಣೆ
ಎನ್ ಡಿಆರ್ ಎಫ್ ನ ಸಿಬ್ಬಂದಿ ರಕ್ಷಣಾ ಕೆಲಸಕ್ಕೆ ಕೈ ಜೋಡಿಸಿವೆ. ಜತೆಗೆ ತರಬೇತಿ ಪಡೆದ ನಾಯಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಚಂಢಿಘಡದಿಂದ ತೆರಳಿರುವ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೆಲಸ ಮುಗಿಸಿಯೇ ದೇಶಕ್ಕೆ ವಾಪಸ್
ಸೈನಿಕರು ನಾಗರೀಕರ ಜತೆಗೂಡಿ ರಕ್ಷಣಾ ಕೆಲಸ ಮುಗಿಸಿಯೇ ದೇಶಕ್ಕೆ ಹಿಂದಿರುಗಲಿದ್ದಾರೆ. ರಾತ್ರಿ ವೇಳೆಯೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಸಿತಾಂಶು ಕೌರ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications