Flight Crash: ತೆಲಂಗಾಣದಲ್ಲಿ ತರಬೇತಿ ವಿಮಾನ ಅಪಘಾತ, ಸಾವು-ನೋವು
ನವದೆಹಲಿ, ಡಿಸೆಂಬರ್ 04: ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ. ಅಪಘಾತದ ಕಾರಣವೇನೆಂದು ತಿಳಿದುಕೊಳ್ಳು ತನಿಖೆಗೆ ಆದೇಶಿಸಲಾಗಿದೆ.
ಅಪಘಾತ ಸಂಭವಿಸುವ ಮೊದಲು ಈ ವಿಮಾನವು ಎಂದಿನಂತೆ ತರಬೇತಿಗಾಗಿ ಹೈದರಾಬಾದ್ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ತೆರಳಿತ್ತು. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು. ಘಟನೆಯಲ್ಲಿ ಅವರಿಬ್ಬರು ಮೃತಪಟ್ಟಿದ್ದಾರೆ.

ಹೈದರಾಬಾದ್ನ ಎಎಫ್ಎ ತರಬೇತಿಯ ಸಮಯದಲ್ಲಿ ಪಿಲಾಟಸ್ ಪಿಸಿ 7 ಎಂಕೆ II ವಿಮಾನವು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಮಾರಣಾಂತಿಕವಾಗಿ ಗಾಯಗೊಂಡಿದ್ದರು ಎಂದು ಐಎಎಫ್ ಮಾಹಿತಿ ನೀಡಿದೆ. ಈ ವಿಷಯವನ್ನು ಭಾರತೀಯ ವಾಯುಪಡೆಯು X ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಒಂದ ಎಂಜಿನ್ ಹೊಂದಿದ್ದ ವಿಮಾನ
ಪಿಲಾಟಸ್ PC 7 Mk II ಈ ವಿಮಾನವು ಏಕ-ಎಂಜಿನ್ ಹೊಂದಿದ್ದ ವಿಮಾನವಾಗಿದೆ. ಐಎಎಫ್ ಪೈಲಟ್ಗಳು ಮೂಲಭೂತ ತರಬೇತಿ ಪಡೆದಿದ್ದು, ಸದ್ಯ ಅವರಿದ್ದ ವಿಮಾನವು ಅಪಘಾತವಾಗಿದೆ. ಘಟನೆಗೆ ಕಾರಣ ಏನೆಂದು ಪತ್ತೆ ಮಾಡಲು ವಾಯುಪಡೆಗೆ ಆದೇಶಿಸಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೃತರಾದ ಇಬ್ಬರು ಪೈಲಟ್ಗಳ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಹೈದರಾಬಾದ್ ಬಳಿ ನಡೆದ ಈ ಅಪಘಾತದಿಂದ ದುಃಖವಾಗಿದೆ. ಇಬ್ಬರು ಪೈಲಟ್ಗಳು ಪ್ರಾಣ ಕಳೆದು ಕೊಂಡಿರುವುದು ತುಂಬಾ ದುಃಖಕರವಾಗಿದೆ. ಈ ದುರಂತ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications