Get Updates
Get notified of breaking news, exclusive insights, and must-see stories!

ಕರ್ನಾಟಕದ ಕೆಎಸ್‌ಆರ್‌ಟಿಸಿ ಸಾರಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕೆ ಮಹಾರಾಷ್ಟ್ರದ ಸಚಿವರಿಗೆ ಇದೆಂಥಾ ಅವಮಾನ?

ಕರ್ನಾಟದ ಕೆಎಸ್‌ಆರ್‌ಟಿಸಿ ಸಾರಿಗೆಯನ್ನು ಹೊಗಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರವು ಸಾರಿಗೆ ಸಚಿವರನ್ನೇ ಬದಲಾಯಿಸಿಬಿಟ್ಟಿದೆ. ಮೂರು ದಶಕಗಳಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ರಾಜ್ಯ ಸರ್ಕಾರವು ಎಂಎಸ್‌ಆರ್‌ಟಿಸಿ ನೂತನ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಇದು ಇಲ್ಲಿನ ಸರ್ಕಾರ ಮಾಡಿದ ನಿರ್ಧಾರವಾಗಿದೆ ಎಂದು ತಿಳಿದುಬಂದಿದೆ.

ಹೊಸದಾಗಿ ನೇಮಕಗೊಂಡ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್‌ ನಾಯಕ್ ಅವರು ಸಚಿವಾಲಯದ ಅಧಿಕಾರ ವಹಿಸಿಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಸೇವೆ ಮತ್ತು ದಕ್ಷತೆಯನ್ನು ಶ್ಲಾಘಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರ ಸಾರಿಗೆ ನಿಗಮನ ಈ ಕ್ರಮವನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

IAS Officer Appointed as MSRTC Transport Minister

ಕಾಂಗ್ರೆಸ್ ಆಡಳಿತವಿರುವ ನೆರೆಯ ರಾಜ್ಯಕ್ಕೆ ಅಂದರೆ ಕರ್ನಾಟಕಕ್ಕ ಇತ್ತೀಚೆಗಷ್ಟೇ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಾಪ್ ಸರ್‌ ನಾಯಕ್ ಅಲ್ಲಿನ ಸಾರಿಗೆಯ ಬಗ್ಗೆ ಹೊಗಳಿದ್ದರು. ಇದು ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೆ ಅವರನ್ನು ವಜಾಗೊಳಿಸಲಾಗಿದೆ. ಬಳಿಕ ಗುರುವಾರ ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಸಂಜಯ್ ಸೇಥಿ ಅವರನ್ನು ಎಂಎಸ್‌ಆರ್‌ಟಿಸಿಯ ನೂತನ ಮುಖ್ಯಸ್ಥರಾಗಿ ನೇಮಕ ಮಾಡಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 1ರಂದು ಪ್ರಾರಂಭವಾದ ಎರಡು ದಿನಗಳ ಕರ್ನಾಟಕ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರತಾಪ್‌ ಸರ್ ನಾಯಕ್ ಅವರು ಇಲ್ಲಿನ ಸಾರಿಗೆ ಸಚಿವ ಡಾ.ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾದರು. ಈ ವೇಳೆ ಬೆಂಗಳೂರಿನಲ್ಲಿರುವ ಕೆಎಸ್‌ಆರ್‌ಟಿಸಿ ಪ್ರಧಾನ ಕಚೇರಿಗೆ ಪ್ರವಾಸ ಮಾಡಿ ಐಷಾರಾಮಿ ಬಸ್‌ಗಳು ಸೇರಿದಂತೆ ವಿವಿಧ ಪ್ರೀಮಿಯಂ ಸೇವೆಗಳನ್ನು ವೀಕ್ಷಣೆ ಮಾಡಿದರು.

ಖಾಸಗಿ ಬಸ್‌ಗಳಿಗೆ ಹೋಲಿಸಿದರೆ, ಕೆಎಸ್‌ಆರ್‌ಟಿಸಿ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಸೇವೆ ನೀಡುತ್ತಿದೆ ಎಂದು ಶ್ಲಾಘಿಸಿದ್ದರು. ಕರ್ನಾಟಕ ರಾಜ್ಯ ಸಾರಿಗೆ ಸೇವೆಯ ದೀರ್ಘ-ದೂರದ ಸೇವೆ ಒದಗಿಸುವುದರಲ್ಲಿ ಜನಪ್ರಿಯವಾಗಿದೆ. ಮಹಾರಾಷ್ಟ್ರದಲ್ಲೂ ಇದೇ ರೀತಿಯ ಪ್ರಯೋಗ ಮಾಡಬೇಕಿದೆ ಎಂದು ಹೇಳಿದ್ದರು.

ಇನ್ನು ಈ ಹುದ್ದೆಗೆ ಐಎಎಸ್ ಅಧಿಕಾರಿಯೊಬ್ಬರು ನೇಮಕಗೊಂಡಿರುವುದು ಇದೇ ಮೊದಲೇನಲ್ಲ. 1991ರಲ್ಲಿಯೂ ಐಎಎಸ್ ಅಧಿಕಾರಿ ಎಂ.ಕೆ.ಹಮೀದ್ ಈ ಹುದ್ದೆಯನ್ನು ಅಲಂಕರಿಸಿದ್ದರು. ಈ ಹುದ್ದೆಯನ್ನು ತಾತ್ಕಾಲಿಕವೆಂದು ಪರಿಗಣಿಸಲಾಗಿದ್ದು, ಯಾವುದೇ ನಿಗದಿತ ಅವಧಿ ಇಲ್ಲ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸಂಪುಟದಲ್ಲಿ ಸೇರ್ಪಡೆಗೊಂಡ ನಂತರ ರಾಜೀನಾಮೆ ನೀಡಿದ ಶಿಂಧೆ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಂಡ ಶಿವಸೇನಾ ಶಾಸಕ ಭರತ್ ಗೊಗವಾಲೆ ಅವರ ಸ್ಥಾನವನ್ನು ಸೇಥಿ ವಹಿಸಿಕೊಂಡಿದ್ದಾರೆ.

ಎಂಎಸ್‌ಆರ್‌ಟಿಸಿ ಸುಮಾರು 14,000 ಬಸ್‌ಗಳನ್ನು ನಿರ್ವಹಿಸುತ್ತಿದ್ದು, ಪ್ರತಿದಿನ ಸುಮಾರು 55 ಲಕ್ಷ ಪ್ರಯಾಣಿಕರು ಪ್ರಮಾಣ ಮಾಡುತ್ತಿದ್ದಾರೆ ಮತ್ತು ಸುಮಾರು 90,000 ಜನರಿಗೆ ಉದ್ಯೋಗ ನೀಡಿದೆ. ಇತ್ತೀಚಿನ ವರ್ಷಗಳಲ್ಲಿ, ಈ ನಿಗಮವು ಆರ್ಥಿಕ ನಷ್ಟ, ಉದ್ಯೋಗಿಗಳ ಮುಷ್ಕರಗಳು ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿನ ಕುಸಿತ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದೆ. ಈ ಕೆಲವು ಸಮಸ್ಯೆಗಳನ್ನು ಪರಿಹರಿಸಲು, ದೈನಂದಿನ ಆರ್ಥಿಕ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಳೆದ ತಿಂಗಳು ಶೇಕಡಾ 14.95ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+