ಮೀಸಲಾತಿ ನೀಡದಿದ್ದರೆ ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ: ಮರಾಠ ನಾಯಕ
ಮುಂಬೈ, ಡಿಸೆಂಬರ್ 9: ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ-ಶಿವಸೇನೆ-ಎನ್ಸಿಪಿ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ ಮರಾಠ ನಾಯಕ ಮನೋಜ್ ಜಾರಂಗೆ ಪಾಟೀಲ್ ಅವರು ಡಿಸೆಂಬರ್ 24, 2023 ರಂದು ಮರಾಠರಿಗೆ ಮೀಸಲಾತಿ ಸಿಗದಿದ್ದರೆ ಸಮುದಾಯವು ತಮ್ಮ ಶಕ್ತಿ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ನಾಗಪುರ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗ ಮತ್ತು ಸರ್ಕಾರ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ನ ನಿರ್ಧಾರಕ್ಕಾಗಿ ಕಾಯುತ್ತಿರುವ ಈ ವೇಳೆ ಜಾರಂಜ್ ಪಾಟೀಲ್ ಈ ಎಚ್ಚರಿಕೆ ನೀಡಿದ್ದಾರೆ. ಕಳೆದ 70 ವರ್ಷಗಳಿಂದ ಮರಾಠರಿಗೆ ಮೀಸಲಾತಿ ನಿರಾಕರಿಸಲಾಗಿದೆ. ಆದರೆ ಈಗ ಮೀಸಲಾತಿ ಪಡೆಯುವ ಸಮಯ ಬಂದಿದೆ ಎಂದು ಪಾಟೀಲ್ ಹೇಳಿದ್ದಾರೆ.

ಡಿಸೆಂಬರ್ 24 ರೊಳಗೆ ಸರ್ಕಾರವು ನಿರ್ಧಾರ ತೆಗೆದುಕೊಳ್ಳಲು ವಿಫಲವಾದರೆ, ಡಿಸೆಂಬರ್ 25 ರಂದು ನಾವು ನಮ್ಮ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ನಾವು ನಮ್ಮ ಶಕ್ತಿಯನ್ನು ತೋರಿಸುತ್ತೇವೆ. ಆದರೂ ಸರ್ಕಾರ ಹಾಗೂ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಆಶ್ವಾಸನೆ ಮೇಲೆ ನಂಬಿಕೆ ಇದೆ ಎಂದು ಜಾರಂಗೆ ಪಾಟೀಲ್ ಹೇಳಿದ್ದಾರೆ.
ಡಿಸೆಂಬರ್ 24 ರೊಳಗೆ ಮರಾಠರಿಗೆ ಮೀಸಲಾತಿ ಸಿಗುತ್ತದೆ ಎಂದು ನನಗೆ 100 ಪ್ರತಿಶತ ಖಚಿತವಾಗಿದೆ. ನಾವು ಬೆಳವಣಿಗೆಗಳ ಮೇಲೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸರ್ಕಾರ ನೇಮಿಸಿದ ಸಮಿತಿಯು ಹೆಚ್ಚಿನ ಸಂಖ್ಯೆಯಲ್ಲಿ ಕುಂಬಿ ಜಾತಿಯ ದಾಖಲೆಗಳನ್ನು ಕಂಡುಹಿಡಿದಿದೆ ಮತ್ತು ಮರಾಠರಿಗೆ ಮೀಸಲಾತಿಗಾಗಿ ಕಾನೂನು ಅಗತ್ಯವಿದೆ ಎಂದು ಅವರು ಹೇಳಿದರು.
ಹಿಂದೆ ಜಾರಂಗೆ ಪಾಟೀಲ್ ಅವರು ರಾಜ್ಯದ ಜಲ್ನಾ ಜಿಲ್ಲೆಯಲ್ಲಿ ಎರಡು ಸುತ್ತಿನ ಉಪವಾಸ ಸತ್ಯಾಗ್ರಹ ನಡೆಸಿ, ಮರಾಠರಿಗೆ ಮೀಸಲಾತಿ ಸಿಗಲಿದೆ ಎಂದು ಸರ್ಕಾರ ಭರವಸೆ ನೀಡಿದ ನಂತರವೇ ಆಮರಣಾಂತ ಉಪವಾಸ ಹಿಂಪಡೆದಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications