ಅಲೋಪತಿ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಷರತ್ತು ವಿಧಿಸಿ ರಾಮ್ದೇವ್ಗೆ ಐಎಂಎ ಆಹ್ವಾನ
ಡೆಹ್ರಾಡೂನ್, ಮೇ 30: ಯೋಗಗುರು ಬಾಬಾ ರಾಮ್ದೇವ್ ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಐಎಂಎ ತಿರುಗೇಟು ನೀಡುವುದನ್ನು ಮುಂದುವರಿಸಿದೆ. ಮಾನನಷ್ಟ ಮೊಕದ್ದಮೆಯ ನೋಟಿಸ್ ಕಳುಹಿಸಿದ ನಂತರ ಈಗ ಐಎಂಎ ಅಲೋಪತಿ ವೈದ್ಯ ಪದ್ದತಿಯ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದಿದೆ. ಷರತ್ತಿನೊಂದಿಗೆ ಬಾಬಾ ರಾಮ್ದೇವ್ಗೂ ಆಹ್ವಾನ ನೀಡಿದೆ.
ಐಎಂಎ ಉತ್ತರಾಖಂಡದ ಅಧ್ಯಕ್ಷ ಡಾ. ಅಜಯ್ ಖನ್ನಾ ಬಾಬಾ ರಾಮ್ದೇವ್ಗೆ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ರಾಮ್ದೇವ್ ನೀಡಿದ ಹೇಳಿಕೆಯನ್ನು ಕಟುವಾದ, ಬೇಜವಾಬ್ಧಾರಿಯುತ ಹಾಗೂ ಸ್ವಾರ್ಥದಿಂದ ಕೂಡಿದ ಹೇಳಿಕೆ ಎಂದು ಕರೆದಿದ್ದಾರೆ. ಈ ಪತ್ರದಲ್ಲಿ ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಬಹಿರಂಗ ಮುಖಾಮುಖಿ ಚರ್ಚೆಗೆ ಪತಂಜಲಿ ಯೋಗಪೀಠದಿಂದ ಅರ್ಹ ಮತ್ತು ಸರಿಯಾಗಿ ನೋಂದಾಯಿತ ಆಯುರ್ವೇದಾಚಾರ್ಯರ ತಂಡವನ್ನು ಕಳುಹಿಸುವಂತೆ ಕೋರಲಾಗಿದೆ.
"ಈಗಾಗಲೇ ಐಎಂಎ ಉತ್ತರಾಖಂಡದಿಂದ ಈಗಾಗಲೇ ರಚನೆಯಾಗಿರುವ ವೈದ್ಯರ ತಂಡದೊಂದಿಗೆ ಚರ್ಚೆಯನ್ನು ನಡೆಸಲು ಪತಂಜಲಿ ಯೋಗಪೀಠದಿಂದ ಅರ್ಹ ಮತ್ತು ನೊಂದಾಯಿತ ಆಯುರ್ವೇದಾಚಾರ್ಯರ ತಂಡವನ್ನು ಕಳುಹಿಸುವಂತೆ ಮನವಿ ಮಾಡುತ್ತೇವೆ. ಈ ಚರ್ಚೆ ಮುಖಾಮುಖಿಯಾಗಿರಲಿ ಮತ್ತು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಆಹ್ವಾನಿಸಿ ಅವರ ಉಪಸ್ಥಿತಿಯಲ್ಲಿ ನಡೆಯಲಿ" ಎಂದು ಪತ್ರದಲ್ಲಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದೆ.

ಆದರೆ ಈ ಚರ್ಚೆಗೆ ಯೋಗಗುರು ಬಾಬಾ ರಾಮ್ದೇವ್ ಹಾಗೂ ಅವರ ಸಹಾಯಕ ಬಾಲಕೃಷ್ಣ ಅವರು ಕೇವಲ ವೀಕ್ಷಕರಾಗಿ ಭಾಗಿಯಾಗುವಂತೆ ಷರತ್ತು ವಿಧಿಸಿದೆ. ಅರ್ಹತೆಗಳ ಬಗ್ಗೆ ಐಎಂಎ ರಾಜ್ಯ ಕಚೇರಿಗೆ ಯಾವುದೇ ದಾಖಲೆಗಳನ್ನು ನೀಡದ ಕಾರಣ ಈ ಷರತ್ತು ವಿಧಿಸಿದೆ. ಇನ್ನು ಈ ಚರ್ಚೆಗೆ ದಿನಾಂಕ ಮತ್ತು ಸಮಯವನ್ನು ನಿಗದಿ ಪಡಿಸಲು ಐಎಂಎ ಬಾಬಾ ರಾಮ್ದೇವ್ಗೆ ಜವಾಬ್ಧಾರಿವಹಿಸಿದ್ದು ಸ್ಥಳವನ್ನು ಐಎಂಎ ಉತ್ತರಾಖಂಡ ನಿರ್ಧರಿಸುತ್ತದೆ ಎಂದಿದೆ.
ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಬಾಬಾ ರಾಮ್ದೇವ್ ಆಡಿದ ನಿಂದನಾತ್ಮಕ ಮಾತುಗಳನ್ನು ಖಂಡಿಸಿ ಬುಧವಾರ ಐಎಂಎ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿತ್ತು. ಈ ಪತ್ರದಲ್ಲಿ ದೇಶದ್ರೋಹದ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಐಎಂಎ ಉತ್ತರಾಖಂಡ ಘಟಕ ಬಹಿರಂಗ ಕ್ಷಮೆಯಾಚನೆಗೆ ಕೋರಿ 1000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುವ ಬಗ್ಗೆ ನೋಟಿಸ್ ಕಳುಹಿಸಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications