ಶ್ರೀನಗರ: ಬಾರಾಮುಲ್ಲಾ ಹೈವೇಲಿ IED ಬಾಂಬ್ ಇದ್ದ ಬ್ಯಾಗ್ ಪತ್ತೆ
ಶ್ರೀನಗರ, ಜುಲೈ 31: ಶ್ರೀನಗರ-ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ವೊಂದು ಪತ್ತೆಯಾಗಿದೆ. ಆ ಬ್ಯಾಗ್ ಅನ್ನು ಪೊಲೀಸರು ತೆರೆದು ನೋಡಿದಾಗ ಅದರಲ್ಲಿ ಸುಧಾರಿತ ಸ್ಫೋಟಕ ಸಾಧನ (IED) ಪತ್ತೆಯಾಗಿದೆ.
ಅದೃಷ್ಟವಶಾತ್ ಬ್ಯಾಗ್ನಲ್ಲಿದ್ದ ವಸ್ತು ಸ್ಪೋಟವಾಗದಂತೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಗಿತಗೊಂಡಿದ್ದ ವಾಹನಗಳ ಸಂಚಾರಕ್ಕೆ ಮತ್ತೆ ಅವಕಾಶ ಮಾಡಿಕೊಟ್ಟಿದ್ದಾರೆ. ಯಾವುದೇ ಹಾನಿಯಾಗಿಲ್ಲ ಎಂದು ಸೇನೆಯ ಹಿರಿಯ ಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಗ್ಗೆ ಶ್ರೀನಗರ-ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮಾನಾಸ್ಪದ ಬ್ಯಾಗ್ನ ಕುರಿತು ಮಾಹಿತಿ ಪೊಲೀಸರಿಗೆ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ತಳಿಯಿತು. ಜನರ ಜೀವ ರಕ್ಷಣೆಯ ಹಿತ ದೃಷ್ಟಿಯಿಂದ ಆ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿತ್ತು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ನಂತರ ಬಾಂಬ್ ನಿಷ್ಕ್ರಿಯ ದಳವನ್ನೂ ಸ್ಥಳಕ್ಕೆ ಕರೆಸಲಾಯಿತು.
ಭಾರತೀಯ ಸೇನೆಯ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿತ್ತು, ಶ್ರೀನಗರದ ಬಾರಾಮುಲ್ಲಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ಪೊಲೀಸ್ ಸಿಬ್ಬಂದಿ, 29RR ಮತ್ತು CRPF ತಂಡವು ಸ್ಥಳಕ್ಕೆ ಧಾವಿಸಿತು. ಬ್ಯಾಗ್ನಲ್ಲಿ ಸ್ಪೋಟಕವಿದೆಯೇ ಇಲ್ಲವೆ ಎಂಬುದರ ಖಚಿತತೆಗಾಗಿ ಬಾಂಬ್ ನಿಷ್ಕ್ರಿಯ ದಳ ಕರೆಸಲಾಯಿತು. ಯಾವುದೇ ಹಾನಿಯಾಗದಂತೆ IED ನಿಷ್ಕ್ರೀಯ ಮಾಡಿ ಬ್ಯಾಗ್ ಅನ್ನು ತೆರವುಗೊಳಿಸಲಾಯಿತು. ಹೆದ್ದಾರಿಯಲ್ಲಿ ಓಡಾಡುವ ಸವಾರರು, ಸಾರ್ವಜನಿಕರು ನಿಟ್ಟುಸಿರು ಬಿಟ್ಟರು.
ಪಕ್ಕದ ಪಾಕ್ನಲ್ಲಿ ಬಾಂಬ್ ಸ್ಪೋಟ: 40 ಸಾವು
ಭಾನುವಾರವಷ್ಟೇ ಭಯೋತ್ಪಾದಕರು ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಪೋಟಿಸುವ ಮೂಲಕ ಭೀಕರ ಕೃತ್ಯ ನಡೆಸಿದ್ದು, ಪರಿಣಾಮವಾಗಿ ಸುಮಾರು 40 ಜನರ ದೇಹಗಳು ಛಿದ್ರಗೊಂಡಿವೆ. ಈ ರಣಭಯಂಕರ ಘಟನೆಯಲ್ಲಿ ಸ್ಫೋಟದಲ್ಲಿ ಗಾಯಗೊಂಡವರ ಸಂಖ್ಯೆ ನೂರು ದಾಟಿದೆ.

ಪಾಕಿಸ್ತಾನದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಉಗ್ರರೇ ಹೆಚ್ಚಿರುವ ಪಾಕಿಸ್ತಾನದಲ್ಲಿ ಪಾಕ್ನ ಖೈಬರ್ ಪಖ್ತುಂಖ್ವಾ ಭಾಗದಲ್ಲಿ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಕುರಿತು ಪಾಕಿಸ್ತಾನವು ಅಗತ್ಯ ತನಿಖೆ ಕೈಗೊಳ್ಳಲು ಮುಂದಾಗಿದೆ. ಸಾವು ನೋವುಗಳ ಇನ್ನು ಹೆಚ್ಚಾಗವು ಭೀತಿ ಇದೆ. ಇಡಿ ಪಾಕಿಸ್ತಾನವೇ ಈ ಘಟನೆಯಿಂದ ಆತಂಕಕ್ಕೆ ಒಳಗಾಗಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications