ಬಿಡುಗಡೆಗೂ ಮುನ್ನ ನೋಟಿನ ಫೋಟೋ: ತನಿಖೆಗೆ ನಿರ್ಧಾರ
ಬೆಂಗಳೂರು, ನವೆಂಬರ್ 11: 2,000 ರುಪಾಯಿ ಮುಖಬೆಲೆಯ ಹೊಸ ನೋಟಿನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಮಾಡುವ ಮುನ್ನವೇ ಆ ನೋಟಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬಗ್ಗೆ ತನಿಖೆ ನಡೆಸಲು ಸರಕಾರ ನಿರ್ಧರಿಸಿದೆ. 500, 1000 ರುಪಾಯಿ ನೋಟು ರದ್ದು ಬಗ್ಗೆ ಪ್ರಧಾನಿ ಘೋಷಣೆಗೂ ಮುನ್ನವೇ 2,000 ರುಪಾಯಿ ನೋಟಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿತ್ತು.
500, 1000 ರುಪಾಯಿ ನೋಟು ರದ್ದು ಮಾಡಬೇಕು ಎಂಬ ನಿರ್ಧಾರವನ್ನು ಕೆಲವು ತಿಂಗಳ ಹಿಂದೆಯೇ ತೆಗೆದುಕೊಳ್ಳಲಾಗಿತ್ತು. ಈ ವಿಚಾರದಲ್ಲಿ ರಹಸ್ಯ ಕಾಯ್ದುಕೊಳ್ಳಲಾಗಿತ್ತು. ಒಂದು ಸಣ್ಣ ಸುಳಿವು ಸಹ ಹೊರಹೋಗದಂತೆ ಸರಕಾರ ನೋಡಿಕೊಂಡಿತ್ತು. ಕೆಲ್ವು ಗುಂಪುಗಳ ಮಧ್ಯೆ ಎರಡು ಸಾವಿರ ನೋಟಿನ ಚಲಾವಣೆ ಬಗ್ಗೆ ಚರ್ಚೆಗಳಾಗಿದ್ದವು, ಫೋಟೋಗಳ ಜತೆಗೆ ಸಂದೇಶಗಳು ಹರಿದಾಡಿದ್ದವು.[ಮುದ್ರಣವಾಗಿದೆಯೇ ರೂ.2 ಸಾವಿರ ಮುಖಬೆಲೆಯ ನೋಟು?]

ಫೋಟೋಗಳು ಹೊರಬಂದಿದ್ದರೆ ಅದು ಒಳಗಿನವರ ಕೆಲ್ಸವೇ ಆಗಿರಬೇಕು. ಕೆಲ ತಿಂಗಳ ಹಿಂದೆ ನೋಟು ಮುದ್ರಣ ಆರಂಭವಾದಾಗ ಯಾರೋ ಫೋಟೋ ತೆಗೆದು, ಬಯಲು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರದಲ್ಲಿ ತನಿಖೆ ನಡೆಸಲಾಗುವುದು. ನೋಟಿನ ಫೋಟೋ ಬಯಲು ಮಾಡಿದ ವ್ಯಕ್ತಿ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರಕಾರದ ಮೂಲಗಳು ತಿಳಿಸಿವೆ.[ಸದ್ಯದಲ್ಲೆ ಚಲಾವಣೆಗೆ ಬರಲಿದೆ 2,000 ಮುಖಬೆಲೆ ನೋಟು!]
ಈ ವಿಚಾರವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೀವಿ. ಸರಕಾರವು ವ್ಯವಸ್ಥೆಯನ್ನು ಶುದ್ಧೀಕರಿಸುವ ಕೆಲಸಕ್ಕೆ ಮುಂದಾಗಿರುವಾಗ ಈ ರೀತಿ ಕೃತ್ಯಗಳನ್ನು ಮಾಡುವವರನ್ನು ಕ್ಷಮಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications