ಐಎಎಸ್ ಅನುರಾಗ್ ತಿವಾರಿ ಸಾವು, ಈಗ ಮರ್ಡರ್ ಕೇಸ್
ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವನ್ನು ಕೊಲೆ ಪ್ರಕರಣ ಎಂದು ಉತ್ತರಪ್ರದೇಶ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಲಕ್ನೋ, ಮೇ 22: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವನ್ನು ಕೊಲೆ ಪ್ರಕರಣ ಎಂದು ಉತ್ತರಪ್ರದೇಶ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಐದು ದಿನಗಳ ಹಿಂದೆ ಹಜರತ್ ಗಂಜ್ ನ ಮೀರಾಭಾಯಿ ಗೆಸ್ಟ್ ಹೌಸ್ ಬಳಿ ಅನುರಾಗ್ ತಿವಾರಿ ಅವರ ಶವ ಪತ್ತೆಯಾಗಿತ್ತು. ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ಕಂಡು ಬಂದಿತ್ತು. [ಇಲಾಖೆ ಭ್ರಷ್ಚಾಚಾರ ಬಯಲಿಗೆಳೆದ್ದಿದ್ದೇ ತಿವಾರಿ ಸಾವಿಗೆ ಕಾರಣವಾಯ್ತೆ?]

ಆದರೆ, ಮಾನಸಿಕ ಕಿರುಕುಳ, ಹಿರಿಯ ಅಧಿಕಾರಿಗಳ ಒತ್ತಡದಿಂದ ಸಾವು ಸಂಭವಿಸಿದೆ ಎಂದು ಅನುರಾಗ್ ಅವರ ಸೋದರ ಮಾಯಾಂಕ್ ಅವರು ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿದ ಲಕ್ನೋ ಪೊಲೀಸರು ಐಪಿಸಿ ಸೆಕ್ಷನ್ 302 ಅನ್ವಯ ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿ ತನಿಖೆ ಮುಂದುವರೆಸಿದ್ದಾರೆ.
ತಿವಾರಿ ಪ್ರಕರಣದಲ್ಲಿ ತನಿಖೆಗೆ ರಾಜ್ಯ ಸರ್ಕಾರ ಸಿದ್ಧ ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿಯ ಅನುಮಾನಾಸ್ಪದ ಸಾವಿನ ಪ್ರಕರಣ ಕುರಿತಂತೆ ರಾಜ್ಯ ಸರ್ಕಾರ ಯಾವುದೇ ತನಿಖೆಗೂ ಸಿದ್ಧವಿದೆ. ಉತ್ತರ ಪ್ರದೇಶದ ಸಿಎಂಗೆ ಈ ಕುರಿತು ಪತ್ರ ಬರೆದಿದ್ದೇನೆ. ಆಹಾರ ಇಲಾಖೆಯಲ್ಲಿ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆದಿಲ್ಲ. ಅನುರಾಗ್ ತಿವಾರಿ ಅವರು ಕಿರುಕುಳದ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿಲ್ಲ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications