ರಾಮ್ ರಹೀಮ್ ಸಿಂಗ್ ಆಶ್ರಮ ನೋಡಿ ಬೆಚ್ಚಿಬಿದ್ದ ಪೊಲೀಸರು
ಚಂಡೀಗಢ, ಸೆಪ್ಟೆಂಬರ್ 11 : ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಮ್ ರಹೀಮ್ ಸಿಂಗ್ ಆಶ್ರಮ ನೋಡಿ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ಬಾಬಾ ಆಶ್ರಮದಲ್ಲಿ ರಹಸ್ಯ ಸುರಂಗ, ಎಕೆ 47 ಬಂದೂಕಿನ ಗುಂಡುಗಳು ಪತ್ತೆಯಾಗಿವೆ.
ರಹಸ್ಯ ಸುರಂಗ, ಅಕ್ರಮವಾದ ಪಟಾಕಿ ಕಾರ್ಖನೆ, ಎಕೆ 47 ಬಂದೂಕಿನ ಗುಂಡು ಮುಂತಾದವು ರಾಮ್ ರಹೀಮ್ ಸಿಂಗ್ ಡೇರಾ ಸಚ್ಚಾಸೌಧ ಆಶ್ರಮದಲ್ಲಿ ಪತ್ತೆಯಾಗಿವೆ. ಆಶ್ರಮದಲ್ಲಿರುವ ಆಸ್ಪತ್ರೆಯಲ್ಲಿ ಸತ್ತ ವ್ಯಕ್ತಿಗಳ ಕುರಿತು ಸರಿಯಾದ ದಾಖಲೆಗಳನ್ನು ಇಟ್ಟಿಲ್ಲ.

ಯಾವುದೇ ಅನುಮತಿಯನ್ನು ಪಡೆಯದೇ ಆಶ್ರಮದಲ್ಲಿ ಚರ್ಮ ಬ್ಯಾಂಕ್ ಆರಂಭಿಸಿರುವುದು ಬೆಳಕಿಗೆ ಬಂದಿದೆ. ಆಸ್ಪತ್ರೆ ನಿರ್ಮಾಣ ಮಾಡುವಾಗಲೂ ರಾಮ್ ರಹೀಮ್ ಸಿಂಗ್ ಯಾವುದೇ ಕಾನೂನು ಪಾಲಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಬಾಬಾ ರಾಮ್ ರಹೀಮ್ ಸಿಂಗ್ ಜೈಲು ಸೇರಿದ ಬಳಿಕ ಆಶ್ರಮದಲ್ಲಿ ಹುಡುಕಾಟವನ್ನು ನಡೆಸಲಾಗುತ್ತಿದೆ. ಆಶ್ರಮದ ಕಾರ್ಯಕರ್ತರಿಗೆ ಎಲ್ಲಿಗೂ ತೆರಳದಂತೆ ನಿರ್ಬಂಧವಿದ್ದು, ಸಾಮಾನ್ಯ ಜನರ ಓಡಾಟಕ್ಕೆ ಅನುಕೂಲ ಒದಗಿಸಲಾಗಿದೆ.
ನ್ಯಾಯಾಲಯದ ಆದೇಶ ಅನ್ವಯ ಸೆಪ್ಟೆಂಬರ್ 8 ರಿಂದ 10ರ ತನಕ ಆಶ್ರಮದಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆಶ್ರಮದ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದು, ಅನುಮತಿ ಇಲ್ಲದೆ ಚರ್ಮ ಬ್ಯಾಂಕ್ ಆರಂಭಿಸಿರುವುದು ಆಗ ಬೆಳಕಿಗೆ ಬಂದಿದೆ.
ಪೊಲೀಸರು ಎರಡು ರಹಸ್ಯ ಸುರಂಗ ಮಾರ್ಗವನ್ನು ಆಶ್ರಮದಲ್ಲಿ ಪತ್ತೆ ಹಚ್ಚಿದ್ದಾರೆ. ಅದರಲ್ಲಿ ಒಂದು ಸುರಂಗ ರಾಮ್ ರಹೀಮ್ ಸಿಂಗ್ ಮನೆಯಿಂದ ಮಹಿಳಾ ವಸತಿ ಗೃಹಕ್ಕೆ ಸಂಪರ್ಕ ಕಲ್ಪಿಸುತ್ತಿತ್ತು. ಮತ್ತೊಂದು ಅಕ್ರಮವಾಗಿ ನಿರ್ಮಾಣ ಮಾಡಿದ್ದ ಪಟಾಕಿ ಕಾರ್ಖನೆಗೆ ಸಂಪರ್ಕಿಸುತ್ತಿತ್ತು.
ಕಂಪ್ಯೂಟರ್ ಹಾರ್ಡ್ ಡಿಸ್ಕ್, ಲಕ್ಸುರಿ ಕಾರು, 7 ಸಾವಿರ ನಿಷೇಧಿತ ನೋಟು, 12 ಸಾವಿರ ನಗದು, ವಾಕಿಟಾಕಿ ಮುಂತಾದವುಗಳನ್ನು ಆಶ್ರಮದಿಂದ ವಶಕ್ಕೆ ಪಡೆಯಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications