Rajasthan Assembly Election: ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ!
ಐಎಎನ್ಎಸ್-ಪೋಲ್ಸ್ಟ್ರಾಟ್ ಅಭಿಪ್ರಾಯ ಸಮೀಕ್ಷೆ 2023 ರ ಪ್ರಕಾರ, 2023ರ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 97-105 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜಸ್ಥಾನದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ.
ಸೆಪ್ಟೆಂಬರ್ 1 ಮತ್ತು ಸೆಪ್ಟೆಂಬರ್ 13 ರ ನಡುವೆ ಈ ಸಮೀಕ್ಷೆ ನಡೆಸಲಾಗಿದೆ. 6,705 ಮಂದಿಯನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಅಭಿಪ್ರಾಯಗಳನ್ನು ಸಂಗ್ರಹಿಸಿರುವುದಾಗಿ ವರದಿಯಾಗಿದೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಸದ್ಯ ಕಾಂಗ್ರೆಸ್ 100 ಸ್ಥಾನಗಳನ್ನು ಹೊಂದಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 89-97 ಸ್ಥಾನಗಳನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ.
ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿ
ಕಾಂಗ್ರೆಸ್ ಶೇಕಡಾ 2 ರಷ್ಟು ಸಕಾರಾತ್ಮಕ ಮತಗಳನ್ನು ಪಡೆಯುವ ಸಾಧ್ಯತೆ ಇದೆ ಮತ್ತು ಶೇಕಡಾ 41 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ, ಆದರೆ ಬಿಜೆಪಿ ಶೇಕಡಾ 40 ರಷ್ಟು ಮತಗಳನ್ನು ಪಡೆಯುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶೇ.37.9 ಅಂಕಗಳೊಂದಿಗೆ ಅತ್ಯಂತ ಜನಪ್ರಿಯ ಸಿಎಂ ಅಭ್ಯರ್ಥಿಯಾಗಿದ್ದು, ಬಿಜೆಪಿಯ ವಸುಂಧರಾ ರಾಜೆ ಶೇ.25.5 ಮತ್ತು ಕಾಂಗ್ರೆಸ್ನ ಸಚಿನ್ ಪೈಲಟ್ ಶೇ.25.4 ಅಂಕ ಗಳಿಸುವ ಮೂಲಕ ಸಿಎಂ ಸ್ಥಾನಕ್ಕೆ ರೇಸ್ನಲ್ಲಿದ್ದಾರೆ.
ಸಮೀಕ್ಷೆಯ ಪ್ರಕಾರ 47.8 ಪ್ರತಿಶತದಷ್ಟು ಜನರು ಗೆಹ್ಲೋಟ್ ಅವರ ಕಾರ್ಯಕ್ಷಮತೆಯನ್ನು ಉತ್ತಮವೆಂದು ರೇಟ್ ಮಾಡಿದ್ದಾರೆ.
ನಿರುದ್ಯೋಗ ರಾಜ್ಯದ ಪ್ರಮುಖ ಸಮಸ್ಯೆ ಎಂದು ಜನ ಅಭಿಪ್ರಾಯಪಟ್ಟಿದ್ದಾರೆ. ಶೇಕಡಾ 34.9 ರಷ್ಟು ಮಂದಿ ನಿರುದ್ಯೋಗ ಪ್ರಮುಖ ಸಮಸ್ಯೆ ಎಂದು ಹೇಳಿದ್ದರೆ. 19.7 ರಷ್ಟು ಮಂದಿ ವಿದ್ಯುತ್, ರಸ್ತೆಗಳ ಸಮಸ್ಯೆ ಇದೆ ಎಂದು ಹೇಳಿದ್ದಾರೆ. 13.8 ಪ್ರತಿಶತ ಜನ ರೈತರ ಸಮಸ್ಯೆಗಳು ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
2023ರ ಡಿಸೆಂಬರ್ ತಿಂಗಳಿನಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಕೂಡ ಅಧಿಕಾರ ಪಡೆಯುವ ಸಮೀಪದಲ್ಲೇ ಇದ್ದು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಮತದಾರ ಯಾರಿಗೆ ಒಲವು ತೋರಿಸುತ್ತಾನೆ ಕಾದುನೋಡಬೇಕಿದೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications