ಕರ್ನಾಟಕದ ಕೆಎಸ್ಆರ್ಟಿಸಿ ಸಾರಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕೆ ಮಹಾರಾಷ್ಟ್ರದ ಸಚಿವರಿಗೆ ಇದೆಂಥಾ ಅವಮಾನ?
ಕರ್ನಾಟದ ಕೆಎಸ್ಆರ್ಟಿಸಿ ಸಾರಿಗೆಯನ್ನು ಹೊಗಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರವು ಸಾರಿಗೆ ಸಚಿವರನ್ನೇ ಬದಲಾಯಿಸಿಬಿಟ್ಟಿದೆ. ಮೂರು ದಶಕಗಳಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ರಾಜ್ಯ ಸರ್ಕಾರವು ಎಂಎಸ್ಆರ್ಟಿಸಿ ನೂತನ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಇದು ಇಲ್ಲಿನ ಸರ್ಕಾರ ಮಾಡಿದ ನಿರ್ಧಾರವಾಗಿದೆ ಎಂದು ತಿಳಿದುಬಂದಿದೆ.
ಹೊಸದಾಗಿ ನೇಮಕಗೊಂಡ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರು ಸಚಿವಾಲಯದ ಅಧಿಕಾರ ವಹಿಸಿಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಸೇವೆ ಮತ್ತು ದಕ್ಷತೆಯನ್ನು ಶ್ಲಾಘಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರ ಸಾರಿಗೆ ನಿಗಮನ ಈ ಕ್ರಮವನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಆಡಳಿತವಿರುವ ನೆರೆಯ ರಾಜ್ಯಕ್ಕೆ ಅಂದರೆ ಕರ್ನಾಟಕಕ್ಕ ಇತ್ತೀಚೆಗಷ್ಟೇ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಾಪ್ ಸರ್ ನಾಯಕ್ ಅಲ್ಲಿನ ಸಾರಿಗೆಯ ಬಗ್ಗೆ ಹೊಗಳಿದ್ದರು. ಇದು ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೆ ಅವರನ್ನು ವಜಾಗೊಳಿಸಲಾಗಿದೆ. ಬಳಿಕ ಗುರುವಾರ ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಸಂಜಯ್ ಸೇಥಿ ಅವರನ್ನು ಎಂಎಸ್ಆರ್ಟಿಸಿಯ ನೂತನ ಮುಖ್ಯಸ್ಥರಾಗಿ ನೇಮಕ ಮಾಡಿದೆ ಎಂದು ತಿಳಿದುಬಂದಿದೆ.
ಫೆಬ್ರವರಿ 1ರಂದು ಪ್ರಾರಂಭವಾದ ಎರಡು ದಿನಗಳ ಕರ್ನಾಟಕ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರತಾಪ್ ಸರ್ ನಾಯಕ್ ಅವರು ಇಲ್ಲಿನ ಸಾರಿಗೆ ಸಚಿವ ಡಾ.ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾದರು. ಈ ವೇಳೆ ಬೆಂಗಳೂರಿನಲ್ಲಿರುವ ಕೆಎಸ್ಆರ್ಟಿಸಿ ಪ್ರಧಾನ ಕಚೇರಿಗೆ ಪ್ರವಾಸ ಮಾಡಿ ಐಷಾರಾಮಿ ಬಸ್ಗಳು ಸೇರಿದಂತೆ ವಿವಿಧ ಪ್ರೀಮಿಯಂ ಸೇವೆಗಳನ್ನು ವೀಕ್ಷಣೆ ಮಾಡಿದರು.
ಖಾಸಗಿ ಬಸ್ಗಳಿಗೆ ಹೋಲಿಸಿದರೆ, ಕೆಎಸ್ಆರ್ಟಿಸಿ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಸೇವೆ ನೀಡುತ್ತಿದೆ ಎಂದು ಶ್ಲಾಘಿಸಿದ್ದರು. ಕರ್ನಾಟಕ ರಾಜ್ಯ ಸಾರಿಗೆ ಸೇವೆಯ ದೀರ್ಘ-ದೂರದ ಸೇವೆ ಒದಗಿಸುವುದರಲ್ಲಿ ಜನಪ್ರಿಯವಾಗಿದೆ. ಮಹಾರಾಷ್ಟ್ರದಲ್ಲೂ ಇದೇ ರೀತಿಯ ಪ್ರಯೋಗ ಮಾಡಬೇಕಿದೆ ಎಂದು ಹೇಳಿದ್ದರು.
ಇನ್ನು ಈ ಹುದ್ದೆಗೆ ಐಎಎಸ್ ಅಧಿಕಾರಿಯೊಬ್ಬರು ನೇಮಕಗೊಂಡಿರುವುದು ಇದೇ ಮೊದಲೇನಲ್ಲ. 1991ರಲ್ಲಿಯೂ ಐಎಎಸ್ ಅಧಿಕಾರಿ ಎಂ.ಕೆ.ಹಮೀದ್ ಈ ಹುದ್ದೆಯನ್ನು ಅಲಂಕರಿಸಿದ್ದರು. ಈ ಹುದ್ದೆಯನ್ನು ತಾತ್ಕಾಲಿಕವೆಂದು ಪರಿಗಣಿಸಲಾಗಿದ್ದು, ಯಾವುದೇ ನಿಗದಿತ ಅವಧಿ ಇಲ್ಲ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸಂಪುಟದಲ್ಲಿ ಸೇರ್ಪಡೆಗೊಂಡ ನಂತರ ರಾಜೀನಾಮೆ ನೀಡಿದ ಶಿಂಧೆ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಂಡ ಶಿವಸೇನಾ ಶಾಸಕ ಭರತ್ ಗೊಗವಾಲೆ ಅವರ ಸ್ಥಾನವನ್ನು ಸೇಥಿ ವಹಿಸಿಕೊಂಡಿದ್ದಾರೆ.
ಎಂಎಸ್ಆರ್ಟಿಸಿ ಸುಮಾರು 14,000 ಬಸ್ಗಳನ್ನು ನಿರ್ವಹಿಸುತ್ತಿದ್ದು, ಪ್ರತಿದಿನ ಸುಮಾರು 55 ಲಕ್ಷ ಪ್ರಯಾಣಿಕರು ಪ್ರಮಾಣ ಮಾಡುತ್ತಿದ್ದಾರೆ ಮತ್ತು ಸುಮಾರು 90,000 ಜನರಿಗೆ ಉದ್ಯೋಗ ನೀಡಿದೆ. ಇತ್ತೀಚಿನ ವರ್ಷಗಳಲ್ಲಿ, ಈ ನಿಗಮವು ಆರ್ಥಿಕ ನಷ್ಟ, ಉದ್ಯೋಗಿಗಳ ಮುಷ್ಕರಗಳು ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿನ ಕುಸಿತ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದೆ. ಈ ಕೆಲವು ಸಮಸ್ಯೆಗಳನ್ನು ಪರಿಹರಿಸಲು, ದೈನಂದಿನ ಆರ್ಥಿಕ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಳೆದ ತಿಂಗಳು ಶೇಕಡಾ 14.95ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications