ಉಗ್ರರ ದಮನ ಪಾಕಿಸ್ತಾನಕ್ಕೆ ಸಾಧ್ಯವಾಗದೇ ಇದ್ದರೆ ನಾವು ಸಹಾಯ ಮಾಡುತ್ತೇವೆ: ರಾಜನಾಥ್ ಸಿಂಗ್
ನವದೆಹಲಿ, ಜುಲೈ 26: 'ಪಾಕಿಸ್ತಾನದಲ್ಲಿ ಉಗ್ರರ ಸಾಮ್ರಾಜ್ಯ ಇನ್ನೂ ಸಕ್ರಿಯವಾಗಿರುವುದನ್ನು ಖುದ್ದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರೇ ಒಪ್ಪಿಕೊಂಡಿದ್ದಾರೆ. ಅವರನ್ನು ಮಟ್ಟಹಾಕಲು ಅವರಿಗೆ ಸಾಧ್ಯವಾಗದೇ ಇದ್ದಲ್ಲಿ ನಾವು ಅವರಿಗೆ ಸಹಾಯ ಮಾಡಲು ಸಿದ್ದರಿದ್ದೇವೆ'.
ಇದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮಾತು. ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಿದ್ದ ರಾಜನಾಥ್ ಸಿಂಗ್, 'ಭಯೋತ್ಪಾದನೆ ಇಡೀ ವಿಶ್ವಕ್ಕೆ ಮಾರಕ. ಇದನ್ನು ಮಟ್ಟಹಾಕಲು ಎರಡು ರಾಷ್ಟ್ರಗಳು ಯಾಕೆ ಜಂಟಿಯಾಗಿ ಕಾರ್ಯಾಚರಣೆ ನಡೆಸಬಾರದು' ಎಂದು ರಾಜನಾಥ್ ಹೇಳಿದ್ದಾರೆ.
ಭಾರತದ ಆಂತರಿಕ ಭದ್ರತೆ ಕಳೆದ ಕೆಲವು ವರ್ಷಗಳಲ್ಲಿ ಗಣನೀಯವಾಗಿ ಸುಧಾರಿಸಿದೆ. ವಿಶ್ವದ ಯಾವುದೇ ಶಕ್ತಿಯನ್ನು ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಹೇಳಿರುವ ರಾಜನಾಥ್, ಸಿಯಾಚಿನ್ ಮತ್ತು ಕಾರ್ಗಿಲ್ ನಲ್ಲಿ ನಮ್ಮ ಯೋಧರನ್ನು ಭೇಟಿ ಮಾಡಿದ್ದು ಹೆಮ್ಮೆಯೆನಿಸುತ್ತದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಿಸಲು ಅಂದಿನ ಪ್ರಧಾನಿ ವಾಜಪೇಯಿಯವರು ಲಾಹೋರ್ ಬಸ್ ಪ್ರಯಾಣ ಆರಂಭಿಸಿದರು. ಆದರೆ, ಪಾಕಿಸ್ತಾನ ತನ್ನ ನಿಜವಾದ ಬಣ್ಣವನ್ನು ತೋರಿಸಿತು ಎಂದು ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ.
ರಕ್ಷಣಾ ಸಚಿವನಾಗಿ ಪದಗ್ರಹಣ ಮಾಡಿದ ಕೂಡಲೇ, ನಮ್ಮ ಸೈನಿಕರನ್ನು ಭೇಟಿಯಾಗಲು ನಿರ್ಧರಿಸಿದೆ. ದೇಶದ ಗಡಿಕಾಯುತ್ತಿರುವ ಯೋಧರ ಯೋಗಕ್ಷೇಮ ವಿಚಾರಿಸುವುದು ನನ್ನ ಕರ್ತವ್ಯ ಎಂದು ರಾಜನಾಥ್ ಹೇಳಿದ್ದಾರೆ.
ಆಧುನಿಕ ಶಸ್ತ್ರಾಸ್ತ್ರಗಳನ್ನು ನಾವು ಹೊಂದಿದ್ದೇವೆ. ನಮ್ಮ ತಂಟೆಗೆ ಯಾರಾದರೂ ಬಂದರೆ, 1965, 1971 ಅಥವಾ 1999ಕ್ಕಿಂತಲೂ ಭರ್ಜರಿಯಾಗಿ ನಾವು ಗೆಲುವು ಸಾಧಿಸಲಿದ್ದೇವೆ ಎಂದು ರಾಜನಾಥ್ ಸಿಂಗ್ ಎಂದು ವಿಶ್ವಾಸದ ಮಾತನಾಡಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications