'ಪರಾಭವಗೊಂಡರೆ ಮೋದಿ ಕಥೆ ಮುಗಿದಂತೆಯೇ'
ನವದೆಹಲಿ, ನವೆಂಬರ್ 8: ಮುಂದಿನ ಲೋಕಸಭಾ ಚುನಾವಣೆಯು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ 'ಮಾಡು ಇಲ್ಲವೇ ಮಡಿ' ಎಂಬತಾಗುತ್ತದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಜೈರಾಂ ರಮೇಶ್ ಅವರು ಭವಿಷ್ಯ ನುಡಿದಿದ್ದಾರೆ.
'ಆದರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿಷಯದಲ್ಲಿ ಹಾಗಲ್ಲ. ಅವರ ಪಕ್ಷ ಒಂದು ಪಕ್ಷ ಚುನಾವಣೆಯಲ್ಲಿ ಸೋತರೂ ರಾಹುಲ್ ಚಾಲ್ತಿಯಲ್ಲಿರುತ್ತಾರೆ' ಎಂದೂ ಸಚಿವ ಜೈರಾಂ ರಮೇಶ್ ಹೇಳಿದ್ದಾರೆ.
ಈ ಮಧ್ಯೆ, 'ಸಚಿವ ಜೈರಾಂ ಮಾತುಗಳನ್ನು ಕೇಳಿಸಿಕೊಂಡ ಕಾಂಗ್ರೆಸ್ ಪಕ್ಷವು ಅವರು (ರಮೇಶ್) ಹಾಗೆ ಏಕೆ ಹೇಳಿದ್ದಾರೋ ಗೊತ್ತಾಗುತ್ತಿಲ್ಲ' ಎಂದು ಪ್ರತಿಕ್ರಿಯಿಸಿದೆ.

'ದೇಶಾದ್ಯಂತ ಮೋದಿ ಜ್ವರ ಕಂಡುಬರುತ್ತಿದೆಯೇ?' ಎಂದು ಕೇಳಿದ್ದಕ್ಕೆ 'ಅಂಥದ್ದೇನೂ ಇಲ್ಲ. ಕೊಚ್ಚಿಕೊಳ್ಳೋದ್ರಲ್ಲಿ ಬಿಜೆಪಿಯವರದ್ದು ಎತ್ತಿದ ಕೈ. 20 ವರ್ಷದಿಂದ ಅವರನ್ನು ಹತ್ತಿರದಿಂದ ನೋಡುತ್ತಾ ಬಂದಿದ್ದೇನೆ. ಕೊಚ್ಚಿಕೊಳ್ಳೋದ್ರಲ್ಲಿ ಅವರು ಇಡೀ ವಿಶ್ವದಲ್ಲೇ ಪಾಂಡಿತ್ಯ ಪಡೆದಿದ್ದಾರೆ' ಎಂದು ಸಚಿವ ಜೈರಾಂ ಪ್ರತಿಕ್ರಿಯಿಸಿದ್ದಾರೆ.
'ಬಿಜೆಪಿ ಗುಳ್ಳೆನರಿಯಿದ್ದಂತೆ. ಅದೇ ಕಾಂಗ್ರೆಸ್ ಪಕ್ಷ ಆನೆಯಂತೆ- ಅದು ಸಾವಕಾಶವಾಗಿ ನಿಶ್ಚಿತ ರೀತಿಯಲ್ಲಿ ಗುರಿ ತಲುಪುತ್ತದೆ' ಎಂದೂ ಸಚಿವ ಜೈರಾಂ ವರ್ಣಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications