ಇರಾಕಿ ಉಗ್ರರ ಕಣ್ಣು ಈಗ ಭಾರತದ ಮೇಲೆ!
ನವದೆಹಲಿ, ಜೂ.18: ಇರಾಕಿನ ಉಗ್ರ ಸಂಘಟನೆ ಐಎಸ್ಐಎಸ್ ಕಣ್ಣು ಈಗ ಭಾರತದತ್ತ ಬಿದ್ದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಿಧಿಸಲಾಗಿದೆ.
ಬೆಂಗಳೂರು, ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಅನೇಕ ಮಹಾನಗರಗಳಲ್ಲಿ ಕಟ್ಟೆಚ್ಚರದ ಬಿಗಿ ಭದ್ರತೆ ಘೋಷಿಸಲಾಗಿದೆ. ದೇಶದ ಪ್ರಮುಖ ಸ್ಥಳಗಳ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಸ್ಟಾರ್ ಹೊಟೇಲ್ಗಳು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ದೇಶದ ಅಲ್ಪಸಂಖ್ಯಾತ ಸಮುದಾಯದ ಹಲವಾರು ಯುವಕರಿಗೆ ಐಎಸ್ಐಎಸ್ ಉಗ್ರ ಸಂಘಟನೆಯಿಂದ ಭಾರೀ ಆಮಿಷಗಳು ಬರುತ್ತಿದ್ದು, ಅವರನ್ನೆಲ್ಲ ಸಂಘಟನೆಗೆ ಸೇರುವಂತೆ ಉತ್ತೇಜಿಸಲಾಗುತ್ತಿದೆ. ಆದರೆ ಐಸೀಸ್ ಸಂಘಟನೆಯ ಚಟುವಟಿಕೆಗಳಿಗೆ ದೇಶವಾಸಿ ಜನತೆಯಿಂದ ಹೆಚ್ಚಿನ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಇಲಾಖೆ ಹೇಳಿದೆ.
ಇರಾಕಿ ಉಗ್ರ ಸಂಘಟನೆಯ ಪರ ಟ್ವಿಟ್ಟರ್ ಖಾತೆ ನಿರ್ವಹಣೆ ನಡೆಸುತ್ತಿದ್ದ ಮೆಹದಿ ಬೆಂಗಳೂರಿನಲ್ಲಿ ಬಂಧನವಾಗಿದ್ದು ಎಂಬುದನ್ನು ಮರೆಯುವಂತಿಲ್ಲ.
ಮುಂಬೈಯ ಕಲ್ಯಾಣ್ನಿಂದ ಸಿರಿಯಾಕ್ಕೆ ತೆರಳಿದ್ದ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಆರೀಬ್ ಮಜೀದ್ ಎಂಬ ಯುವಕ ಅಲ್ಲಿಂದ ಮುಂಬೈಗೆ ಹಿಂದಿರುಗಿದ್ದು ಸಧ್ಯ ಪೊಲೀಸರ ವಶದಲ್ಲಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ ಈ ಬಗ್ಗೆ ತೀವ್ರ ತನಿಖೆ ನಡೆಸುತ್ತಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications