ಪ್ಲಾಸ್ಮಾ ಚಿಕಿತ್ಸೆ ವಿಫಲ: ಕೋವಿಡ್ ಮಾರ್ಗಸೂಚಿಯಿಂದ ಕೈಬಿಡಲು ನಿರ್ಧಾರ
ನವದೆಹಲಿ, ಅಕ್ಟೋಬರ್ 21: ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾದ ರೋಗಿಗಳಿಂದ ಪ್ಲಾಸ್ಮಾ ಪಡೆದು ರೋಗಿಗಳಿಗೆ ನೀಡುವ ಮೂಲಕ ಅವರನ್ನು ಗುಣಮುಖರಾಗಿಸಬಹುದು ಎಂಬ ತರ್ಕ ವಿಫಲವಾದ ಹಿನ್ನೆಲೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.
ರಾಷ್ಟ್ರೀಯ ಕೋವಿಡ್-19 ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಡಲು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ನಿರ್ಧರಿಸಿದೆ ಎಂದು ಸಂಸ್ಥೆಯ ಪ್ರಧಾನ ನಿರ್ದೇಶಕ ಡಾ. ಬಲರಾಮ್ ಭಾರ್ಗವ ತಿಳಿಸಿದ್ದಾರೆ.
'ರಾಷ್ಟ್ರೀಯ ಕಾರ್ಯಪಡೆ ಮಟ್ಟದ ಸಭೆಯಲ್ಲಿ ಪ್ಲಾಸ್ಮಾ ಥೆರಪಿ ಬಗ್ಗೆ ನಾವು ಚರ್ಚೆಗಳನ್ನು ನಡೆಸಿದ್ದೇವೆ. ಹೆಚ್ಚೂಕಡಿಮೆ ಈ ನಿರ್ಧಾರದತ್ತ ಹೆಜ್ಜೆ ಇರಿಸಿದ್ದೇವೆ. ಪ್ಲಾಸ್ಮಾ ಥೆರಪಿ ಪರಿಣಾಮಕಾರಿಯಾಗುತ್ತಿಲ್ಲ. ಇದರಿಂದ ರೋಗಿಗಳು ಗುಣಮುಖರಾಗುತ್ತಿಲ್ಲ ಎನ್ನುವುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಪ್ಲಾಸ್ಮಾ ಥೆರಪಿಯನ್ನು ರಾಷ್ಟ್ರೀಯ ಮಾನದಂಡದಿಂದ ಕೈಬಿಡಲು ನಿರ್ಧರಿಸಿದ್ದೇವೆ' ಎಂದು ಅವರು ಹೇಳಿದ್ದಾರೆ.

'ಜಗತ್ತಿನ ಅತ್ಯಂತ ದೊಡ್ಡ ಪ್ಲಾಸ್ಮಾ ಥೆರಪಿ ಪ್ರಯೋಗವನ್ನು ಭಾರತದಲ್ಲಿ ನಡೆಸಲಾಗಿತ್ತು. 39 ಆಸ್ಪತ್ರೆಗಳಲ್ಲಿ 350ಕ್ಕೂ ಹೆಚ್ಚು ಸಂಶೋಧಕರು 464 ರೋಗಿಗಳ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗ ಮಾಡಲಾಗಿತ್ತು. ಈ ಅಧ್ಯಯನದ ವರದಿಯನ್ನು ಬ್ರಿಟಿಷ್ ಮೆಡಿಕಲ್ ಜರ್ನಲ್ನಲ್ಲಿ ಸೇರಿಸಿಕೊಳ್ಳಲು ಅನುಮೋದನೆ ದೊರಕಿದೆ. ಕೋವಿಡ್ 19 ರೋಗಿಗಳ ಮೇಲೆ ಪ್ಲಾಸ್ಮಾ ಥೆರಪಿಯ ಪಾತ್ರದ ಕುರಿತಾದ ಅಧ್ಯಯನ ವರದಿ ಶೀಘ್ರವೇ ಪ್ರಕಟವಾಗಲಿದೆ' ಎಂದು ತಿಳಿಸಿದ್ದಾರೆ.
'ಕೋವಿಡ್ನಿಂದ ಗುಣಮುಖರಾದವರಿಂದ ಸಂಗ್ರಹ ಮಾಡಿದ ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ನೀಡಿ ಪರೀಕ್ಷೆಗಳನ್ನು ನಡೆಸಲಾಗಿದೆ. ಆದರೆ ಈ ಪ್ರಯೋಗದಿಂದ ಕೋವಿಡ್ ರೋಗಿಗಳ ಮರಣ ಪ್ರಮಾಣ ಕಡಿಮೆಯಾಗಿಲ್ಲ. ಕೋವಿಡ್ ಬಂದಿದ್ದ ರೋಗಿಯಲ್ಲಿ ಚಿಕಿತ್ಸೆ ನೀಡಿದಾಗ ರೋಗ ಪ್ರತಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿತ್ತು. ಆದರೆ ರೋಗಿಯ ದೇಹದಲ್ಲಿ ಕೋವಿಡ್ ಉಲ್ಬಣವಾಗುವುದನ್ನು ಪ್ಲಾಸ್ಮಾಗೆ ತಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ರಾಷ್ಟ್ರೀಯ ಕೋವಿಡ್ 19 ಚಿಕಿತ್ಸೆಯ ಮಾನದಂಡದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಡುವ ಬಗ್ಗೆ ಚರ್ಚಿಸಲಾಗಿದೆ' ಎಂದಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications