ಪಾಸ್ಪೋರ್ಟ್ ನಲ್ಲಿ ಹಿಂದಿ ಬರುವುದಾದರೆ ಕನ್ನಡ ಯಾಕೆ ಬರಬಾರದು?
ನವದೆಹಲಿ, ಜೂನ್ 23: 'ಪಾಸ್ಪೋರ್ಟ್ ಗಳು ಇನ್ನು ಮುಂದೆ ಹಿಂದಿ ಭಾಷೆಯಲ್ಲೂ ಇರಲಿವೆ' ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಈ ಮೂಲಕ ನಮ್ಮ ಮೇಲೆ ಮತ್ತೊಮ್ಮೆ ಹಿಂದಿ ಹೇರಿಕೆಯ ಸವಾರಿಗೆ ಕೇಂದ್ರ ಮುಂದಾಗಿದೆ. ಜತೆಗೆ ಹಿಂದಿ ಇರಬಹುದಾದರೆ ಕನ್ನಡದಲ್ಲಿ ಪಾಸ್ಪೋರ್ಟ್ ಗಳು ಯಾಕಿರಬಾರದು ಎಂಬ ಪ್ರಶ್ನೆ ಉದ್ಭವಿಸಿದೆ.
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆಯ ಬಗ್ಗೆ ತೀವ್ರ ಅಪಸ್ವರಗಳು ಕೇಳಿ ಬರುತ್ತಿವೆ. ಇದೇ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನವದೆಹಲಿಯಲ್ಲಿ ದ್ವಿಭಾಷಾ ಪಾಸ್ಪೋರ್ಟ್ ಘೋಷಣೆ ಮಾಡಿದ್ದಾರೆ. "ಇನ್ನು ಮುಂದೆ ಪಾಸ್ಪೋರ್ಟ್ ಗಳು ಹಿಂದಿ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿ ಇರಲಿವೆ," ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಪಾಸ್ಪೋರ್ಟ್ ಸೇವಾ ದಿವಸದಲ್ಲಿ ಸುಷ್ಮಾ ಈ ಘೋಷಣೆ ಮಾಡಿದ್ದಾರೆ.

ಈ ಮೂಲಕ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಮೇಲೆ ಮತ್ತೊಂದು ಹಿಂದಿ ಹೇರಿಕೆಗೆ ಕೇಂದ್ರ ಸರಕಾರ ಮುಂದಾಗಿದೆ. ಹಿಂದಿಗೆ ಎಲ್ಲಿಲ್ಲದ ಪ್ರಾಶಸ್ತ್ಯ ಕೊಡುವ ಕೇಂದ್ರ ಸರಕಾರ ಪ್ರಾದೇಶಿಕ ಭಾಷೆಗಳನ್ನು ಮಾತ್ರ ತುಚ್ಛವಾಗಿ ಕಾಣುತ್ತಿದೆ. ಬಿಡಿಗಾಸಿನ ಮರ್ಯಾದಿಯನ್ನೂ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ನೀಡುತ್ತಿಲ್ಲ.
ಹಿಂದಿಯಲ್ಲಿ ಪಾಸ್ಪೋರ್ಟ್ ಇರಬಹುದಾದರೆ ಕನ್ನಡದಲ್ಲಿಯೂ ಪಾಸ್ಪೋರ್ಟ್ ಇರಲು ಯಾಕೆ ಸಾಧ್ಯವಿಲ್ಲ? ಪಾಸ್ಪೋರ್ಟ್ ಜತೆಗೆ ಪಾಸ್ಪೋರ್ಟ್ ಅರ್ಜಿಯೂ ಕನ್ನಡದಲ್ಲಿ ಇರಬೇಕು. ಇದು ನಮ್ಮ ಹಕ್ಕು ಎಂದು ಕೇಂದ್ರ ಸರಕಾರವನ್ನು ಕೊರಳು ಪಟ್ಟಿ ಹಿಡಿದು ಕನ್ನಡಿಗರೀಗ ಕೇಳಬೇಕಾಗಿದೆ.
EAM @SushmaSwaraj announces 10% reduction in passport fee for applicants undr 8 yrs & over 60 yrs pic.twitter.com/qbam9LE7TO
— Gopal Baglay (@MEAIndia) June 23, 2017
ಶೇ. 10 ದರ ಕಡಿತ
ಇನ್ನು ಇದೇ ವೇಳೆ 8 ವರ್ಷ ಕೆಳಗಿನ ಮಕ್ಕಳಿಗೆ ಮತ್ತು 60 ವರ್ಷ ದಾಟಿದ ಹಿರಿಯರಿಗೆ ಪಾಸ್ಪೋರ್ಟ್ ಅರ್ಜಿ ಶುಲ್ಕದಲ್ಲಿ ಶೇಕಡಾ 10 ರಿಯಾಯಿತಿಯನ್ನು ಸುಷ್ಮಾ ಸ್ವರಾಜ್ ಘೋಷಿಸಿದ್ದಾರೆ.
-
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications