ಅಲೋಪತಿ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಷರತ್ತು ವಿಧಿಸಿ ರಾಮ್ದೇವ್ಗೆ ಐಎಂಎ ಆಹ್ವಾನ
ಡೆಹ್ರಾಡೂನ್, ಮೇ 30: ಯೋಗಗುರು ಬಾಬಾ ರಾಮ್ದೇವ್ ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಐಎಂಎ ತಿರುಗೇಟು ನೀಡುವುದನ್ನು ಮುಂದುವರಿಸಿದೆ. ಮಾನನಷ್ಟ ಮೊಕದ್ದಮೆಯ ನೋಟಿಸ್ ಕಳುಹಿಸಿದ ನಂತರ ಈಗ ಐಎಂಎ ಅಲೋಪತಿ ವೈದ್ಯ ಪದ್ದತಿಯ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದಿದೆ. ಷರತ್ತಿನೊಂದಿಗೆ ಬಾಬಾ ರಾಮ್ದೇವ್ಗೂ ಆಹ್ವಾನ ನೀಡಿದೆ.
ಐಎಂಎ ಉತ್ತರಾಖಂಡದ ಅಧ್ಯಕ್ಷ ಡಾ. ಅಜಯ್ ಖನ್ನಾ ಬಾಬಾ ರಾಮ್ದೇವ್ಗೆ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ರಾಮ್ದೇವ್ ನೀಡಿದ ಹೇಳಿಕೆಯನ್ನು ಕಟುವಾದ, ಬೇಜವಾಬ್ಧಾರಿಯುತ ಹಾಗೂ ಸ್ವಾರ್ಥದಿಂದ ಕೂಡಿದ ಹೇಳಿಕೆ ಎಂದು ಕರೆದಿದ್ದಾರೆ. ಈ ಪತ್ರದಲ್ಲಿ ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಬಹಿರಂಗ ಮುಖಾಮುಖಿ ಚರ್ಚೆಗೆ ಪತಂಜಲಿ ಯೋಗಪೀಠದಿಂದ ಅರ್ಹ ಮತ್ತು ಸರಿಯಾಗಿ ನೋಂದಾಯಿತ ಆಯುರ್ವೇದಾಚಾರ್ಯರ ತಂಡವನ್ನು ಕಳುಹಿಸುವಂತೆ ಕೋರಲಾಗಿದೆ.
"ಈಗಾಗಲೇ ಐಎಂಎ ಉತ್ತರಾಖಂಡದಿಂದ ಈಗಾಗಲೇ ರಚನೆಯಾಗಿರುವ ವೈದ್ಯರ ತಂಡದೊಂದಿಗೆ ಚರ್ಚೆಯನ್ನು ನಡೆಸಲು ಪತಂಜಲಿ ಯೋಗಪೀಠದಿಂದ ಅರ್ಹ ಮತ್ತು ನೊಂದಾಯಿತ ಆಯುರ್ವೇದಾಚಾರ್ಯರ ತಂಡವನ್ನು ಕಳುಹಿಸುವಂತೆ ಮನವಿ ಮಾಡುತ್ತೇವೆ. ಈ ಚರ್ಚೆ ಮುಖಾಮುಖಿಯಾಗಿರಲಿ ಮತ್ತು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಆಹ್ವಾನಿಸಿ ಅವರ ಉಪಸ್ಥಿತಿಯಲ್ಲಿ ನಡೆಯಲಿ" ಎಂದು ಪತ್ರದಲ್ಲಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದೆ.

ಆದರೆ ಈ ಚರ್ಚೆಗೆ ಯೋಗಗುರು ಬಾಬಾ ರಾಮ್ದೇವ್ ಹಾಗೂ ಅವರ ಸಹಾಯಕ ಬಾಲಕೃಷ್ಣ ಅವರು ಕೇವಲ ವೀಕ್ಷಕರಾಗಿ ಭಾಗಿಯಾಗುವಂತೆ ಷರತ್ತು ವಿಧಿಸಿದೆ. ಅರ್ಹತೆಗಳ ಬಗ್ಗೆ ಐಎಂಎ ರಾಜ್ಯ ಕಚೇರಿಗೆ ಯಾವುದೇ ದಾಖಲೆಗಳನ್ನು ನೀಡದ ಕಾರಣ ಈ ಷರತ್ತು ವಿಧಿಸಿದೆ. ಇನ್ನು ಈ ಚರ್ಚೆಗೆ ದಿನಾಂಕ ಮತ್ತು ಸಮಯವನ್ನು ನಿಗದಿ ಪಡಿಸಲು ಐಎಂಎ ಬಾಬಾ ರಾಮ್ದೇವ್ಗೆ ಜವಾಬ್ಧಾರಿವಹಿಸಿದ್ದು ಸ್ಥಳವನ್ನು ಐಎಂಎ ಉತ್ತರಾಖಂಡ ನಿರ್ಧರಿಸುತ್ತದೆ ಎಂದಿದೆ.
ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಬಾಬಾ ರಾಮ್ದೇವ್ ಆಡಿದ ನಿಂದನಾತ್ಮಕ ಮಾತುಗಳನ್ನು ಖಂಡಿಸಿ ಬುಧವಾರ ಐಎಂಎ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿತ್ತು. ಈ ಪತ್ರದಲ್ಲಿ ದೇಶದ್ರೋಹದ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಐಎಂಎ ಉತ್ತರಾಖಂಡ ಘಟಕ ಬಹಿರಂಗ ಕ್ಷಮೆಯಾಚನೆಗೆ ಕೋರಿ 1000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುವ ಬಗ್ಗೆ ನೋಟಿಸ್ ಕಳುಹಿಸಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications