Get Updates
Get notified of breaking news, exclusive insights, and must-see stories!

IMD Rain Alert: ಸೆ.24ರವರೆಗೆ ಈ ರಾಜ್ಯಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಮಾನ್ಸೂನ್‌ ಮಾರುತಗಳ ಪರಿಚಲನೆಯಿಂದಾಗಿ ಹಲವೆಡೆ ಧಾರಾಕಾರ ಮಳೆ ವರದಿಯಾಗಿದೆ. ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲಿ 11 ಸೆಂ.ಮೀವರೆಗೆ ಭಾರೀ ಮಳೆಯಾಗಿದೆ. ತಮಿಳುನಾಡು, ರಾಯಲಸೀಮಾ, ತೆಲಂಗಾಣ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಭಾಗಗಳಲ್ಲಿ ಸೆಪ್ಟೆಂಬರ್ 23ರಿಂದ 25 ರವರೆಗೆ ಭಾರೀ ಮಳೆಯಾಗಲಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ 20ರಂದು ಒಳನಾಡಿನಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಬಲವಾದ ಮೇಲ್ಮೈ ಗಾಳಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ.

ದಕ್ಷಿಣ ಭಾರತದ ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂ, ತೆಲಂಗಾಣ, ರಾಯಲಸೀಮಾ, ಕರಾವಳಿ ಕರ್ನಾಟಕ, ಉತ್ತರ ಆಂತರಿಕ ಕರ್ನಾಟಕ, ದಕ್ಷಿಣ ಆಂತರಿಕ ಕರ್ನಾಟಕ, ಕೇರಳ ಮತ್ತು ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಲಕ್ಷದ್ವೀಪ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮನ್ಸೂಚನೆ ನೀಡಿದೆ.

imd-rain-alert-heavy-rain-thunderstorm-karnataka-south-states-till-sept-24

ನೈರುತ್ಯ ಮಾನ್ಸೂನ್ ಹಿಂತೆಗೆದುಕೊಳ್ಳುವ ರೇಖೆಯು ಫತೇಹಾಬಾದ್, ಪಿಲಾನಿ, ಅಜ್ಮೀರ್, ದೀಸಾ, ಭುಜ್ ಮೂಲಕ ಹಾದುಹೋಗುತ್ತಿದೆ. ಮುಂದಿನ 3-4 ದಿನಗಳಲ್ಲಿ ಗುಜರಾತ್, ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್‌ನ ಕೆಲವು ಭಾಗಗಳು, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಿಂದ ನೈರುತ್ಯ ಮಾನ್ಸೂನ್ ಹಿಂತೆಗೆದುಕೊಳ್ಳಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮಹಾರಾಷ್ಟ್ರದ ಕೆಲವೆಡೆ 21 ಸೆಂ.ಮೀಗಿಂತಲೂ ಅತಿ ಹೆಚ್ಚು ಮಳೆಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ, ಹಿಮಾಚಲ ಪ್ರದೇಶ, ಪೂರ್ವ ರಾಜಸ್ಥಾನ, ಕೊಂಕಣ ಮತ್ತು ಗೋವಾ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ 20 ಸೆಂ.ಮೀವರೆಗೆ ಮಳೆ ವರದಿಯಾಗಿದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಪೂರ್ವ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಛತ್ತೀಸ್‌ಗಢ, ರಾಯಲಸೀಮಾ ಭಾಗಗಳಲ್ಲಿ ಮಳೆ ಸುರಿದಿದೆ.

ಮೀನುಗಾರರಿಗೆ ವಾರ್ನಿಂಗ್‌

ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಸೆಪ್ಟೆಂಬರ್ 24ರವರೆಗೆ ಮೀನುಗಾರರು ಅರೇಬಿಯನ್ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪಶ್ಚಿಮ ಮಧ್ಯ, ನೈಋತ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಸೊಮಾಲಿಯಾ ಕರಾವಳಿಯುದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 20ರಿಂದ 24ರವರೆಗೆ ದಕ್ಷಿಣ ಶ್ರೀಲಂಕಾ ಕರಾವಳಿಯುದ್ದಕ್ಕೂ ಮತ್ತು ಹೊರಗೆ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಹೊಂದಿಕೊಂಡಂತೆ, ಶ್ರೀಲಂಕಾ ಕರಾವಳಿಯುದ್ದಕ್ಕೂ ಮತ್ತು ಹೊರಗೆ, ದಕ್ಷಿಣ ಬಂಗಾಳ ಕೊಲ್ಲಿಯ ಹೆಚ್ಚಿನ ಭಾಗಗಳು, ಮಧ್ಯದ ದಕ್ಷಿಣ ಭಾಗಗಳು, ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಕೊಮೊರಿನ್ ಪ್ರದೇಶ, ಅಂಡಮಾನ್ ಸಮುದ್ರದ ಭಾಗಗಳಲ್ಲಿ ಯಾವುದೇ ಮೀನುಗಾರಿಕೆ ಮಾಡದಂತೆ ಅಲರ್ಟ್‌ ಘೋಷಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+