Get Updates
Get notified of breaking news, exclusive insights, and must-see stories!

ಐಐಟಿ ಬಾಂಬೆ ವಿದ್ಯಾರ್ಥಿ ಸಾವು: ತಾಯಿಯಿಂದ ಜಾತಿ ತಾರತಮ್ಯ ಆರೋಪ

ಮುಂಬೈ, ಜೂನ್ 1: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (ಐಐಟಿಬಿ)ಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ ದರ್ಶನ್ ಸೋಲಂಕಿ ಅವರ ತಾಯಿಗೆ ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯ ಅಸ್ತಿತ್ವದಲ್ಲಿದೆ ಎಂದು ಹೇಳಲಾಗಿತ್ತು ಎಂದು ಪೊಲೀಸರು ಪ್ರಕರಣದಲ್ಲಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

ದರ್ಶನ್‌ ಸೋಲಂಕಿಯ ಸಹಪಾಠಿಗಳು ತಮ್ಮ ಜಾತಿಯ ಬಗ್ಗೆ ತಿಳಿದಾಗ ಅವರ ನಡವಳಿಕೆಯು ಬದಲಾಗಿದೆ ಎಂದು ದೂರವಾಣಿ ಸಂಭಾಷಣೆಯ ಸಮಯದಲ್ಲಿ ಅವನು ತನ್ನ ತಾಯಿಗೆ ಹೇಳಿದ್ದನು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ನಗರ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸೋಲಂಕಿ ಅವರ ತಾಯಿಯ ಹೇಳಿಕೆ ನೀಡಿದ್ದಾರೆ.

Indian Institute of Technology Bombay

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ಸಹ ವಿದ್ಯಾರ್ಥಿ ಅರ್ಮಾನ್ ಖತ್ರಿ ಎಂದು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ. ಅಹಮದಾಬಾದ್ ಮೂಲದ ಬಿ ಟೆಕ್ (ರಾಸಾಯನಿಕ) ಕೋರ್ಸ್‌ನ ಪ್ರಥಮ ವರ್ಷದ ವಿದ್ಯಾರ್ಥಿ ಸೋಲಂಕಿ, ಫೆಬ್ರವರಿ 12, 2023 ರಂದು ಮುಂಬೈನ ಪೊವೈ ಪ್ರದೇಶದ ಐಐಟಿಬಿ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದನು.

ಧರ್ಮದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ ನಂತರ ಅರ್ಮಾನ್‌ ಖತ್ರಿ ದರ್ಶನ್‌ ಸೋಲಂಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸೋಲಂಕಿ ಅವರ ತಾಯಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಡಿಸೆಂಬರ್ 2022 ರಲ್ಲಿ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಸೋಲಂಕಿ ತನ್ನ ಸಹೋದರಿಗೆ ಪ್ರಧಾನ ಸಂಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಹೇಳಿದರು.

ವಿದ್ಯಾರ್ಥಿ ದರ್ಶನ್‌ ಜಾತಿಯ ಬಗ್ಗೆ ಸ್ನೇಹಿತರು ತಿಳಿದುಕೊಂಡಾಗ ಅವರ ವರ್ತನೆಯಲ್ಲಿ ಬದಲಾವಣೆಯಾಗಿದೆ ಎಂದು ಸೋಲಂಕಿ ಅವರ ತಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 2023 ರಲ್ಲಿ ಮಕರ ಸಂಕ್ರಾಂತಿ ರಜೆಯ ಸಮಯದಲ್ಲಿ ಸೋಲಂಕಿ ಅವರು ತಮ್ಮ ಸಹೋದರಿಯನ್ನು ಭೇಟಿ ಮಾಡಿದಾಗ ಈ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

Indian Institute of Technology Bombay

ಫೆಬ್ರವರಿ 12 ರಂದು ಅವರು ಮಧ್ಯಾಹ್ನ 12.20 ರ ಸುಮಾರಿಗೆ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ದರ್ಶನ್‌ ಮಾತನಾಡಿದ್ದರು. ಫೆಬ್ರವರಿ 14 ರಂದು ಮನೆಗೆ ಬರುವುದಾಗಿ ಹೇಳಿದ್ದ ಅವರು ತಮ್ಮ ಎಲ್ಲಾ ಸಂಬಂಧಿಕರನ್ನು ಭೇಟಿಯಾಗಲು ಆಹ್ವಾನಿಸಬೇಕು ಎಂದಿದ್ದ ಎಂದುಅವರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಸಾಯುವುದಕ್ಕೆ ಕೇವಲ ಎರಡು ಗಂಟೆಗಳ ನಂತರ ದರ್ಶನ್‌ ಸೋಲಂಕಿ ಅವರ ತಂದೆಗೆ ಅವರ ಮಗ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ಕರೆ ಬಂದಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೋಲಂಕಿ ಅವರ ಸಹೋದರಿ ಮತ್ತು ಚಿಕ್ಕಮ್ಮ ಕೂಡ ತಮ್ಮ ಹೇಳಿಕೆಗಳಲ್ಲಿ ದರ್ಶನ್‌ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಜಾತಿಯ ಬಗ್ಗೆ ತಿಳಿದಾಗ ಇತರ ವಿದ್ಯಾರ್ಥಿಗಳ ನಡವಳಿಕೆಯಲ್ಲಿ ಬದಲಾವಣೆಯನ್ನು ಗಮನಿಸಿದ್ದಾರೆ ಎಂದು ಹೇಳಿದ್ದರು.

ದರ್ಶನ್‌ ತಮ್ಮ ವ್ಯಾಸಂಗದ ಕುರಿತು ಮಾತನಾಡಿದ್ದರು. ಆದರೆ ಕೆಲವು ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಅವರು ಉಚಿತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಯಾವಾಗಲೂ ಹೇಳುತ್ತಿದ್ದರು ಮತ್ತು ಅವರನ್ನು ನಿಂದಿಸುತ್ತಿದ್ದರು ಎಂದು ಸೋಲಂಕಿ ಅವರ ಚಿಕ್ಕಮ್ಮ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಪಟ್ಟಿಯಲ್ಲಿ ಕೆಲವು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಸೇರಿದಂತೆ 55 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+