ಬಿಜೆಪಿ ಗೆದ್ದರೆ ಭಾರತ ಹಿಂದು ಪಾಕಿಸ್ತಾನವಾಗುತ್ತೆ: ಶಶಿ ತರೂರ್
Recommended Video

ತಿರುವನಂತಪುರಂ, ಜುಲೈ 12: 'ಅಕಸ್ಮಾತ್ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಅದು ಭಾರತವನ್ನು ಹಿಂದು ಪಾಕಿಸ್ತಾನವನ್ನಾಗಿ ಮಾಡಲಿದೆ" ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಕೇರಳದ ತಿರುವನಂತಪುರಂ ನಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದ್ದ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
'ಬಿಜೆಪಿ ಗೆದ್ದರೆ ಅದೇ ಹೊಸ ಸಂವಿಧಾನವನ್ನು ಬರೆಯುತ್ತದೆ, ಪಾಕಿಸ್ತಾನದಂತೆ ಅಲ್ಪಸಂಖ್ಯಾತರಿಗೆ ಯಾವುದೇ ಗೌರವ ನೀಡುವುದಿಲ್ಲ' ಎಂದು ಸಹ ಅವರು ಹೇಳಿದ್ದಾರೆ.

"ಹಿಂದು ರಾಷ್ಟ್ರ ಎಂಬ ಪರಿಕಲ್ಪನೆಯೇ ಅಲ್ಪಸಂಖ್ಯಾತರಿಂದ ಸಮಾನತೆಯನ್ನು ಕಿತ್ತುಕೊಂಡಿದೆ. ಇದರಿಂದ ಹಿಂದು ಪಾಕಿಸ್ತಾನ ನಿರ್ಮಾಣವಾಗುತ್ತದೆ. ಮಹಾತ್ಮಾ ಗಾಂಧಿ, ನೆಹರೂ, ಸರ್ದಾರೆ ಪಟೇಲ್, ಮೌಲಾನಾ ಆಜಾದ್ ರಂಥ ಮಹಾನ್ ನಾಯಕರು ಹೋರಾಡಿದ್ದು ಇದಕ್ಕಲ್ಲ" ಎಂದು ಶಶಿ ತರೂರ್ ಹೇಳಿದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, 'ಬಿಜೆಪಿ 2019 ರಲ್ಲಿ ಅಧಿಕಾರಕ್ಕೆ ಬಂದರೆ ಭಾರತ ಹಿಂದು ಪಾಕಿಸ್ತಾನವಾಗಲಿದೆ ಎಂದು ಶಶಿ ತರೂರ್ ಹೇಳುತ್ತಾರೆ. ಕಾಂಗ್ರೆಸ್ಸು ಭಾರತ ಅಥವಾ ಹಿಂದುಗಳ ಹೆಸರಿಗೆ ಮಸಿ ಬಳಿಯುವ ಯಾವ ಅವಕಾಶವನ್ನೂ ಕಳೆದುಕೊಳ್ಳುವುದಿಲ್ಲ. 'ಹಿಂದು ಭಯೋತ್ಪಾದನೆ'ಯಿಂದ, 'ಹಿಂದು ಪಾಕಿಸ್ತಾನ' ಎಂಬಲ್ಲಿಯವರೆಗಿನ ಮಾತುಗಳು ಕಾಂಗ್ರೆಸ್ಸಿಗೆ ಮಾತ್ರ ಹೇಳಿಮಾಡಿಸಿದ್ದು' ಎಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications