ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿತದಲ್ಲಿ ಮೂರು ಸಾವು, ಹಲವರು ಸಿಲುಕಿರುವ ಶಂಕೆ
ರಾಂಚಿ, ಜೂನ್. 09: ಜಾರ್ಖಂಡ್ನ ಭೌರಾ ಕಾಲೇರಿ ಪ್ರದೇಶದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಶುಕ್ರವಾರ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಧನ್ಬಾದ್ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ (ಬಿಸಿಸಿಎಲ್) ಭೌರಾ ಕಾಲೇರಿ ಏರಿಯಾದಲ್ಲಿ ಈ ಘಟನೆ ಸಂಭವಿಸಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು, ಸಂತ್ರಸ್ತರನ್ನು ಪತ್ತೆಹಚ್ಚಿದ ನಂತರ ಸತ್ತವರ ಸಂಖ್ಯೆ ಮತ್ತು ಕುಸಿತದಲ್ಲಿ ಸಿಕ್ಕಿಬಿದ್ದಿರುವ ಅಥವಾ ಗಾಯಗೊಂಡವರ ನಿಖರವಾದ ಸಂಖ್ಯೆಯು ತಿಳಿಯುತ್ತದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಕುಮಾರ್ ಹೇಳಿದ್ದಾರೆ.
#WATCH | Jharkhand: A portion of BCCL (Bharat Coking Coal Limited) open mine collapsed in Dhanbad. One body has been recovered. Further details awaited. pic.twitter.com/ykcOzcSKEV
— ANI (@ANI) June 9, 2023

ಪ್ರತ್ಯಕ್ಷದರ್ಶಿಯೊಬ್ಬರು ಹೇಳುವಂತೆ ಗಣಿಗಾರಿಕೆಗೆ ಒಳಗಾದಾಗ ಅನೇಕ ಸ್ಥಳೀಯ ಗ್ರಾಮಸ್ಥರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು. ಧನ್ಬಾದ್ನಲ್ಲಿ ಬಿಸಿಸಿಎಲ್ (ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್) ತೆರೆದ ಗಣಿಯ ಒಂದು ಭಾಗ ಕುಸಿದಿದೆ. ಓರ್ವ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

"ಸ್ಥಳೀಯರ ಸಹಾಯದಿಂದ ಮೂವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ" ಎಂದು ಭೌರಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿನೋದ್ ಓರಾನ್ ಹೇಳಿದ್ದಾರೆ.












Click it and Unblock the Notifications