ICICI-Videocon case: ಮುಂಬೈ ಜೈಲಿನಿಂದ ಚಂದಾ ಕೊಚ್ಚರ್, ದೀಪಕ್ ಕೊಚ್ಚರ್ ಬಿಡುಗಡೆ
ಮುಂಬೈ ಜನವರಿ 10: ಸಾಲ ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಮುಂಬೈನಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಚಂದಾ ಕೊಚ್ಚರ್ ಇಂದು ಬೈಕುಲ್ಲಾ ಮಹಿಳಾ ಜೈಲಿನಿಂದ ಹೊರಬಂದಿದ್ದಾರೆ. ಆರ್ಥರ್ ರೋಡ್ ಜೈಲಿನಿಂದ ದೀಪಕ್ ಕೊಚ್ಚರ್ ಕೂಡ ಬಿಡುಗಡೆಯಾಗಿದ್ದಾರೆ.
ಬಾಂಬೆ ಹೈಕೋರ್ಟ್ ಸೋಮವಾರ ಐಸಿಐಸಿಐ ಬ್ಯಾಂಕ್ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಸುಮಾರು ಒಂದು ವಾರಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದ ನಂತರ ಇಬ್ಬರು ಪ್ರಸ್ತುತ ನ್ಯಾಯಾಂಗ ಬಂಧನದಿಂದ ಬಿಡುಗಡೆಗೊಂಡಿದ್ದಾರೆ.
ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಡಿಸೆಂಬರ್ 23, 2022 ರಂದು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ವೇಣುಗೋಪಾಲ್ ಧೂತ್ ನೇತೃತ್ವದ ವಿಡಿಯೋಕಾನ್ ಗ್ರೂಪ್ಗೆ ಒದಗಿಸಿದ ಸಾಲದಲ್ಲಿನ ಅಕ್ರಮಗಳ ಆರೋಪದ ಮೇಲೆ ಸಿಬಿಐ ಅವರನ್ನು ಬಂಧಿಸಿತ್ತು. ಆದರೆ ಇದು ಕಾನೂನುಬಾಹಿರ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರು.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಡಿಸೆಂಬರ್ 25 ರಂದು ಕೊಚ್ಚರ್ ಅವರನ್ನು ಬಂಧಿಸಿತ್ತು. ಕೊಚ್ಚರ್ಗಳು ತಮ್ಮ ಮಗನಿಗೆ ಇದೇ ತಿಂಗಳು ವಿವಾಹವಾಗಲಿರುವ ಹಿನ್ನೆಲೆಯಲ್ಲಿ ಮಧ್ಯಂತರ ಪರಿಹಾರವನ್ನು ಕೋರಿದ್ದರು.
ವಿಚಾರಣೆ ವೇಳೆ ಚಂದಾ ಕೊಚ್ಚರ್ ಅವರು ತಮ್ಮ ವಕೀಲರಾದ ರೋಹನ್ ದಾಕ್ಷಿಣಿ ಮತ್ತು ಕುಶಾಲ್ ಮೋರ್ ಅವರ ಮೂಲಕ ಸಿಬಿಐ ಬಂಧನವು ನಿರಂಕುಶ ಮತ್ತು ಕಾನೂನುಬಾಹಿರ ಎಂದು ಹೇಳಿಕೆ ನೀಡಿದ್ದು, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 46 (4) ರ ಅಡಿಯಲ್ಲಿ ತನ್ನನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗಿದೆ. ಬಂಧನದ ವೇಳೆ ಮಹಿಳಾ ಪೊಲೀಸ್ ಅಧಿಕಾರಿ ಇರಲಿಲ್ಲ. ಚಂದಾ ಅವರ ಬಂಧನದ ಜ್ಞಾಪಕ ಪತ್ರದಲ್ಲಿ ಯಾವುದೇ ಮಹಿಳಾ ಪೊಲೀಸ್ ಅಧಿಕಾರಿಯ ಹೆಸರು ಇಲ್ಲ ಎಂದು ಸಲ್ಲಿಸಲಾಗಿದೆ.

ಆದಾಗ್ಯೂ, ಮಹಿಳೆ ಅಧಿಕಾರಿ ಹಾಜರಿಲ್ಲದ ವಿಷಯದ ಬಗ್ಗೆ ಸಿಬಿಐ ಹೇಳಿದ್ದು ಹೀಗೆ, "ಇದು ವೈಟ್ ಕಾಲರ್ ಅಪರಾಧ, ಅವರನ್ನು ಕೈಕೋಳ ಹಾಕಿ ತೆಗೆದುಕೊಂಡಿಲ್ಲ," ಆದ್ದರಿಂದ ಯಾವುದೇ ಸ್ಪರ್ಶವಿರಲಿಲ್ಲ ಎಂದಿದೆ. ಆದರೆ ಈ ವೇಳೆ ಚಂದಾ ಪರ ವಕೀಲರು, 'ಸ್ಪರ್ಶದಿಂದ ಬಂಧನವಾಗಿದೆ' ಎಂದು ತಿರುಗೇಟು ನೀಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications