ಈ 'ಸರ್ವಾಧಿಕಾರಿ' ಸರ್ಕಾರ ಮರಳಿದರೆ ಭವಿಷ್ಯದಲ್ಲಿ ಮುಂದೆ ಚುನಾವಣೆಯೇ ಇರುವುದಿಲ್ಲ: ಮಮತಾ ಬ್ಯಾನರ್ಜಿ
ಪಾಟ್ನಾ, ಜೂನ್. 23: ಈ "ಸರ್ವಾಧಿಕಾರಿ" ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ಇರುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶುಕ್ರವಾರ ಎಚ್ಚರಿಸಿದ್ದಾರೆ. ಹೀಗಾಗಿಯೇ ಎಲ್ಲಾ ಬಿಜೆಪಿಯೇತರ ಪಕ್ಷಗಳ ನಾಯಕರು 2024 ರಲ್ಲಿ ಕೇಸರಿ ಪಕ್ಷದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದಾರೆ.
ಈ ಬಾರಿ ಈ ಸರ್ವಾಧಿಕಾರದ ಸರಕಾರ ಮರಳಿ ಬಂದರೆ ಮುಂದೆ ಚುನಾವಣೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. "ನಾವು ಒಗ್ಗಟ್ಟಾಗಿದ್ದೇವೆ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ. ನಮ್ಮನ್ನು ಪ್ರತಿಪಕ್ಷಗಳು ಎಂದು ಕರೆಯಬೇಡಿ, ನಾವು ದೇಶಭಕ್ತರು ಮತ್ತು ನಾವು 'ಭಾರತ ಮಾತಾ'ವನ್ನು ಪ್ರೀತಿಸುತ್ತೇವೆ. ಮಣಿಪುರ ಹೊತ್ತಿ ಉರಿಯುವಾಗ ನಮಗೂ ನೋವಾಗುತ್ತದೆ. ಬಿಜೆಪಿ ಸರ್ವಾಧಿಕಾರವಾಗಿ ಸರ್ಕಾರ ನಡೆಸುತ್ತಿದೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

"ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಮೊದಲ ಸಭೆಯನ್ನು ಆಯೋಜಿಸಲಾಗಿದೆ ಏಕೆಂದರೆ, ಪಾಟ್ನಾದಿಂದ ಪ್ರಾರಂಭವಾಗುವ ಯಾವುದೇ ಕೆಲಸವು ಸಾರ್ವಜನಿಕ ಚಳವಳಿಯ ಆಕಾರವನ್ನು ತೆಗೆದುಕೊಳ್ಳುತ್ತದೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ನಾವು ನಿರ್ಧರಿಸುತ್ತೇವೆ. ಬಿಜೆಪಿ ಇತಿಹಾಸವನ್ನು ಬದಲಾಯಿಸಲು ಬಯಸುತ್ತದೆ, ಆದರೆ ಇತಿಹಾಸವನ್ನು ಉಳಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಇತರ ನಾಯಕರೊಂದಿಗೆ ಬಂದಿದ್ದ ಮಮತಾ ಬ್ಯಾನರ್ಜಿ, ಹಲವಾರು ಮುಖ್ಯಮಂತ್ರಿಗಳು ಬಂದಿದ್ದ ಈ ಸಭೆ ಉತ್ತಮ ಸಭೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರವು ಮಾಡಿದ ದೌರ್ಜನ್ಯಗಳು ಭಯಾನಕ ಎಂದು ಹೇಳಿದ ಅವರು, ಆಡಳಿತವು ತಮ್ಮ ವಿರುದ್ಧ ಮಾತನಾಡುವ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಇಡಿ, ಸಿಬಿಐ ಮತ್ತು ಇತರ ಏಜೆನ್ಸಿಗಳನ್ನು 'ಚುಪಾ ರುಸ್ತುಂ' ಎಂಬಂತೆ ಪ್ರತಿಪಕ್ಷ ನಾಯಕರ ಹಿಂದೆ ಬಿಡಲಾಗಿದೆ. ಅವರು ತಮ್ಮ ವಿರುದ್ಧ ಮಾತನಾಡುವ ವಿರೋಧ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಾರೆ. ಇದು ಆಗಬಾರದು. ನಿರುದ್ಯೋಗ, ಜನಸಾಮಾನ್ಯರು, ದಲಿತರು, ಮಹಿಳೆಯರ ಮೇಲಿನ ದೌರ್ಜನ್ಯಗಳು ಅಥವಾ ಕುಸಿಯುತ್ತಿರುವ ಆರ್ಥಿಕತೆಯ ಬಗ್ಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲ" ಎಂದು ಅವರು ಆರೋಪಿಸಿದ್ದಾರೆ.
"ಕೇಂದ್ರದ ಬಿಜೆಪಿ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಮತ್ತು ನಾವು ಒಟ್ಟಾಗಿ ಹೋರಾಡಬೇಕು ಮತ್ತು ಕರಾಳ ಕಾನೂನುನನ್ನು ವಿರೋಧಿಸಬೇಕು" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪುನರುಚ್ಚರಿಸಿದ್ದಾರೆ.
ಇನ್ನು, 2024 ರಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಆಯಾ ರಾಜ್ಯಗಳಲ್ಲಿ ಹೇಗೆ ಒಟ್ಟಾಗಿ ಮುನ್ನಡೆಯಬೇಕು ಎಂಬುದರ ಕುರಿತು ಕಾರ್ಯಸೂಚಿಯನ್ನು ಸಿದ್ಧಪಡಿಸಲು ಜುಲೈನಲ್ಲಿ ಶಿಮ್ಲಾದಲ್ಲಿ ಮತ್ತೆ ಸಭೆ ನಡೆಸಲಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಸಂಸದ ಸಂಜಯ್ ರಾವತ್ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications