ಭಾರತದಲ್ಲಿ ಕೋವಿಡ್ ವೇಗವಾಗಿ ಹರಡಲು ಮೂರು ಕಾರಣ ನೀಡಿದ ಐಸಿಎಂಆರ್
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಒಂದೇ ದಿನದಲ್ಲಿ ದಾಖಲೆಯ 2.73 ಲಕ್ಷದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1.50 ಕೋಟಿಯನ್ನು ದಾಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಜತೆಗೆ ಸಾವಿನ ಪ್ರಮಾಣವೂ ಆಘಾತಕಾರಿ ರೀತಿಯಲ್ಲಿ ಏರಿಕೆಯಾಗುತ್ತಿದೆ.
ಕೋವಿಡ್ ಮೊದಲ ಹಂತ ಮತ್ತು ಎರಡನೆಯ ಹಂತಗಳಲ್ಲಿನ ಸಾವಿನ ಪ್ರಮಾಣದ ಸರಾಸರಿಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ (ಐಸಿಎಂಆರ್) ಪ್ರಧಾನ ನಿರ್ದೇಶಕ ಡಾ. ಬಲರಾಮ್ ಭಾರ್ಗವ ತಿಳಿಸಿದ್ದಾರೆ.
ಭಾರತದಲ್ಲಿ ವೇಗವಾಗಿ ಕೋವಿಡ್ ಪ್ರಸರಣವಾಗುತ್ತಿರುವುದಕ್ಕೆ ಅಜಾಗರೂಕತೆ, ಅಸಮರ್ಪಕ ನಡವಳಿಕೆ ಮತ್ತು ಗುರುತಿಸಲಾಗದ ವಿವಿಧ ರೂಪಾಂತರಗಳು ಕಾರಣ ಎಂದು ಅವರು ಮೂರು ಪ್ರಮುಖ ಕಾರಣಗಳನ್ನು ತಿಳಿಸಿದ್ದಾರೆ.

'ನಮ್ಮಲ್ಲಿ ವಿಪರೀತ ಅಜಾಗರೂಕತೆ ಇದೆ. ಜತೆಗೆ ಕೋವಿಡ್ ಎಚ್ಚರಿಕೆಗಳನ್ನು ಸರಿಯಾಗಿ ಪಾಲಿಸದೆ ಇರುವಿಕೆ ಹಾಗೂ ವಿವಿಧ ಗುರುತಿಸಲಾಗದ ರೂಪಾಂತರಗಳು ಹೆಚ್ಚು ಆತಂಕಕಾರಿಯಾಗಿವೆ. ಬ್ರಿಟನ್, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ರೂಪಾಂತರಗಳು ಅಧಿಕ ಪ್ರಸರಣದ ಗುಣವನ್ನು ತೋರಿಸಿವೆ' ಎಂದು ಬಲರಾಮ್ ಭಾರ್ಗವ ಹೇಳಿದ್ದಾರೆ.
ಭಾರತದಲ್ಲಿ ಅವಳಿ ರೂಪಾಂತರವನ್ನು ಕೂಡ ಪತ್ತೆ ಮಾಡಲಾಗಿದೆ. ಆದರೆ ಅವುಗಳಲ್ಲಿ ಅಧಿಕ ಪ್ರಸರಣ ಸಾಮರ್ಥ್ಯ ಇನ್ನೂ ದೃಢಪಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications