2019ರಿಂದ ಖರಗ್ಪುರ ಐಐಟಿಯಲ್ಲಿ ವೈದ್ಯಕೀಯ ಕೋರ್ಸ್
ಪ್ರತಿಷ್ಠಿತ ಖರಗ್ಪುರ್ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಇಂಜಿನಿಯರಿಂಗ್ (ಐಐಟಿ) ಸಂಸ್ಥೆಯು 2019ರಿಂದ ತನ್ನಲ್ಲಿ ವೈದ್ಯಕೀಯ ಕೋರ್ಸ್ ಆರಂಭಿಸಲಾಗುವುದು ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.
ಖಾರಗ್ ಪುರ, ಏಪ್ರಿಲ್ 6: ಮೇಲಿನ ಹೆಡ್ ಲೈನ್ ನೋಡಿದರೆ, ಛೇ.. ಛೇ.. ಎಲ್ಲಾದ್ರೂ ಉಂಟಾ...? ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಡಿಕಲ್ ಆಗುತ್ತೆ ಅಂದ್ರೆ ಏನರ್ಥ? ಏನು ತಮಾಷೆ ಮಾಡ್ತಾ ಇದೀರ ಎಂದು ಕೇಳಬಹುದು. ಆದರೆ, ಹಾಗೆ ಕೇಳೋ ಮುನ್ನ ಈ ಸುದ್ದಿ ಓದಿದರೆ ಒಳ್ಳೆಯದು.
ಪ್ರತಿಷ್ಠಿತ ಖರಗ್ಪುರ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಇಂಜಿನಿಯರಿಂಗ್ (ಐಐಟಿ) ಸಂಸ್ಥೆಯು 2019ರಿಂದ ತನ್ನಲ್ಲಿ ವೈದ್ಯಕೀಯ ಕೋರ್ಸ್ ಆರಂಭಿಸಲಾಗುವುದು ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ಆದರೆ, ಅಚ್ಚರಿಯೆಂದರೆ, ಐಐಟಿ ಎಂದರೆ ಸಾಮಾನ್ಯವಾಗಿ ಅದು ಇಂಜಿನಿಯರಿಂಗ್ ಕೋರ್ಸ್ ಗಳನ್ನು ಸೂಚಿಸುವ ಪದ. ಆದರೆ, ಅದಕ್ಕೂ ತನ್ನ ವೈದ್ಯಕೀಯ ಕೋರ್ಸಿಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿರುವ ಕಾಲೇಜಿನ ಆಡಳಿತ ಮಂಡಳಿ ಹೇಳಿದೆ. ಅಲ್ಲದೆ, ಐಐಟಿ ಹೆಸರಿನಲ್ಲೇ ವೈದ್ಯಕೀಯ ಕಾಲೇಜು ಆರಂಭಿಸುವುದಾಗಿ ಸ್ಪಷ್ಟಪಡಿಸಿದೆ.
ಇದಲ್ಲದೆ, ಖರಗ್ಪುರ ಇಂಜಿಯರಿಂಗ್ ಕಾಲೇಜಿನ ಆವರಣದಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯೊಂದನ್ನು ಆರಂಭಿಸಲು ಕಾಲೇಜಿನ ಆಡಳಿತ ಮಂಡಳಿಯು ಸಿದ್ಧವಾಗಿದ್ದು, 2018ರ ಮಧ್ಯಭಾಗದಿಂದ ಅದು ಸೇವೆಗೆ ಸಿದ್ಧವಾಗಲಿದೆ. ಇದೇ ಆಸ್ಪತ್ರೆಯೇ ಮುಂದೆ 2019ರಲ್ಲಿ ತಾನು ಆರಂಭಿಸಲಿರುವ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲು ಬಳಕೆಯಾಗಲಿದೆ ಎಂದು ಆಡಳಿತ ಮಂಡಳಿ ಹೇಳಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications