Imd Weather Forecast: ಕರ್ನಾಟಕ ಸೇರಿ ಭಾರತದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
Imd Weather Forecast: ಬಂಗಾಳ ಕೊಲ್ಲಿಯಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತ ರೂಪುಗೊಂಡಿದ್ದು, ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಚಂಡಮಾರುತ / ಸೈಕ್ಲೋನ್ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಗುರುವಾರ ಸಹ ಒಡಿಶಾದಲ್ಲಿ ಭಾರೀ ಮಳೆ ಮುಂದುವರಿದಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದೆ.
ಒಡಿಶಾದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಈ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ 16 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪುರಿ, ಗಂಜಾಂ, ಗಜಪತಿ, ರಾಯಗಡ, ಕೊರಾಪುಟ್, ಕಲಹಂಡಿ ಹಾಗೂ ಕಂಧಮಲ್ ಪ್ರದೇಶದಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಚಂಡಮಾರುತದ ಪ್ರಭಾವ ತೀವ್ರವಾಗಿದ್ದು ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ್ 3 ರವರೆಗೆ ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಾನ್ಸೂನ್ ಮಳೆ ಈ ಬಾರಿ ವಿಸ್ತರಣೆ ಆಗಿದೆ. ಕರ್ನಾಟಕದಲ್ಲಿ ಅಕ್ಟೋಬರ್ 08ರ ವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರಪ್ರದೇಶ, ರಾಯಲಸೀಮಾ, ಕೇರಳ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದೆ. ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ಕಡಿಮೆ ಒತ್ತಡ ರೂಪುಗೊಂಡಿರುವುದು ಮುಂಗಾರು ಅವಧಿ ವಿಸ್ತರಣೆ ಆಗುವುದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಹಾಗೂ ದೆಹಲಿಯ ನಗರ ಪ್ರದೇಶಗಳಲ್ಲಿ ಕಳೆದ ವಾರ ಧಾರಾಕಾರ ಮಳೆ ಆಗಿತ್ತು. ಮಳೆಯಿಂದಾಗಿ ಈ ಪ್ರಮುಖ ನಗರಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಇನ್ನೊಂದು ವಾರ ಮಳೆ: ಇನ್ನು ಏಕಕಾಲಕ್ಕೆ ಎರಡು ಚಂಡಮಾರುತ ರೂಪುಗೊಂಡಿರುವ ಪ್ರಭಾವದಿಂದಾಗಿ ಒಡಿಶಾ - ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಆಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇನ್ನೂ ಒಂದು ವಾರದ ಅವಧಿಗೆ ದೇಶಾದ್ಯಂತ (ಹಲವು ರಾಜ್ಯಗಳಲ್ಲಿ) ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದ ಆಂಧ್ರಪ್ರದೇಶದಲ್ಲೂ ಭಾರೀ ಮಳೆ ಮುಂದುವರಿದಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications