Get Updates
Get notified of breaking news, exclusive insights, and must-see stories!

ಬಜರಂಗ ದಳದಿಂದ ಕಾನೂನುಬಾಹಿರವಾಗಿ ಯುವಕರಿಗೆ ಬಂದೂಕು ತರಬೇತಿ: ಪ್ರಕರಣ ದಾಖಲು

ಗುವಾಹಟಿ, ಆಗಸ್ಟ್‌ 1: ಅಸ್ಸಾಂನ ದರ್ರಾಂಗ್ ಜಿಲ್ಲೆಯ ಶಾಲೆಯೊಂದರಲ್ಲಿ ಕಾನೂನು ಬಾಹಿರವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಸ್ಸಾಂನ ದರ್ರಾಂಗ್ ಜಿಲ್ಲೆಯ ಮಂಗಲದಾಯಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಎ/34 (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪ್ರತಿಕೂಲವಾದ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

illegal-gun-training-to-youth

ರಾಷ್ಟ್ರೀಯ ಬಜರಂಗದಳದಿಂದ ಮಂಗಲದಾಯಿಯ ಮಹರ್ಷಿ ಬಿದ್ಯಾ ಮಂದಿರದಲ್ಲಿ ತರಬೇತಿಗೆ ಸಂಬಂಧಿಸಿದ ರೆಫರೆನ್ಸ್ ವೀಡಿಯೋ ಆಧರಿಸಿ ಮಂಗಳದೈ ಪಿಎಸ್ ಪ್ರಕರಣ ಸಂಖ್ಯೆ 357 U/S 153A/34 IPC ಮೂಲಕ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ದರ್ರಾಂಗ್ ಪೊಲೀಸರು ಟ್ವಿಟ್‌ ಪೋಸ್ಟ್ ಮಾಡಿದ್ದಾರೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಸ್ಸಾಂನ ಪೊಲೀಸ್ ಮಹಾನಿರ್ದೇಶಕ ಜಿ ಪಿ ಸಿಂಗ್ ಅವರು ದರ್ರಾಂಗ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪ್ರಕರಣ ದಾಖಲಿಸಿ, ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ಆಯೋಜಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಂಗಳದೈ ವಿಡಿಯೋ ದರ್ಂಗ್ ಪೊಲೀಸ್‌ಗೆ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲು ಮತ್ತು ವಿಷಯವನ್ನು ತನಿಖೆ ಮಾಡಲು ಮತ್ತು ಕಾನೂನುಬದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಡಿಜಿಪಿ ಟ್ವೀಟ್ ಮಾಡಿದ್ದಾರೆ.

ಬಜರಂಗ ದಳದ ಸದಸ್ಯರು ಶಾಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸೋಮವಾರ ವೈರಲ್ ಆಗಿದೆ. ಜಿಲ್ಲೆಯ ಮೊರ್ನೋಯಿ ಗ್ರಾಮದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 350 ಯುವಕರಿಗೆ ಗನ್ ಹ್ಯಾಂಡಲ್, ಮಾರ್ಷಲ್ ಆರ್ಟ್ಸ್, ಕಲೆ, ರಾಜಕೀಯ ಮತ್ತು ಆಧ್ಯಾತ್ಮಿಕತೆಯ ಪಾಠಗಳನ್ನು ಕಲಿಯಲು ತರಬೇತಿ ನೀಡಲಾಗಿದೆ ಎಂದು ಬಜರಂಗ ದಳ ತಿಳಿಸಿದೆ.

ಬಜರಂಗದಳದ ವಕ್ತಾರರು ನೆರೆಯ ದೇಶಗಳಿಂದ ಅಕ್ರಮ ವಲಸಿಗರಿಂದ ಭದ್ರತಾ ಬೆದರಿಕೆಗಳನ್ನು ಎದುರಿಸಲು ನಿಯಮಿತವಾಗಿ ಇಂತಹ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಅವರು ಸೋಮವಾರ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಪತ್ರ ಬರೆದು ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಶಿಬಿರ ನಡೆಸಲು ಸಂಘಟಕರಿಗೆ ಅರಿವಿಲ್ಲದೆ ಅಥವಾ ಅನುಮತಿ ನೀಡುವಲ್ಲಿ ಜಿಲ್ಲಾಡಳಿತದ ಪಾತ್ರದ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಶಿಬಿರದ ಆಯೋಜಕರು ಮತ್ತು ರಾಜ್ಯದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇದು ವಿವಿಧ ಸಮುದಾಯಗಳು, ಧರ್ಮ ಮತ್ತು ಭಾಷಾ ಸಂಬಂಧಗಳ ಜನರ ನಡುವೆ ಒಡಕು ಮೂಡಿಸುವ ಉದ್ದೇಶ ಹೊಂದಿದೆ. 'ಇಂತಹ ಶಿಬಿರಗಳನ್ನು ಆಯೋಜಿಸಿರುವುದು ಇದೇ ಮೊದಲಲ್ಲ. 2017ರಲ್ಲಿಯೂ ಬಜರಂಗ ದಳವು ಶಸ್ತ್ರಾಸ್ತ್ರ ತರಬೇತಿ ನೀಡುವ ಶಿಬಿರವನ್ನು ಆಯೋಜಿಸಿತ್ತು. ರಾಜ್ಯದ ಕೆಲವು ಭಾಗಗಳಲ್ಲಿ 2019ರಲ್ಲಿ ಮತ್ತೆ ಇದೇ ತರಹದ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿತ್ತು ಎಂದು ವಿರೋಧ ಪಕ್ಷದ ನಾಯಕ ಹೇಳಿದರು.

ರಾಜ್ಯದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಲು ಕ್ರಮಕೈಗೊಳ್ಳುತ್ತಿರುವ ಈ ಹೊತ್ತಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಪ್ರತಿಗಾಮಿ ಶಕ್ತಿಗಳು ಧಾರ್ಮಿಕ ಕೋಮುವಾದವನ್ನು ಎಬ್ಬಿಸಲು ಮುಂದಾಗಿವೆ. ಬಜರಂಗದಳದ ಸದಸ್ಯರು ಬಂದೂಕುಗಳನ್ನು ಹೇಗೆ ಮುಕ್ತವಾಗಿ ಬಳಸುತ್ತಾರೆ ಎಂಬುದರ ಕುರಿತು ಪೊಲೀಸರು ತಕ್ಷಣ ತನಿಖೆ ನಡೆಸಬೇಕು. ಎಡಪಕ್ಷಗಳು ಇದನ್ನು 'ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚು ಎಂದು ಸಿಪಿಐ(ಎಂ) ತಿಳಿಸಿದೆ.

ಈ ಘಟನೆಗಳು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತಂದಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಸುಪ್ರಕಾಶ ತಾಲೂಕದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 'ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇಂತಹ ಘಟನೆಗಳು ಹೆಚ್ಚಿವೆ ಮತ್ತು ವಿರೋಧ ಪಕ್ಷಗಳ ಪ್ರತಿಭಟನೆಗಳನ್ನು ವಿಫಲಗೊಳಿಸಲು ಆಗಾಗ್ಗೆ ಪ್ರಯತ್ನಿಸುತ್ತಿರುವ ಮುಖ್ಯಮಂತ್ರಿ, ಭಜರಂಗದಳದ ಇಂತಹ ಅಬ್ಬರದ ಕೋಮುವಾದಿ ಚಟುವಟಿಕೆಗಳ ಬಗ್ಗೆ ಮೌನವಾಗಿದ್ದಾರೆ ಎಂದು ತಾಲೂಕದಾರ್ ಆರೋಪಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+