ಇಸ್ರೇಲ್ ಜತೆ ಡೀಲ್, ಭಾರತದ ಬತ್ತಳಿಕೆಗೆ 100 'ಸ್ಪೈಸ್ ಬಾಂಬ್'
ನವದೆಹಲಿ, ಜೂನ್ 07: ಕಣಿವೆ ರಾಜ್ಯ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಬಾಲಕೋಟ್ ಮೇಲೆ ದಾಳಿ ನಡೆಸಿ, ಜೈಷ್ ಎ ಮೊಹಮ್ಮದ್ ಉಗ್ರರನ್ನು ಭಾರತೀಯ ವಾಯುಸೇನೆ ಧ್ವಂಸಗೊಳಿಸಿತ್ತು. ಈಗ ತನ್ನ ಬತ್ತಳಿಕೆಯನ್ನು ಇನ್ನಷ್ಟು ಬಲಗೊಳಿಸಿಕೊಳ್ಳಲು ಇಸ್ರೇಲ್ ಜತೆ ಒಪ್ಪಂದ ಮಾಡಿಕೊಂಡಿದ್ದು, 100 ಸ್ಪೈಸ್ ಬಾಂಬ್ ಖರೀದಿಸುತ್ತಿದೆ
100 ಸ್ಪೈಸ್ ಬಾಂಬ್ ಖರೀದಿಗಾಗಿ ಇಸ್ರೇಲ್ ಜತೆ 300 ಕೋಟಿ ರು ಗಳ ಒಪ್ಪಂದ ಮಾಡಿಕೊಳ್ಳಲಾಗಿದೆ. ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಕೋಟ್ ನಲ್ಲಿದ್ದ ಜೈಷ್ ಎ ಮೊಹಮ್ಮದ್ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಇದೇ SPICE ಬಾಂಬ್ ಗಳನ್ನು ಭಾರತೀಯ ವಾಯುಪಡೆ ಬಳಕೆ ಮಾಡಿತ್ತು.
ವಿಪತ್ತು ಕಾಲದಲ್ಲಿ ಬಲಗೊಳಿಸಲು ಅತ್ಯಾಧುನಿಕ ಅಸ್ತ್ರ ಸ್ಪೈಸ್ ಬಾಂಬ್ ಮುಂದಿನ ಮೂರು ತಿಂಗಳಲ್ಲಿ ಭಾರತ ಸೇರಲಿದೆ. ರಿಯಲ್ ಟೈಮ್ ನಲ್ಲಿ ಎಲೆಕ್ಟ್ರೋ ಆಪ್ಟಿಕಲ್ ಇಮೇಜ್ ನೊಂದಿಗೆ ಹೊಂದಾಣಿಕೆ ನಡೆಸಿ ಸುಮಾರು 60 ಕಿ.ಮೀ ದೂರದ ಗುರಿಯನ್ನು ನಿಖರವಾಗಿ ಧ್ವಂಸಗೊಳಿಸಬಲ್ಲ ಸಾಮರ್ಥ್ಯ ಈ ಸ್ಪೈಸ್ ಬಾಂಬ್ ಗಿದೆ. ಬಾಂಬಿನ ಕಂಪ್ಯೂಟರ್ ಮೆಮೋರಿಯಲ್ಲಿ ಗುರಿ, ಗುರಿ ಸಾಗಬೇಕಾದ ಪಥ ಸೇರಿದಂತೆ ಹಲವು ರಿಫರೆನ್ಸ್ ಮಾಹಿತಿಯನ್ನು ಫೀಡ್ ಮಾಡಲಾಗಿರುತ್ತದೆ. ಗುರಿ ಸಾಗುವ ಹಾದಿಯನ್ನು ಅಗತ್ಯಕ್ಕೆ ತಕ್ಕಂತೆ ಹೊಂದಿಸಿಕೊಳ್ಳಬಲ್ಲ ನಿಪುಣ ಬಾಂಬ್ ಇದಾಗಿದೆ.

ಎಂಕೆ 84, ಬಿಎಲ್ ಯು 109, ಎಪಿಡಬ್ಲ್ಯೂ ಹಾಗೂ ಆರ್ ಎ ಪಿ 2000 ಆಡ್ ಆನ್ ಕಿಟ್ ಕೂಡಾ ಹೊಂದಿರುತ್ತದೆ. ಐಎಎಫ್ ನ ಯುದ್ಧ ವಿಮಾನ ಮಿರಾಜ್ 2000 ಜೊತೆಗೆ ಸ್ಪೈಸ್ 2000 ಬಾಂಬ್ ಗಳನ್ನು ಹೊಂದಿಸಿ, ಜೈಷ್ ಎ ಮೊಹಮ್ಮದ್ ಮೇಲೆ ದಾಳಿ ಮಾಡಲಾಗಿತ್ತು. ನಿಖರವಾಗಿ ಗುರಿ ಮುಟ್ಟಬಲ್ಲ ಸಾಮರ್ಥ್ಯ, ವಿವಿಧ ರೀತಿ ಬಾಂಬ್ ಹಾಗೂ ಕ್ಷಿಪಣಿ ಹೊತ್ತೊಯ್ಯಬಲ್ಲ ತಾಕತ್ತನ್ನು ಮಿರಾಜ್ ಹೊಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications