ಈ ಶಂಕಿತ ಭಯೋತ್ಪಾದಕನಿಗೆ ಎಷ್ಟೊಂದು ಅಭಿಮಾನಿಗಳು!
2005 ರಲ್ಲಿ ಬೆಂಗಳೂರಿನ ಐಐಎಸ್ಸಿ ಮೇಲೆ ನಡೆದ ದಾಳಿ ಕುರಿತಂತೆ ತಾನು ಭಯೋತ್ಪಾದಕರಿಗೆ ಸಹಾಯ ಮಾಡಿದ್ದು ನಿಜ ಎಂದು ಆರೋಪಿಯೇ ಒಪ್ಪಿಕೊಂಡ ಮೇಲೂ, ಆತನನ್ನು ಅಭಿಮಾನದಿಂದ ಕಾಣುವವರಿದ್ದಾರೆ!
ತ್ರಿಪುರ, ಮಾರ್ಚ್ 30: ಶಂಕಿತ ಭಯೋತ್ಪಾದಕರಿಗೂ ಅಭಿಮಾನಿಗಳಿರ್ತಾರಾ? ತ್ರಿಪುರದಲ್ಲಿ ಪ್ಲಂಬರ್ ಎಂದುಕೊಂಡು ನೂರಾರು ಜನರ ವಿಶ್ವಾಸ ಗಳಿಸಿದ್ದ ಹಬಿಬ್ ಮಿಯಾ ಎಂಬ ಶಂಕಿತ ಭಯೋತ್ಪಾದಕನಿಗೆ ಆ ಊರಿನ ತುಂಬಾ ಅಭಿಮಾನಿಗಳಿದ್ದಾರೆ!
ಆತ ತಾನು ಭಯೋತ್ಪಾದಕರಿಗೆ ಸಹಾಯ ಮಾಡಿದ್ದು ನಿಜ ಎಂದು ಒಪ್ಪಿಕೊಂಡ ಮೇಲೂ, ಆತನನ್ನು ಅಭಿಮಾನದಿಂದ ಕಾಣುವವರಿದ್ದಾರೆ! ಹೌದು, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ಮೇಲಾದ ದಾಳಿ ಪ್ರಕರಣದ ಆರೋಪಿ ಹಬಿಬ್ ಮಿಯಾನನ್ನು ಮಾರ್ಚ್ 18 ರಂದು ಕೋರ್ಟಿಗೆ ಕರೆದೊಯ್ಯುತ್ತಿದ್ದಾಗ ಆತನನ್ನು ಸುತ್ತುವರಿದ ಆತನ ಅಭಿಮಾನಿಗಳು ಪೊಲೀಸರಲ್ಲಿ ದಿಗುಲುಂಟುಮಾಡಿದ ಘಟನೆ ನಡೆದಿದೆ.

ಅಭಿಮಾನಿಗಳ ದಂಡು!
ತ್ರಿಪುರದ ರಾಜಧಾನಿ ಅಗರ್ತಲಾದಲ್ಲಿ ಈ ಭಯೋತ್ಪಾದಕನ ಅಭಿಮಾನಿಗಳ ದಂಡೇ ಇದೆಯಂತೆ. ಎಲ್ಲರ ವಿಶ್ವಾಸ ಗಳಿಸುತ್ತಲೇ ದೇಶದ್ರೋಹದ ಕೆಲಸವನ್ನು ಸದ್ದಿಲ್ಲದೆ ಮಾಡುತ್ತಿದ್ದ ಹಬಿಬ್ ಇದೀಗ ಪೊಲೀಸರಿಗೆ ಅತಿಥಿಯಾಗಿದ್ದು ನಿಜವಾದರೂ, ಆತ ಈಗಾಗಲೇ ಭಾರತಕ್ಕೆ ನುಸುಳಲು ಸಹಾಯ ಮಾಡಿದ ಭಯೋತ್ಪಾದಕರ ಸಂಖ್ಯೆ ಎಷ್ಟೆಂಬುದು ಬಹುಶಃ ಅವನಿಗೂ ಲೆಕ್ಕಕ್ಕೆ ಸಿಕ್ಕಿರಲಿಕ್ಕಿಲ್ಲ!

ಒಂದು ನುಸುಳುವಿಕೆಗೆ 1000 ರೂ.!
ಒಬ್ಬೊಬ್ಬ ಬಾಂಗ್ಲಾದೇಶೀಯನನ್ನು ಭಾರತಕ್ಕೆ ನುಸುಳಲು ಸಹಾಯ ಮಾಡುತ್ತಿದ್ದ ಹಬೀಬ್ ಒಬ್ಬನ ನುಸುಳುವಿಕೆಗೆ ಪಡೆಯುತ್ತಿದ್ದ ಹಣ 1000 ರೂ.! ಆ ಒಂದು ಸಾವಿರ ರೂಪಾಯಿಗೆ ಇಡೀ ದೇಶದ ಭದ್ರತೆಯನ್ನು, ಸಮಗ್ರತೆಯನ್ನು, ಶಾಂತಿಯನ್ನು ಮಾರಾಟಮಾಡುತ್ತಿದ್ದ ಈತನ ವಿಚಾರಣೆ ನಡೆಯುತ್ತಿದ್ದು, ಹಲವು ಆಘಾತಕಾರಿ ವಿಷಯಗಳು ಹೊರಬರುವ ಸಂಭವವಿದೆ.

ತಪ್ಪೊಪ್ಪಿಕೊಂಡ ಹಬೀಬ್
2003 ರಲ್ಲಿ ಕನಿಷ್ಠವೆಂದರೂ 45 ಭಯೋತ್ಪಾದಕರು ಭಾರತದೊಳಕ್ಕೆ ಬರುವುದಕ್ಕೆ ಮತ್ತು ಹೊರಹೋಗುವುದಕ್ಕೆ ತಾನು ಸಹಾಯ ಮಾಡಿದ್ದೇನೆಂದು ಸ್ವತಃ ಹಬಿಬ್ ಪೊಲೀಸರೆದುರು ಒಪ್ಪಿಕೊಂಡಿದ್ದಾನೆ!

ಸಮಜಾಯಿಷಿ ಕೇಳಿದ ಅಭಿಮಾನಿಗಳು
ಇಂಥ ರಾಷ್ಟ್ರ ದ್ರೋಹಿಯನ್ನು ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದರೆ, ನಮ್ಮ ನೆಚ್ಚಿನ ಪ್ಲಂಬರ್ ನನ್ನು ಯಾಕೆ ಬಂಧಿಸಿದ್ದೀರಿ ಎಂದು ವಿವರ ನೀಡುವಂತೆ ಇಲ್ಲಿನ ಜನ ಪೊಲೀಸರನ್ನು ಒತ್ತಾಯಿಸುತ್ತಿದ್ದಾರೆ! ಅಷ್ಟೇ ಅಲ್ಲ, ತ್ರಿಪುರದ ಕೋರ್ಟಿನತ್ತ ಈತನನ್ನು ಕರೆದೊಯ್ಯುವಾಗ ನೆರೆದಿದ್ದ 60 ಕ್ಕೂ ಹೆಚ್ಚು ಜನ ಆತನ ಬಂಧನಕ್ಕೆ ಸಮಜಾಯಿಷಿ ನೀಡುವಂತೆ ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ!

ಬೆಚ್ಚಿತ್ತು ಬೆಂಗಳೂರು !
ಶಿಕ್ಷಣ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಐಐಎಸ್ಸಿ ಮೇಲೆ 2005 ರ ಡಿಸೆಂಬರ್ 28 ರಂದು ನಡೆದ ದಾಳಿಯಲ್ಲಿ ಪ್ರೊ.ಮುನೀಶ್ ಚಂದ್ರ ಪುರಿ ಎಂಬ ಉಪನ್ಯಾಸಕರು ಹತರಾಗಿದ್ದರು. ನಾಲ್ಕು ಜನರಿಗೆ ಗಂಭೀರಗಾಯವಾಗಿತ್ತು. ಈ ಪ್ರಕರಣ ಉದ್ಯಾನನಗರಿಯ ಜನರ ನೆಮ್ಮದಿಯ ನಿದ್ದೆಯನ್ನೇ ಕಸಿದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಹಬೀಬ್ ಬಂಧನ ಪ್ರಕ್ರಿಯೆಯಲ್ಲಿ ಕರ್ನಾಟಕ ಪೊಲೀಸ್ ಸಹ ಸಾಥ್ ನೀಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications