ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ತಮಿಳುನಾಡಿನ 23 ಜಿಲ್ಲೆಗಳಿಗೆ ಅಲರ್ಟ್
ನವದೆಹಲಿ, ಜುಲೈ 26: ಮಾನ್ಸೂನ್ ಮಾರುತಗಳು ಉತ್ತರ ಕಡೆಗೆ ಬೀಸುತ್ತಿರುವುದರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜುಲೈ 27ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಯಾವುದೇ ರಾಜ್ಯಗಳಿಗೆ ಯೆಲ್ಲೋ ಅಥವಾ ರೆಡ್ ಅಲರ್ಟ್ ಘೋಷಿಸಿಲ್ಲವಾದರೂ, ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಅದು ತಿಳಿಸಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ಗುಜರಾತ್ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ತೆಲಂಗಾಣ, ಕರಾವಳಿ ಆಂಧ್ರಪ್ರದೇಶದಲ್ಲಿ ಜುಲೈ 27 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಜುಲೈ 26 ರಿಂದ 28 ರವರೆಗೆ ಗುಜರಾತ್, ಕೊಂಕಣ, ವಿದರ್ಭ, ಪೂರ್ವ ಮಧ್ಯಪ್ರದೇಶ, ಛತ್ತೀಸ್ಗಢ, ಕರಾವಳಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಪ್ರಮಾಣ ಕಡಿಮೆಯಾದರೂ ರಾಜ್ಯದ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳಿಗೆ ನೀರು ಹರಿದುಬರುತ್ತಿದೆ.

ತಮಿಳುನಾಡಿನ 23 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಪ್ರಾದೇಶಿಕ ಹವಾಮಾನ ಕೇಂದ್ರ (ಆರ್ಎಂಸಿ) ರಾಜ್ಯದ 23 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ಥೇಣಿ, ದಿಂಡುಗಲ್, ಈರೋಡ್, ಕೃಷ್ಣಗಿರಿ, ಧರ್ಮಪುರಿ, ತಿರುಪತ್ತೂರ್, ಸೇಲಂ, ಕಲ್ಲಕುರಿಚಿ, ಕರೂರ್, ನಮಕ್ಕಲ್, ತಿರುಚಿರಾಪಳ್ಳಿ, ಪೆರಂಬಲೂರು, ಮಧುರೈ, ಶಿವಗಂಗಾ, ವಿರುದುನಗರ, ತೆಂಕಾಸಿ, ರಾಮನಾಥಪುರಂ, ತೂತುಕುಡಿ, ತಿರುನೆಲ್ವೇಲಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾತ್ತದೆ ಎಂದು ಹೇಳಿದೆ.

ಉತ್ತರ ಭಾರತದ ಹಲವೆಡೆ ವ್ಯಾಪಕ ಮಳೆ
ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 27ರವೆರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಛತ್ತೀಸ್ಗಢ, ವಿದರ್ಭ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ, ಪಶ್ಚಿಮ ರಾಜಸ್ಥಾನ, ಪೂರ್ವ ರಾಜಸ್ಥಾನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಹೇಳಿದೆ.

ಕೇರಳ, ಗೋವಾ ರಾಜ್ಯದ ಕರಾವಳಿಯಲ್ಲಿ ಮಳೆ
ಕೇರಳ ಮತ್ತು ಗೋವಾ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಆಗಲಿದೆ.
ಮುಂದಿನ ಐದು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯೊಂದಿಗೆ ಲಘು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications