India Weather: ಏಪ್ರಿಲ್ 6ರ ಯುಪಿ, ಕರ್ನಾಟಕ, ದೆಹಲಿ ಸೇರಿದಂತೆ ಇಡೀ ಭಾರತದ ಹವಾಮಾನ ವರದಿ
ದೇಶದ ಹಲವು ರಾಜ್ಯಗಳಲ್ಲಿ ಶಾಖದ ಅಲೆ ಮುಂದುವರೆದಿದೆ. ಉತ್ತರ ಭಾರತದಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ (ಐಎಂಡಿ) ದೆಹಲಿ ಮತ್ತು ನೆರೆಯ ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣಗಳಿಗೆ ತೀವ್ರ ಶಾಖದ ಅಲೆಯ ಎಚ್ಚರಿಕೆ ನೀಡಿದೆ. ಏಪ್ರಿಲ್ 5 ರಿಂದ ಏಪ್ರಿಲ್ 8 ರವರೆಗೆ ದೆಹಲಿಗೆ ಐಎಂಡಿ ಹಳದಿ ಎಚ್ಚರಿಕೆ ನೀಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಇನ್ನೂ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಹಗುರವಾದ ಆರ್ದ್ರತೆ ಮತ್ತು ಮೋಡ ಕವಿದ ವಾತಾವರಣ ಇದ್ದು, ಮುಂಬೈನಲ್ಲಿ ಹವಾಮಾನ ಆಹ್ಲಾದಕರವಾಗಿರುತ್ತದೆ. ಉತ್ತರ ಪ್ರದೇಶದ ಪಶ್ಚಿಮ ಭಾಗಗಳು ಬಿಸಿಲಿನ ಶಾಖದಿಂದ ಕೂಡಿರುತ್ತವೆ. ಆದರೆ ಪೂರ್ವ ಉತ್ತರ ಪ್ರದೇಶದಲ್ಲಿ ಲಕ್ನೋ, ವಾರಣಾಸಿ ಮತ್ತು ಪ್ರಯಾಗರಾಜ್ಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರವಾದ ಮೋಡಗಳು ಇರುತ್ತವೆ.

ರಾಜಸ್ಥಾನದ ಬಯಲು ಪ್ರದೇಶದಿಂದ ದೆಹಲಿಯವರೆಗೆ ಮತ್ತು ಗುಜರಾತ್ನ ಸೌರಾಷ್ಟ್ರ-ಕಚ್ ಪ್ರದೇಶದವರೆಗೆ ಜನರು ಈಗ ಮೊದಲಿಗಿಂತ ಹೆಚ್ಚು ಶಾಖವನ್ನು ಅನುಭವಿಸುತ್ತಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ವಾರ ಇದು ಇನ್ನಷ್ಟು ಹೆಚ್ಚಾಗಲಿದೆ. ಹಾಗಾದರೆ ಇಂದು ದೆಹಲಿ ವಾತಾವರಣ ಹೇಗಿರಲಿದೆ?
ಇಂದು ದೆಹಲಿಯಲ್ಲಿ ಹವಾಮಾನ
ದೆಹಲಿಯಲ್ಲಿ ಇಂದು ಕೂಡ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಪ್ರಕಾರ ಇಂದು ದೆಹಲಿಯಲ್ಲಿ ಪಾದರಸದ ಉಷ್ಣತೆ 40 ಕ್ಕೆ ತಲುಪಬಹುದು. 'ದೆಹಲಿಯಲ್ಲಿ ತಾಪಮಾನ ಪ್ರಸ್ತುತ ಸಾಮಾನ್ಯಕ್ಕಿಂತ 3 ಡಿಗ್ರಿ ಹೆಚ್ಚಾಗಿದೆ. ಇದು 38 ರಿಂದ 40 ಡಿಗ್ರಿ ಸೆಲ್ಸಿಯಸ್ ಸುತ್ತಲೂ ಇದೆ. ಏಪ್ರಿಲ್ 7ರವರೆಗೆ ಶಾಖದ ಅಲೆಯಂತಹ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ. ಏಪ್ರಿಲ್ 8 ಮತ್ತು 10 ರ ನಡುವೆ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪಶ್ಚಿಮದ ಅಡಚಣೆಯ ಪರಿಣಾಮ ಉಂಟಾಗಲಿದ್ದು, ಇದು ಗುಡುಗು ಸಹಿತ ಮಳೆ, ಬಲವಾದ ಗಾಳಿ ಮತ್ತು ಮಳೆಗೆ ಕಾರಣವಾಗಬಹುದು' ಎಂದು ಐಎಂಡಿ ವಿಜ್ಞಾನಿ ಅಖಿಲ್ ಶ್ರೀವಾಸ್ತವ ಹೇಳಿದ್ದಾರೆ.

ದೆಹಲಿಯಲ್ಲಿ ಶನಿವಾರ ಗರಿಷ್ಠ ತಾಪಮಾನ 38.4 ಡಿಗ್ರಿ ಸೆಲ್ಸಿಯಸ್ ಇದ್ದು, ಇದು ಸಾಮಾನ್ಯಕ್ಕಿಂತ 4.4 ಡಿಗ್ರಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ 18.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಇತರ ಮೇಲ್ವಿಚಾರಣಾ ಕೇಂದ್ರಗಳು ಸಹ ಹೆಚ್ಚಿನ ತಾಪಮಾನವನ್ನು ವರದಿ ಮಾಡಿವೆ. ರಿಡ್ಜ್ನಲ್ಲಿ 39.4 ಡಿಗ್ರಿ ಸೆಲ್ಸಿಯಸ್, ಅಯನಗರದಲ್ಲಿ 38.1 ಡಿಗ್ರಿ ಸೆಲ್ಸಿಯಸ್, ಲೋಧಿ ರಸ್ತೆಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಮತ್ತು ಪಾಲಂನಲ್ಲಿ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ದೇಶಾದ್ಯಂತ ಇತರ ರಾಜ್ಯಗಳಲ್ಲಿ ಹವಾಮಾನ
ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್, ಗುಜರಾತ್, ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶ ಸೇರಿದಂತೆ ದೆಹಲಿಯ ಸುತ್ತಮುತ್ತಲಿನ ಹಲವು ಪ್ರದೇಶಗಳು ಸಹ ತೀವ್ರ ಶಾಖವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.

ಗುಜರಾತ್, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್ಗಢ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು, ಉತ್ತರ ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣತೆಯ ವಾತಾವರಣ ಇರಲಿದೆ.
ಐಎಂಡಿ ಮುನ್ಸೂಚನೆಗಳ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ಮಧ್ಯ ಮತ್ತು ವಾಯುವ್ಯ ಭಾರತದ ಹಲವು ಪ್ರದೇಶಗಳಲ್ಲಿ ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದ್ದು, ಈಗಾಗಲೇ ಇರುವ ಕೆಟ್ಟ ಹವಾಮಾನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.
ಮುಂದಿನ 4-5 ದಿನಗಳಲ್ಲಿ ರಾಜಸ್ಥಾನವೂ ತೀವ್ರ ಶಾಖವನ್ನು ಅನುಭವಿಸಲಿದೆ ಎಂದು ಐಎಂಡಿ ವಿಜ್ಞಾನಿ ಅಖಿಲ್ ಶ್ರೀವಾಸ್ತವ ತಿಳಿಸಿದ್ದಾರೆ. ಗುಜರಾತ್ ಮತ್ತು ಸೌರಾಷ್ಟ್ರ-ಕಚ್ ಪ್ರದೇಶದಲ್ಲಿ ಮುಂದಿನ 5-7 ದಿನಗಳವರೆಗೆ ಬಿಸಿಲಿನ ತಾಪ ಮುಂದುವರಿಯುವ ವರದಿಗಳಿವೆ. ರಾಜಸ್ಥಾನದಲ್ಲಿಯೂ ಮುಂದಿನ 4-5 ದಿನಗಳವರೆಗೆ ತೀವ್ರ ಬಿಸಿಲಿನ ತಾಪ ಉಂಟಾಗಲಿದ್ದು, ಇದಕ್ಕಾಗಿ ಎಚ್ಚರಿಕೆ ನೀಡಲಾಗಿದೆ. ಪಂಜಾಬ್ ಮತ್ತು ಹರಿಯಾಣದಂತಹ ಉತ್ತರ ಭಾರತದ ರಾಜ್ಯಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಉಂಟಾಗಬಹುದು ಎಂದು ಅವರು ಹೇಳಿದ್ದಾರೆ.
ಈ ರಾಜ್ಯಗಳಲ್ಲಿ ಮಳೆ ಎಚ್ಚರಿಕೆ
ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 7 ಅಥವಾ 8 ರಿಂದ ಭಾರತದ ಪೂರ್ವ ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ಶನಿವಾರ ಮುಂಜಾನೆ ಚೆನ್ನೈನ ಹಲವು ಭಾಗಗಳಲ್ಲಿ ಮಳೆಯಾಯಿತು. ಇಂದು ಚೆನ್ನೈನಲ್ಲಿರುವ ಐಎಂಡಿ ಪ್ರಾದೇಶಿಕ ಕೇಂದ್ರ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ, ಗುಡುಗು ಸಹಿತ ಮಳೆ ಮತ್ತು ಮಿಂಚಿನ ಎಚ್ಚರಿಕೆ ನೀಡಿದೆ.
ಈ ರಾಜ್ಯಗಳಲ್ಲಿ ಏಪ್ರಿಲ್ ನಿಂದ ಜೂನ್ ವರೆಗೆ ತೀವ್ರ ಶಾಖ
ಏಪ್ರಿಲ್ ತಿಂಗಳು ಆರಂಭವಾಗುತ್ತಿದ್ದಂತೆ ಬಿಸಿಲು ಹೆಚ್ಚಾಗಿದೆ. ಏಪ್ರಿಲ್ ನಿಂದ ಜೂನ್ ವರೆಗೆ ತೀವ್ರ ಶಾಖವನ್ನು ಅನುಭವಿಸುವ ಸಾಧ್ಯತೆಯಿರುವ ರಾಜ್ಯಗಳಲ್ಲಿ ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್ಗಢ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಕರ್ನಾಟಕ ಮತ್ತು ತಮಿಳುನಾಡು ಸೇರಿವೆ.












Click it and Unblock the Notifications