ವಾಯುಪಡೆಯ ಸಾಮರ್ಥ್ಯವೃದ್ಧಿಗೆ ಪಣ; ವಾಯುಪಡೆ ಮುಖ್ಯಸ್ಥ
ನವದೆಹಲಿ, ಜೂನ್ 19: ದೇಶದಲ್ಲಿ ಭದ್ರತಾ ಸವಾಲುಗಳನ್ನು ಎದುರಿಸಲು ಭಾರತೀಯ ವಾಯುಪಡೆಯಲ್ಲಿ ಮಹತ್ತರ ಬದಲಾವಣೆಗಳು ಸಂಭವಿಸುತ್ತಿವೆ ಎಂದು ವಾಯುಪಡೆ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಹೇಳಿದ್ದಾರೆ.
ಹೈದರಾಬಾದ್ನ ವಾಯುಪಡೆ ಅಕಾಡೆಮಿಯಲ್ಲಿ ಶನಿವಾರ ನಡೆದ ಕಂಬೈನ್ಡ್ ಗ್ರಾಜುಯೇಷನ್ ಪರೇಡ್ (ಸಿಜಿಪಿ) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ರಾಜಕೀಯ ಅನಿಶ್ಚಿತತೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ವಾಯುಪಡೆಯಲ್ಲಿ ಪರಿವರ್ತನೆಗಳಾಗುತ್ತಿವೆ. ಸೂಕ್ತ ತಂತ್ರಜ್ಞಾನಗಳೊಂದಿಗೆ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲಾಗುತ್ತಿದೆ," ಎಂದು ಹೇಳಿದರು.
ಕಳೆದ ವರ್ಷ ಭಾರತ-ಚೀನಾ ಗಡಿಯಲ್ಲಿ ಸಂಘರ್ಷ ನಡೆದ ನಂತರ ವಾಯುಪಡೆ ಇನ್ನಷ್ಟು ಎಚ್ಚರಿಕೆಯಿಂದಿದೆ. ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

ವಾಯುಪಡೆ ದೇಶದಲ್ಲಿ ನಡೆದ ಸಂಘರ್ಷಗಳ ನಿರ್ವಹಣೆಯಲ್ಲಿ ಎಂದಿಗೂ ನಿರ್ಣಾಯಕ ಪಾತ್ರ ವಹಿಸಿದೆ. ಈ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಭರವಸೆ ನೀಡಿದರು.
ಇದೇ ಸಂದರ್ಭ, ಫ್ರಾನ್ಸ್ನಿಂದ ಬಂದಿರುವ 36 ರಫೇಲ್ ಯುದ್ಧ ವಿಮಾನಗಳನ್ನು ಮುಂದಿನ ವರ್ಷದೊಳಗೆ ವಾಯುಪಡೆಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
2022ರೊಳಗೆ ರಫೇಲ್ ವಿಮಾನಗಳನ್ನು ಸೇರ್ಪಡೆಗೊಳಿಸುವ ಗುರಿ ಇಟ್ಟುಕೊಂಡಿದ್ದೇವೆ. ಕೊರೊನಾ ಕಾರಣ ವಿಳಂಬವಾಗಿದೆ ಎಂದು ಮಾಹಿತಿ ನೀಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications