ಏರ್ ಸ್ಟ್ರೈಕ್ ಸುಳ್ಳು ಎಂದ ಸಂಸ್ಥೆಗೆ ವಾಯುಸೇನೆಯಿಂದ ಮಂಗಳಾರತಿ
ನವದೆಹಲಿ, ಮಾರ್ಚ್ 07: ಏರ್ ಸ್ಟ್ರೈಕ್ ನಡೆದಿದ್ದೇ ಸುಳ್ಳು, ಅಥವಾ ವಾಯುಸೇನೆ ಬಾಂಬ್ ಎಸೆಯುವಾಗ ಗುರಿ ತಪ್ಪಿದೆ ಎಂಬ ಅರ್ಥ ನೀಡುವ ವರದಿಯೊಂದನ್ನು Reuters India ನ್ಯೂಸ್ ಏಜೆನ್ಸಿ ವರದಿ ಮಾಡಿರುವುದನ್ನು ಭಾರತೀಯ ವಾಯುಸೇನೆ ಕಟುವಾಗಿ ಖಂಡಿಸಿದೆ.
"ನಾವು ಗುರಿ ತಪ್ಪಿಲ್ಲ. ಬಾಂಬ್ ಗಳು ಕರಾರುವಾಕ್ಕಾಗಿ ಗುರಿತಲುಪಿ, ಕಟ್ಟಡವನ್ನು ತೂತು ಮಾಡಿಕೊಂಡು ಒಳಹೋಗಿ ಸ್ಫೋಟಿಸಿವೆ. ಕಟ್ಟಡದ ಮೇಲ್ಛಾವಣಿ ತೂತಾಗಿರುವ ಚಿತ್ರ ಉಪಗ್ರಹ ಚಿತ್ರದಲ್ಲಿ ತಿಳಿಯುತ್ತದೆ" ಎಂದು ವಾಯುಸೇನೆ ಹೇಳಿದೆ.
ಫೆಬ್ರವರಿ 26 ರಂದು ಭಾರತೀಯ ವಾಯು ಸೇನೆ ಪಾಕಿಸ್ತಾನದ ಬಾಲಕೋಟ್ ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 250-300 ಭಯೋತ್ಪಾದಕರು ಸತ್ತಿರಬಹುದು ಎದು ಮಾಧ್ಯಮಗಳೇ ವರದಿ ಮಾಡಿದ್ದವು. ಅದಕ್ಕೆ ಪೂರಕ ಎಂಬಂತೆ ಉಪಗ್ರಹ ಚಿತ್ರವೂ ಬಿಡುಗಡೆಯಾಗಿತ್ತು. ಅಂದು ದಾಳಿ ನಡೆದಿದ್ದು ಸತ್ಯ, 35 ಕ್ಕೂ ಹೆಚ್ಚು ಉಗ್ರರ ಹೆಣವನ್ನು ಪಾಕ್ ಸೈನಿಕರೇ ಸ್ಥಳಾಂತರಿಸಿದ್ದನ್ನು ನಾವು ಕಂಡಿದ್ದೇವೆ ಎಂದು ಸ್ಥಳೀಯರೇ ಹೇಳಿದ್ದೂ ವರದಿಯಾಗಿತ್ತು. ಇಷ್ಟೆಲ್ಲ ಆದರೂ ಈ ದಾಳಿಯೇ ಸುಳ್ಳು ಎಂಬ ವರದಿಗಳೂ ಹರಿದಾಡುತ್ತಿದೆ.

ರಾಜಕೀಯ ಲೆಕ್ಕಾಚಾರ ಒತ್ತಟ್ಟಿಗಿರಲಿ, ಆದರೆ ಭಾರತೀಯ ವಾಯುಸೇನೆ ಉಗ್ರನಿಗ್ರಹಕ್ಕಾಗಿ ಪ್ರಾಣದ ಹಂಗು ತೊರೆದು ಮಾಡಿದ ಸಾಹಸ ಕಾರ್ಯವನ್ನೂ ರಾಜಕೀಯ ಹಿತಾಸಕ್ತಿಗಾಗಿ ಅಲ್ಲಗಳೆಯುವುದ ಸರಿಯೇ ಎಂಬ ಪ್ರಶ್ನೆ ಈಗ ಎದ್ದಿದೆ.
Reuters India ಪ್ರಕಟಿಸಿದ ಚಿತ್ರ ಎಷ್ಟರ ಮಟ್ಟಿಗೆ ನಿಖಕರವಾದುದು ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸುವ ಕೆಲಸವಾಗುತ್ತಿದೆ. ಆದರೆ ಈ ವರದಿಯನ್ನಂತೂ ವಾಯುಸೇನೆ ಸಾರಾಸಗಟಾಗಿ ತಿರಸ್ಕರಿಸಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications