ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ, ಓರ್ವ ಕಾನ್ಸ್ಟೇಬಲ್ಗೆ ಗಂಭೀರ ಗಾಯ
ರಾಯ್ಪುರ, ಏ.18: ಐಇಡಿ ಸ್ಫೋಟಗೊಂಡು ಓರ್ವ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ಸುಧಾರಿತ ಸಾಧನ ಸ್ಫೋಟದಿಂದ ಐಟಿಬಿಪಿ ಕಾನ್ಸ್ಟೇಬಲ್ ಮನ್ ಸಿಂಗ್ ಅವರಿಗೆ ಗಂಭೀರ ಗಾಯಗಳಾಗಿವೆ. ಇದೀಗ ಆರೋಗ್ಯ ಸ್ಥಿರವಾಗಿದೆ. ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಛತ್ತೀಸ್ಗಢದಲ್ಲಿ ನಕ್ಸಲರು ಸಿಪಿಎಂ ಅಭ್ಯರ್ಥಿ ಮೊಹಮ್ಮದ್ ಸಲೀಂ ಅವರ ಕಾರಿನ ಮೇಲೆ ದಾಳಿ ನಡೆಸಿ, ಕಾರಿನ ಗಾಜು ಒಡೆದು ಪುಡಿ ಪುಡಿ ಮಾಡಿದ್ದಾರೆ.













Click it and Unblock the Notifications