ಗೋವಾದಲ್ಲಿ ಶಂಕಿತ ಐಎಸ್ಐಎಸ್ ಉಗ್ರನ ವಿಚಾರಣೆ
ಪಣಜಿ, ಫೆಬ್ರವರಿ 03 : ಗೋವಾದಲ್ಲಿ ಐಎಸ್ಐಎಸ್ ಸಂಘಟನೆಗೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ವಿಚಾರಣೆ ನಡೆಸಲಾಗುತ್ತಿದೆ. ಗೋವಾಕ್ಕೆ ಆಗಮಿಸುವ ವಿದೇಶಿ ಪ್ರಜೆಗಳ ಮೇಲೆ ಉಗ್ರರು ದಾಳಿ ನಡೆಸಬಹುದು ಎಂದು ಎನ್ಐಎಗೆ ಮಾಹಿತಿ ಲಭ್ಯವಾಗಿತ್ತು
ಗೋವಾದ ಭಯೋತ್ಪಾದಕ ನಿಗ್ರಹ ದಳ ಮತ್ತು ಕೇಂದ್ರ ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿವೆ. ಬಂಧಿತ ವ್ಯಕ್ತಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿನ ಕಾರುಗಳ್ಳರ ಜೊತೆ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]

ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ತನಿಖಾ ದಳ ಬೆಂಗಳೂರು, ಮುಂಬೈ, ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಿ ಹಲವು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯ (ಐಎಸ್ಐಎಸ್) ಶಂಕಿತ ಉಗ್ರರನ್ನು ಬಂಧಿಸಿತ್ತು. [ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ]
ಈ ಉಗ್ರರ ವಿಚಾರಣೆ ವೇಳೆ ಗೋವಾದಲ್ಲಿ ಫ್ರಾನ್ಸ್ ಮತ್ತು ಇತರ ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಯಬಹುದು ಎಂಬ ಮಾಹಿತಿ ಲಭ್ಯವಾಗಿತ್ತು. ಸೇನೆಯ ಕಾರನ್ನು ಅಪಹರಣ ಮಾಡಿ ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಲಾಗಿದೆ ಎಂದು ತಿಳಿದುಬಂದಿತ್ತು. ['ನಮಗೆ ಭಾರತದ ಸಂವಿಧಾನದ ಮೇಲೆ ಗೌರವವಿಲ್ಲ']
ಈ ಮಾಹಿತಿಯ ಅನ್ವಯ ದಾಳಿ ನಡೆಸಿದ ಗೋವಾ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ತಂಡ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿವೆ. ಬಂಧಿತ ಯುವಕ ಕಾರನ್ನು ಅಪಹರಣ ಮಾಡಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ತಿಳಿದುಬಂದಿದ್ದು, ವಿಚಾರಣೆ ಮುಂದುವರೆದಿದೆ.
ವಶಕ್ಕೆ ಪಡೆದಿರುವ ಯುವಕ ಮಹಾರಾಷ್ಟ್ರ ಮತ್ತು ಗೋವಾದಲ್ಲಿನ ಕಾರುಗಳ್ಳರ ಜೊತೆ ಸಂಪರ್ಕದಲ್ಲಿದ್ದ. ಕಾರುಗಳ್ಳರ ಸಹಾಯದಿಂದ ಸೇನೆಯ ಕಾರನ್ನು ಅಪಹರಣ ಮಾಡಿ, ದಾಳಿ ನಡೆಸಲು ಮುಂದಾಗಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯುವಕನಿಗೆ ಗೋವಾದಲ್ಲಿ ಬಾಡಿಗೆ ಮನೆ ಪಡೆಯಲು 1.5 ಲಕ್ಷ ರೂ.ಗಳನ್ನು ನೀಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications