ಕರ್ನಾಟಕ ಅಕ್ರಮ ಗಣಿಗಾರಿಕೆ ಮೇಲಷ್ಟೇ ಸಿಬಿ'ಐ'
ಪಣಜಿ, ನ. 25: ಕರ್ನಾಟಕ ಹಾಗೂ ಗೋವಾದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಬಯಸಿದ್ದ ಸಿಬಿಐಗೆ ಹಿನ್ನಡೆಯಾಗಿದೆ. ಕರ್ನಾಟಕದ ಅದಿರುಗಳನ್ನು ಗೋವಾದ ಮೋರ್ಮುಗಾವು ಹಾಗೂ ಪಣಜಿಯ ಚಿಕ್ಕ ಬಂದರುಗಳ ಮೂಲಕ ವಿದೇಶಗಳಿಗೆ ರಫ್ತು ಮಾಡಿರುವ ಪ್ರಕರಣಗಳ ತನಿಖೆಗೆ ಮಾತ್ರ ಗೋವಾ ಒಪ್ಪಿಕೊಂಡಿದೆ.
ಶಾ ಕಮಿಶನ್ ವರದಿ ಪ್ರಕಾರ ಕರ್ನಾಟಕ ಹಾಗೂ ಗೋವಾ ಎರಡೂ ರಾಜ್ಯಗಳಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಸಿಬಿಐ ಬಯಸಿತ್ತು. ಈ ಕುರಿತು ಗೋವಾ ಸರ್ಕಾರಕ್ಕೆ ಸಾಲು ಸಾಲಾಗಿ ಪತ್ರವನ್ನೂ ಬರೆಯಲಾಗಿತ್ತು. ಆದರೆ, ಗೋವಾದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಗಾಗಿ ಈಗಾಗಲೇ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಆದ್ದರಿಂದ ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ ಎಂದು ಗೋವಾ ಸರ್ಕಾರ ಸ್ಪಷ್ಟಪಡಿಸಿದೆ. [ಸಂಸದ ಡಿಕೆ ಸುರೇಶಗೆ ನೋಟಿಸ್]

ಮೂವರ ಬಂಧನ: ಗೋವಾ ಸರ್ಕಾರ ರಚಿಸಿರುವ SIT ತಂಡವು ಇಲ್ಲಿಯವರೆಗೆ 15 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಇವುಗಳಲ್ಲಿ 2 ಪ್ರಕರಣಗಳಲ್ಲಿ ಆರೋಪ ಪಟ್ಟಿಗಳನ್ನೂ ದಾಖಲಿಸಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಮೂರು ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲಾಗಿದೆ. [ಗಾಲಿ ರೆಡ್ಡಿಗೆ ಜಾಮೀನು ಮಂಜೂರು]
ಈಚೆಗಷ್ಟೇ ಗೋವಾದ SIT ಹಾಗೂ ಕರ್ನಾಟಕ ಲೋಕಾಯುಕ್ತಕ್ಕೆ ಸೇರಿರುವ SIT ತಂಡ ಎರಡೂ ಅಕ್ರಮ ಗಣಿಗಾರಿಕೆ ಪ್ರಕರಣಗಳ ಕುರಿತು ತಾರ್ಕಿಕ ಅಂತ್ಯ ಕಂಡುಕೊಳ್ಳಲು ಕೈಜೋಡಿಸಿದ್ದವು. ಎರಡೂ SIT ತಂಡಗಳು ಗೋವಾ ಮತ್ತು ಕರ್ನಾಟಕದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತ ಮಾಹಿತಿ ಹಂಚಿಕೊಳ್ಳಲು ನಿರ್ಧರಿಸಿದ್ದವು. [137 ಅಧಿಕಾರಿಗಳಿಗೆ ತನಿಖೆ ಬಿಸಿ]
ಈವರೆಗೆ ಕರ್ನಾಟಕದ ಬೇಲಿಕೆರೆ ಬಂದರಿನಿಂದ ರಫ್ತುಗೊಂಡಿರುವುದು ಹಾಗೂ ಕರ್ನಾಟಕ ಲೋಕಾಯುಕ್ತದ SIT ತಂಡವು ನಡೆಸಿದ ತನಿಖೆಯಲ್ಲಿ ಕಂಡುಬಂದ ಅಕ್ರಮ ಗಣಿಗಾರಿಕೆಗಳಿಗೆ ಸಂಬಂಧಿಸಿದಂತೆ 28 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications