IMD Weather Forecast: ಈ ಭಾಗಗಳಲ್ಲಿ ಮಳೆ-ಹಿಮಪಾತ, ಉಳಿದೆಲ್ಲೆಡೆ ಶೀತದ ಅಲೆ ಮುನ್ಸೂಚನೆ
India Cold Waver Alert: ದೇಶಾದ್ಯಂತ ಶೀತಭರಿತ ಗಾಳಿ ಅಬ್ಬರ ಜೋರಾಗಿದೆ. ಕರಾವಳಿ ಪ್ರದೇಶ, ಭೂಮೇಲ್ಮೈ ಸೇರಿದಂತೆ ಎಲ್ಲ ಭಾಗಗಳಲ್ಲಿ ಚಳಿ ಆವರಿಸಿದೆ. ಬೆಳಗ್ಗೆ ದಟ್ಟ ಮಂಜು ಬೀಳುತ್ತಿದೆ. ಇದೀಗ ಹವಾಮಾನ ಇಲಾಖೆ ವಿವಿಧೆಡೆ ಲಘು ಮಳೆ ಜೊತೆಗೆ ಹಿಮಪಾತದ ಮುನ್ನೆಚ್ಚರಿಕೆ ನೀಡಿದೆ. ಇದರೊಂದಿಗೆ ಹಗಲು ಹೊತ್ತು ತಾಪಮಾನ ಏರಿಕೆ ಅಗಿದ್ದು, ಒಂದೆರಡು ಭಾಗಗಳಲ್ಲಿ ಮಳೆ ಬರುವ ನಿರೀಕ್ಷೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಜಮ್ಮು-ಕಾಶ್ಮೀರ-ಲಡಾಖ್ ಸೇರಿದಂತೆ ಪಶ್ಚಿಮ ಹಿಮಾಲಯ ಪ್ರದೇಶ ಬಾಲ್ಟಿಸ್ತಾನ್, ಮುಜಫರಾಬಾದ್ ವ್ಯಾಪ್ತಿಯಲ್ಲಿ ಡಿಸೆಂಬರ್ 13 ರಿಂದ 16ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಹಿಮಪಾತ ಉಂಟಾಗಲಿದೆ. ಇದೇ ವ್ಯಾಪ್ತಿಯ ಕೆಲವೆಡೆ ಚದರಿದಂತೆ ಮಳೆ ಆಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಅಲ್ಲಿ ಸಹ ಮುಂದಿನ ಮೂರು ದಿನ ಜೋರು ಮಳೆ ನಿರೀಕ್ಷೆ ಇದೆ.

ಈ ಭಾಗಗಳಲ್ಲಿ ಒಣಹವೆಯ ಮುನ್ಸೂಚನೆ
ಮುಂದಿನ 2 ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಇಲ್ಲ. ಇಲ್ಲಿ ಚಳಿಗಿಂತ ಬಿಸಿಲಿನ ಆರ್ಭಟ ಹೆಚ್ಚಿರಲಿದೆ. ಗುಜರಾತ್, ಪೂರ್ವ ಮತ್ತು ಈಶಾನ್ಯ ಭಾರತದ ಹಲವೆಡೆ ಒಣಹವೆ ವಾತಾವರಣ ಕಂಡು ಬರಲಿದೆ. ಡಿಸೆಂಭರ್ 13ರ ನಂತರ ತಾಪಮಾನದಲ್ಲಿ 2ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ.
ದಟ್ಟ ಮಂಜು ಮತ್ತು ಶೀತಅಲೆ ಮುನ್ನೆಚ್ಚರಿಕೆ
ಇದಕ್ಕೆ ತದ್ವಿರುದ್ಧ ಎಂಬಂತೆ ಮಹಾರಾಷ್ಟ್ರ, ಕರ್ನಾಟಕ, ದೆಹಲಿ ಸೇರಿದಂತೆ ಒಂದೆರಡು ರಾಜ್ಯಗಳಲ್ಲಿ ಮುಂದಿನ 3 ದಿನಗಳವರೆಗೆ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯಲಿದೆ. ನಿರೀಕ್ಷಿತ ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕುಸಿಯಬಹುದೆಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಇಂದಿನಿಂದ ಡಿಸೆಂಬರ್ 13 ರಂದು ಮಹಾರಾಷ್ಟ್ರ, ಮರಾಠವಾಡ, ತೆಲಂಗಾಣ, ಕರ್ನಾಟಕದ ಉತ್ತರ ಒಳನಾಡು, ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢದಲ್ಲಿ ಮೈಕೊರೆವ ಚಳಿ ಹೆಚ್ಚಾಗಲಿದೆ. ಐಎಂಡಿ ಶೀತದ ಅಲೆಯ ಮುನ್ನೆಚ್ಚರಿಕೆ ನೀಡಿದೆ.
ಡಿಸೆಂಬರ್ 15ರವರೆಗೆ ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಉತ್ತರ ಪ್ರದೇಶ, ಅಸ್ಸಾಂ, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಪ್ರದೇಶಗಳಲ್ಲಿ ಬೆಳಗ್ಗೆ ದಟ್ಟ ಮಂಜು ಬೀಳಲಿದೆ. ತಾಪಮಾನ ಇಳಿಕೆ ಆಗಿ ಚಳಿ ಏರಲಿದೆ. ಪಂಜಾಬ್ ಮತ್ತು ಹರಿಯಾಣ, ಚಂಡೀಗಢದ ಮೇಲೂ ಇದೇ ರೀತಿಯ ವಾತಾವರಣ ಕಂಡು ಬರಲಿದೆ ಎಂದು ಐಎಂಡಿ ತಿಳಿಸಿದೆ.
ಕಾರವಾರದಲ್ಲಿ ಅತ್ಯಧಿಕ ಬಿಸಿಲು
ಕರ್ನಾಟಕದ ಕಾರವಾರದಲ್ಲಿ ಅತ್ಯಧಿಕ ಗರಿಷ್ಠ ತಾಪಮಾನ 35.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದ ಈ ಭಾಗದಲ್ಲಿ ಬಿಸಿಲು ಹೆಚ್ಚಾಗಿದೆ. ಕಾರವಾರ ಸೇರಿದಂತೆ ಇತರ ಕಡೆಗಳಲ್ಲಿ ಒಣಹವೆ, ಜೊತೆಗೆ ಚಳಿ ಹೆಚ್ಚಲಿದೆ ಎಂದು ತಜ್ಞರು ವರದಿಯಲ್ಲಿ ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications